Bihar: ಬಿಹಾರದಲ್ಲಿ ಈಗ ರಜೆ ವಿವಾದ
Team Udayavani, Nov 29, 2023, 12:53 AM IST
ಪಾಟ್ನಾ:ಬಿಹಾರದಲ್ಲಿ ಮುಂದಿನ ವರ್ಷದ ರಜೆಗಳ ಪಟ್ಟಿಯಲ್ಲಿ ಹಿಂದೂಗಳ ಹಬ್ಬಕ್ಕೆ ರಜೆ ಕಡಿತಗೊಳಿಸಿ, ಮುಸ್ಲಿಂ ಉತ್ಸವಗಳಿಗೆ ಹೆಚ್ಚಿನ ರಜೆ ನೀಡಲಾಗಿದೆ ಎಂಬ ವಿಚಾರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಇಂಥ ಕ್ರಮ ಕೈಗೊಳ್ಳುವ ಮೂಲಕ ಬಿಹಾರದಲ್ಲಿ ಇಸ್ಲಾಮೀಕರಣಗೊಳಿಸಲಾಗುತ್ತಿದೆ ಮತ್ತು ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ತುಷ್ಟೀಕರಣಗೊಳಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಶಿಕ್ಷಣ ಇಲಾಖೆ ಸೋಮವಾರ ಹೊರಡಿಸಿದ್ದ 2024ರ ಪಟ್ಟಿಯ ಪ್ರಕಾರ ಶ್ರೀಕೃಷ್ಣ ಜನ್ಮಾಷ್ಠಮಿ, ರಕ್ಷಾಬಂಧನ, ರಾಮನವಮಿ, ಶಿವರಾತ್ರಿ, ವಸಂತ ಪಂಚಮಿ, ಜೀವಿತಪುತ್ರಿಕಾ ಹಬ್ಬಗಳಿಗೆ ನೀಡಲಾಗುತ್ತಿದ್ದ ರಜೆ ರದ್ದುಗೊಳಿಸಲಾಗಿದೆ. ಮುಸ್ಲಿಂ ಸಮುದಾಯದವರು ಹೆಚ್ಚು ಇರುವ ಸ್ಥಳಗಳಲ್ಲಿ ಶುಕ್ರವಾರ ರಜೆ ನೀಡುವ ಬಗ್ಗೆಯೂ ಸೂಚಿಸಲಾಗಿದೆ. ಗಾಂಧಿಜಯಂತಿಯಂದು ನೀಡಲಾಗುವ ರಜೆ ರದ್ದುಪಡಿಸಲಾಗಿದೆ. ಈ ದುಲ್ ಫಿತರ್ (ರಂಜಾನ್)ಗೆ 3 ದಿನ ರಜೆ ನೀಡಲಾಗಿದೆ.
ಬಿಜೆಪಿ ನಾಯಕರು ಹಿಂದಿ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಮುಂದಿನ ವರ್ಷದ ರಜೆಯ ಪಟ್ಟಿಯ ವರದಿಗಳ ಕ್ಲಿಪ್ಪಿಂಗ್ಗಳನ್ನು ಅಪ್ಲೋಡ್ ಮಾಡಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿªರೆ. ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ವಿಡಿಯೋ ಸಂದೇಶದಲ್ಲಿ “ಬಿಹಾರ ಸಿಎಂ ತುಷ್ಟೀಕರಣದ ಮುಖ್ಯಸ್ಥ. ಸರ್ಕಾರದ ನಿರ್ಧಾರ ಹಿಂದೂ ವಿರೋಧಿ ಧೋರಣೆ ತೋರಿಸುತ್ತದೆ’ ಎಂದು ಬರೆದುಕೊಂಡಿದ್ದಾರೆ. ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ “ಪಟ್ಟಿಯನ್ನು ತಕ್ಷಣ ವಾಪಸ್ ಪಡೆಯಬೇಕು. ಇದು ಹಿಂದೂ ವಿರೋಧಿ ಎಂದಿದ್ದಾರೆ. ಕೇಂದ್ರ ಸಚಿವ ನಿತ್ಯಾನಂದ ರಾಯ್, ಗಿರಿರಾಜ್ ಸಿಂಗ್ ಸೇರಿದಂತೆ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೃಷಿ ಕಾಯ್ದೆ ಹೇಳಿಕೆ ವಾಪಸ್ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್
ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ
Panaji: ಇಲೆಕ್ಟ್ರಿಕ್ ಮೀಟರ್ ಕಳ್ಳತನ ಪ್ರಕರಣ; ಆರೋಪಿ ಬಂಧನ
Siddaramaiah ವಿರುದ್ಧ ಹರಿಯಾಣದಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ
“ದೇಶದ ಯಾವುದೇ ಭಾಗವನ್ನು ಪಾಕ್ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.