ಮಣಿಪುರದ UNLF ನಿಂದ ಕದನ ವಿರಾಮ
Team Udayavani, Nov 29, 2023, 11:37 PM IST
ಹೊಸದಿಲ್ಲಿ: ಮಣಿಪುರದ ಹಳೆಯ ಉಗ್ರ ಸಂಘಟನೆಯಾಗಿರುವ ಯುಎನ್ಎಲ್ಎಫ್ ಕೇಂದ್ರ ಹಾಗೂ ಮಣಿಪುರ ಸರಕಾರಗಳ ಜತೆಗೆ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದೆ. ಮೈತೇಯಿ ಸಮುದಾಯದವರೇ ಯುಎನ್ಎಲ್ಎಫ್ ಸಂಘಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮೇ ತಿಂಗಳಿನಿಂದ ಈಶಾನ್ಯ ರಾಜ್ಯದಲ್ಲಿ ಆರಂಭವಾಗಿದ್ದ ಹಿಂಸಾಚಾರ ಪದೇಪದೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವದ್ದಾಗಿದೆ.
ಮಹತ್ವದ ನಿರ್ಧಾರದ ಬಗ್ಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿಶ್ ಶಾ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಉಗ್ರ ಸಂಘಟನೆ ಮತ್ತು ಭದ್ರತಾ ಪಡೆಗಳ ನಡುವಿನ ವೈಷಮ್ಯವನ್ನು ಮುಕ್ತಾಯಗೊಳಿಸಲು ನೆರವಾಗಲಿದೆ. ಈಶಾನ್ಯ ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಮೋದಿ ಸರಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ. ಇದರಿಂದಾಗಿ ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ನೆರವಾಗಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಅಮಿತ್ ಶಾ ಹೇಳಿಕೆಯನ್ನು ಕಾಂಗ್ರೆಸ್ ಟೀಕಿಸಿದ್ದು, ಪ್ರಧಾನಿ ಮೋದಿಯವರು ಈ ಮೊದಲೇ ಭೇಟಿ ನೀಡಿದ್ದರೆ ಶಾಂತಿ ಸ್ಥಾಪನೆಯಾಗುತ್ತಿತ್ತು ಎಂದು ಹೇಳಿದೆ.
ಮಣಿಪುರದಲ್ಲಿ ಗುಡ್ಡಗಾಡು ಕಣಿವೆಗಳನ್ನು ಕೇಂದ್ರವನ್ನಾಗಿ ಇರಿಸಿಕೊಂಡು ಉಗ್ರ ಕೃತ್ಯಗಳನ್ನು ನಡೆಸುತ್ತಿದ್ದ ಕುಖ್ಯಾತಿಗೆ ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್ ಪಾತ್ರವಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಅದರ ವಿರುದ್ಧ ಇದ್ದ ನಿಷೇಧವನ್ನು ಐದು ವರ್ಷಗಳ ಕಾಲ ವಿಸ್ತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.