Digital: ಡಿಜಿಟಲ್‌ ಕ್ಷೇತ್ರದಲ್ಲಿನ ಅಂತರ ಕಡಿಮೆಯಾಗಲಿ- ಸಿಎಂ ಸಿದ್ದರಾಮಯ್ಯ

ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ ಚಾಲನೆ

Team Udayavani, Nov 29, 2023, 11:59 PM IST

digi siddar

ಬೆಂಗಳೂರು: ತಂತ್ರಜ್ಞಾನದ ಸೌಲಭ್ಯಗಳು ಪ್ರತೀ ನಾಗರಿಕರನ್ನೂ ತಲುಪಲು ಡಿಜಿಟಲ್‌ ಕ್ಷೇತ್ರದಲ್ಲಿನ ಅಂತರವನ್ನು ಕಡಿಮೆ ಮಾಡಬೇಕಿದೆ. ಇದಕ್ಕಾಗಿ ದತ್ತಾಂಶ (ಡಾಟಾ) ಮತ್ತು ವಿಶ್ಲೇಷಣೆ (ಅನಾಲಿಟಿಕ್ಸ್‌) ಬಳಸಿಕೊಂಡು ಆಡಳಿತದಲ್ಲಿ ಮಾಹಿತಿ ಯುಕ್ತ ಅಭಿಯಾನ ಕೈಗೊಳ್ಳಲಾ ಗುತ್ತದೆ. ಮುಂದಿನ ಹಂತದ ತಂತ್ರಜ್ಞಾನ ನಾವೀನ್ಯತೆಯ ಬೆಳವ‌ಣಿಗೆಗೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಹೂಡಿಕೆಗಳನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಬ್ರೇಕಿಂಗ್‌ ಬೌಂಡರೀಸ್‌ ಎನ್ನುವ ಘೋಷವಾಕ್ಯದೊಂದಿಗೆ ಬುಧವಾರ ದಿಂದ ಆರಂಭಗೊಂಡಿರುವ 26ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್‌)ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉದ್ಘಾಟನೆಯ ಭಾಗವಾಗಿ ಸರಕಾರದ ಎವಿಜಿಸಿ ಕರಡು ಮುನ್ನೋಟ ಮತ್ತು ಜೈವಿಕ ತಂತ್ರಜ್ಞಾನ ಕಾರ್ಯ ನೀತಿಯ ಪರಿಷ್ಕೃತ ಕರಡನ್ನು ಬಿಡುಗಡೆಗೊಳಿಸಲಾಯಿತು.
ಮಾಹಿತಿ ತಂತ್ರಜ್ಞಾನ ಮತ್ತು ಅದಕ್ಕೆ ಸಂಬಂಧಿಸಿದ ಒಟ್ಟು 5,500ಕ್ಕೂ ಹೆಚ್ಚಿನ ಕಂಪೆನಿಗಳಿಗೆ ಕರ್ನಾಟಕವು ನೆಲೆಯಾಗಿದೆ. ಅಲ್ಲದೆ ಅಂದಾಜು 750 ಬಹುರಾಷ್ಟ್ರೀಯ ಕಂಪೆನಿಗಳು ಇಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ದೇಶದ ರಫ್ತಿಗೆ ರಾಜ್ಯದ ಐಟಿ ವಲಯದ ಕೊಡುಗೆಯು 85 ಬಿಲಿಯನ್‌ ಡಾಲರ್‌ನಷ್ಟಿದೆ. ಡಿಜಿಟಲ್‌ ಕೌಶಲ ಹೊಂದಿರುವ ಪ್ರತಿಭಾವಂತರ ದಂಡು, ಹೊಸತನ ಹಾಗೂ ನವೋದ್ಯಮಗಳಿಗೆ ಪೂರಕವಾಗಿರುವ ವಾತಾವರಣ ಮತ್ತು ಸರಕಾರದ ಕಾರ್ಯನೀತಿಗಳು ಇದಕ್ಕೆ ಅನುಕೂಲಕರವಾಗಿವೆ ಎಂದು ವಿವರಿಸಿದರು.

ಉದ್ಯಮಕ್ಕೆ ಅನುಕೂಲಕರವಾದ ನಮ್ಮ ಕಾರ್ಯನೀತಿಗಳು ಇಲ್ಲಿನ ಕಾನೂನು ಪ್ರಕ್ರಿಯೆಗಳನ್ನು ಸರಳೀಕರಿಸುವ ವಿಚಾರದಲ್ಲಿ ನಾವು ಹೊಂದಿರುವ ಬದ್ಧತೆಯನ್ನು ತೋರಿಸುತ್ತಿವೆ. ಪ್ರಮಾಣಪತ್ರ ಆಧಾರಿತ ಅನುಮೋದನ ವ್ಯವಸ್ಥೆಯಿಂದ ಆರಂಭಿಸಿ ಜಮೀನು ಪಡೆಯುವ ಪ್ರಕ್ರಿಯೆಯಲ್ಲಿ ಸುಧಾರಣೆಯನ್ನು ತರುವಲ್ಲಿಯವರೆಗೆ ನಾವು ಕೈಗೊಂಡಿ ರುವ ಪ್ರತಿಯೊಂದು ಕ್ರಮ ಕೂಡ ಕೈಗಾರಿಕಾ ಸ್ನೇಹಿ ವಾತಾವರಣವನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದೆ ಎಂದು ಸಿಎಂ ಹೇಳಿದರು.

