Puttur ಅಮಲು ಪದಾರ್ಥ ನೀಡಿ ಮಹಿಳೆಯ ಅತ್ಯಾಚಾರ: ಆರೋಪಿ ಯುವಕನ ಸೆರೆ
Team Udayavani, Nov 30, 2023, 12:07 AM IST
ಪುತ್ತೂರು: ನಗರದ ಬಸ್ ನಿಲ್ದಾಣದಲ್ಲಿ ರಾತ್ರಿ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಗೆೆ ಅಮಲು ಬೆರೆಸಿದ ಪಾನೀಯ ನೀಡಿ ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬಿಟ್ಟು ಹೋದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಆರ್ಯಾಪು ಗ್ರಾಮದ ನಿವಾಸಿ, ಪ್ರಸ್ತುತ ಬನ್ನೂರು ಗ್ರಾಮದಲ್ಲಿ ವಾಸವಾಗಿರುವ ಸಂಶುದ್ದೀನ್ ಆಸ್ಗರ್ ಆಲಿ (23) ಬಂಧಿತ ಆರೋಪಿ. ಹಾಸನ ತಾಲೂಕಿನ ಚೆನ್ನರಾಯಪಟ್ಟಣದ ನಿವಾಸಿ ಸಂತ್ರಸ್ತೆ ಮಹಿಳೆ.
ಸಂತ್ರಸ್ತೆ ಮಹಿಳೆಯು ಆರ್ಯಾಪು ಪರಿಸರದಲ್ಲಿ ಮನೆಯೊಂದರಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿರುವ ಮಾಹಿತಿ ಇದ್ದು ತನ್ನೂರಿಗೆ ತೆರಳಿ ಪುತ್ತೂರಿಗೆ ಮರಳಿ ಬರುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.
ನ. 24ರಂದು ರಾತ್ರಿ ನಗರದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಅಪರಿಚಿತ ವ್ಯಕ್ತಿ ಅಮಲು ಬೆರೆಸಿದ ಪಾನೀಯ ನೀಡಿದ್ದಾನೆ. ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕೃತ್ಯದ ಬಳಿಕ ಅಲ್ಲೇ ಪಕ್ಕದಲ್ಲೆ ಬಿಟ್ಟು ಹೋಗಿದ್ದ ಎಂದು ಮಹಿಳೆ ಆರೋಪಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನ. 28ರಂದು ಸಂಜೆ ಪುತ್ತೂರು ಬಸ್ ನಿಲ್ದಾಣದ ಬಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.