OTT ವೇದಿಕೆಗಳಿಂದ ತಾರತಮ್ಯ ಎಚ್ಚೆತ್ತುಕೊಳ್ಳಬೇಕಿದೆ ಚಿತ್ರರಂಗ


Team Udayavani, Nov 29, 2023, 12:21 AM IST

OTT

ಕಳೆದ ಕೆಲವು ವರ್ಷಗಳಿಂದೀಚೆಗೆ ಜನಪ್ರಿಯವಾಗುತ್ತಿರುವ ಒಟಿಟಿ ಆನ್‌ಲೈನ್‌ ಪ್ಲಾಟ್‌ಫಾರ್ಮ್ ಕನ್ನಡ ಸಿನಿಮಾಗಳನ್ನು ನಿರಾಕರಿಸುತ್ತಿರುವ ಬಗೆಗೆ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸುವ ಮೂಲಕ ತಂತ್ರಜ್ಞಾನ ವೇದಿಕೆಗಳ ತಾರತಮ್ಯ ಧೋರಣೆಗೆ ಮತ್ತೂಮ್ಮೆ ಕನ್ನಡಿ ಹಿಡಿದಿದ್ದಾರೆ. ಗೋವಾದ ಪಣಜಿಯಲ್ಲಿ ನಡೆದ 54ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ದಿನ ದಲ್ಲಿ ಪಾಲ್ಗೊಂಡಿದ್ದ ರಿಷಬ್‌ ಶೆಟ್ಟಿ ಮಾತನಾಡಿ, ಒಟಿಟಿ ವೇದಿಕೆಗಳು ಅನುಸರಿಸುತ್ತಿರುವ ಇಬ್ಬಗೆಯ ನೀತಿಯ ಕುರಿತಂತೆ ಚಿತ್ರ ಜಗತ್ತಿನ ಗಮನ ಸೆಳೆದುದು ಒಂದಿಷ್ಟು ಚರ್ಚೆಗೆ ಗ್ರಾಸವಾಗಿದೆ.

ಬಹುತೇಕ ಒಟಿಟಿ ಪ್ಲಾಟ್‌ಫಾರ್ಮ್ ಗಳು ಟೆಕ್‌ ದಿಗ್ಗಜ ಕಂಪನಿ ಗಳ ಹಿಡಿತ ದಲ್ಲಿರುವು ದ ರಿಂದ ಇವುಗಳಿಗೆ ಹಣಗಳಿಕೆ ಯೊಂದೇ ಪ್ರಧಾನವಾಗಿದೆ. ಇದ ಕ್ಕಾಗಿ ಚಂದಾದಾರರ ಕೊರತೆ, ಮಾರುಕಟ್ಟೆ ಇಲ್ಲ ಎಂಬ ನೆಪಗಳನ್ನು ಮುಂದೊಡ್ಡಿ ಕನ್ನಡ ಸಹಿತ ಇತರ ಕೆಲವೊಂದು ಭಾಷೆಯ ಸಿನಿಮಾ ಗಳನ್ನು ಖರೀದಿಸಲು ಒಟಿಟಿ ವೇದಿಕೆಗಳು ಮುಂದಾಗುತ್ತಿಲ್ಲ. ಥಿಯೇಟರ್‌ಗಳಲ್ಲಿ ಕಡಿಮೆ ಮಾನ್ಯತೆ ಪಡೆದಿರುವ ಸಿನಿಮಾ ಗಳತ್ತ ಒಟಿಟಿ ವೇದಿಕೆಗಳು ತಲೆ ಹಾಕುತ್ತಿಲ್ಲ. ಸಿನಿಮಾ ಮಾಲ್‌ಗ‌ಳು, ಒಟಿಟಿ ಬಂದ ಬಳಿಕ ಸಣ್ಣ ಪುಟ್ಟ ಥಿಯೇಟರ್‌ಗಳು ಬಾಗಿಲು ಮುಚ್ಚಿವೆ. ಇದರಿಂದಾಗಿ ಸಣ್ಣ ಬಜೆಟ್‌ನ ಚಿತ್ರಗಳ ಪ್ರದರ್ಶನಕ್ಕೆ ಅವಕಾಶವೇ ಇಲ್ಲದಂತಾಗಿದೆ. ಇಂತಹ ಸಿನೆಮಾಗಳ ನಿರ್ಮಾಪಕರು ಇವು ಗಳನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಆಸಕ್ತಿ ತೋರಿದರೂ ಯಾವೊಂದೂ ಒಟಿಟಿ ವೇದಿಕೆಗಳು ಈ ಚಿತ್ರಗಳನ್ನು ಖರೀದಿಸಲು ಮುಂದಾಗುತ್ತಿಲ್ಲ. ಯಾವು ದೋ ಒಂದು ಚಲನಚಿತ್ರ ಖರೀದಿಸಿ ನಷ್ಟ ಅನುಭವಿಸಿದೆವು ಎಂಬ ಕಾರಣ ಮುಂದೊಡ್ಡಿ ಒಟಿಟಿ ಪ್ಲಾಟ್‌ಫಾರ್ಮ್ ಗಳು ಕಡಿಮೆ ಬಜೆಟ್‌ನ ಸಿನಿಮಾಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ.