ಹೊಸತನ, ಬೆಳವಣಿಗೆಗೆ ಕರ್ನಾಟಕ ಹೆಸರುವಾಸಿ
ಜೈವಿಕ ತಂತ್ರಜ್ಞಾನ ಕುರಿತ ಕರಡು ನೀತಿ ಬಿಡುಗಡೆಗೊಳಿಸಿ ಮಾತನಾಡಿದ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್‌, ಕರ್ನಾಟಕವು ಹೊಸತನ ಮತ್ತು ಬೆಳವಣಿಗೆಗೆ ಹೆಸರಾಗಿದೆ. ಸುಲಲಿತ ವಾಣಿಜ್ಯ-ವಹಿವಾಟು ಸೂಚ್ಯಂಕದಲ್ಲಿ ಕರ್ನಾಟಕವು ಮುಂಚೂಣಿ ಸ್ಥಾನ ದಲ್ಲಿದೆ. ಹಲವು ಸುಧಾರಣೆಗಳನ್ನು ಜಾರಿಗೆ ತಂದ ಪರಿಣಾಮವಾಗಿ ಇದು ಸಾಧ್ಯವಾಗಿದೆ. ದೇಶದ ಐಟಿ ರಫ್ತಿನಲ್ಲಿ ಕರ್ನಾಟಕದ ಪಾಲು ಶೇ. 40ರಷ್ಟು ಇದೆ ಎಂದರು.

ಎಎಂಡಿ ಸಂಸ್ಥೆಯ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ಮಾರ್ಕ್‌ ಪೇಪರ್‌ ಮಾಸ್ಟರ್‌, ವಿಪ್ರೋ ಸಂಸ್ಥೆಯ ಅಧ್ಯಕ್ಷ ರಿಷದ್‌ ಪ್ರೇಮ್‌ಜಿ, ಕಿರಣ್‌ ಮಜುಂದಾರ್‌ ಶಾ, ಸ್ಟಾರ್ಟ್‌ ಅಪ್‌ ವಿಷನ್‌ ಗ್ರೂಪ್‌ ಅಧ್ಯಕ್ಷ ಪ್ರಶಾಂತ್‌ ಪ್ರಕಾಶ್‌ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಐಟಿ ಕಾರ್ಯದರ್ಶಿ ಏಕ್‌ ರೂಪ್‌ ಕೌರ್‌, ಐಟಿ ನಿರ್ದೇಶಕ ದರ್ಶನ್‌ ಮತ್ತಿತರರು ಇದ್ದರು.

ಸಿಎಸ್‌ಆರ್‌ ನಿಧಿಗೆ ಡಿಸಿಎಂ ಮನವಿ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿ, ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಿದರೆ ಈ ಭಾಗದ ಮಕ್ಕಳು ಕೂಡ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ನೆರವಾಗುತ್ತದೆ. ಉದ್ಯಮಿಗಳು, ಬಂಡವಾಳ ಹೂಡಿಕೆದಾರರು ಆರ್ಥಿಕವಾಗಿ ಸದೃಢರಾದರೆ, ಸರಕಾರವೂ ಆರ್ಥಿಕವಾಗಿ ಬಲಿಷ್ಠವಾಗುತ್ತದೆ. ನಮ್ಮ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ತರಲು ಪ್ರಯತ್ನಿಸುತ್ತಿದ್ದೇವೆ. ಗ್ರಾಮೀಣ ಶಾಲೆಗಳ ಗುಣಮಟ್ಟ ಸುಧಾರಿಸಲು ಸಿಎಸ್‌ಆರ್‌ ನಿಧಿ ಮೀಸಲಿಡಬೇಕು. ಈಗಾಗಲೇ ಪ್ರೇಮ್‌ ಜಿ ಸೇರಿ ಹಲವು ಉದ್ಯಮಿಗಳೊಂದಿಗೆ ಚರ್ಚಿಸಿದ್ದು, 2 ಸಾವಿರ ಕೋಟಿ ರೂ.ಗಳನ್ನು ನೀಡಲು ಮುಂದಾಗಿದ್ದಾರೆ ಎಂದು ತಿಳಿಸಿದರು.

ತಂತ್ರಜ್ಞಾನ ಉದ್ಯಮಗಳ ಬೆಳವಣಿಗೆಗೆ ಪೂರಕವಾದ ಕಾರ್ಯಪರಿಸರ ಉಂಟುಮಾಡಲು ಸರಕಾರವು ಆದ್ಯತೆ ಮುಂದುವರಿಸಲಿದೆ. ನವೋದ್ಯಮಿಗಳು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳಿಗೆ ಅಗತ್ಯ ನೆರವು ನೀಡಲಾಗುತ್ತದೆ. ಕೌಶಲ್ಯಾಭಿವೃದ್ಧಿ ಮೂಲಕ ಕಾರ್ಯಶಕ್ತಿಯನ್ನು ಹೆಚ್ಚಿಸಲಾಗುತ್ತದೆ. ಈಗಾಗಲೇ ಬಿಡುಗಡೆ ಮಾಡಿರುವ ಕರಡು ನೀತಿಗಳು ಎವಿಜಿಸಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರವನ್ನು ಮತ್ತಷ್ಟು ವಿಸ್ತಾರಗೊಳಿಸುವ ಭರವಸೆ ಇದೆ.
– ಪ್ರಿಯಾಂಕ್‌ ಖರ್ಗೆ, ಐಟಿ-ಬಿಟಿ ಸಚಿವ

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.