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಕಡಿಮೆ ಬಜೆಟ್‌ನಲ್ಲಿ ತಯಾರಾದ ಸಿನೆಮಾಗಳು ಪ್ರೇಕ್ಷಕರ ಮನಗೆದ್ದು, ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಸ್ಥಾಪಿಸಿವೆ. ವಾಸ್ತವ ಪರಿಸ್ಥಿತಿ ಹೀಗಿದ್ದರೂ ಒಟಿಟಿ ವೇದಿಕೆಗಳು ಕನ್ನಡ ಸಿನಿಮಾ ಗಳನ್ನು ನಿರಾಕರಿಸುತ್ತಿರುವುದು ತೀರಾ ವಿಪರ್ಯಾಸ. ಸದ್ಯ ಕೆಲವು ನಿರ್ಮಾ ಪಕರು ಒಟಿಟಿಗೆಂದೇ ಚಿತ್ರಗಳನ್ನು ನಿರ್ಮಿಸಲು ಆಸಕ್ತಿ ತೋರತೊಡಗಿದ್ದಾರೆ. ಆದರೆ ಒಟಿಟಿ ವೇದಿಕೆಗಳು ಮಾತ್ರ ಕುಂಟು ನೆಪಗಳನ್ನು ಮುಂದೊಡ್ಡಿ ಅವುಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿರುವುದು ಚಿತ್ರರಂಗಕ್ಕೆ ಬಲುದೊಡ್ಡ ಹಿನ್ನಡೆಯೇ ಸರಿ.

ರಿಷಬ್‌ ಶೆಟ್ಟಿ ಅವರು ಇಫಿ ಚಿತ್ರೋತ್ಸವ ತಾಣದಿಂದಲೇ ಒಟಿಟಿಯ ತಾರತಮ್ಯ ಧೋರಣೆಯ ಬಗೆಗೆ ಸಿನಿಮಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳ ಗಮನ ಸೆಳೆದದ್ದೇ ಅಲ್ಲದೆ ಇತ್ತ ತತ್‌ಕ್ಷಣ ಗಮನಹರಿಸಿ ಎಲ್ಲ ಭಾಷೆಗಳ ಚಿತ್ರಗಳಿಗೂ ಒಟಿಟಿ ವೇದಿಕೆಗಳಲ್ಲಿ ಮತ್ತು ಚಲನ ಚಿತ್ರೋತ್ಸವಗಳಲ್ಲಿ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹ ಮುಂದಿ ಟ್ಟಿರುವುದು ಉತ್ತಮ ಬೆಳವಣಿಗೆ. ಇತ್ತ ಚಿತ್ರರಂಗ ಮಾತ್ರವಲ್ಲದೆ ಕೇಂದ್ರ ಸರಕಾರ ಕೂಡ ತುರ್ತು ಗಮನಹರಿಸಿ ಕೇವಲ ಕನ್ನಡ ಸಹಿತ ಎಲ್ಲ ಭಾಷೆಗಳ ಚಲನ ಚಿತ್ರಗಳಿಗೂ ಒಟಿಟಿ ವೇದಿಕೆಗಳಲ್ಲಿ ಅವಕಾಶ ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಆ ಮೂಲಕ ಚಿತ್ರದ ಪ್ರದರ್ಶನಕ್ಕೂ ಮುನ್ನ ಅದರ ಹಣೆಬರಹ ಬರೆಯುವ ಒಟಿಟಿ ವೇದಿಕೆಗಳ ದಾಷ್ಟéìಕ್ಕೆ ಕಡಿವಾಣ ಹಾಕಬೇಕಿದೆ.

 

ಟಾಪ್ ನ್ಯೂಸ್

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.