Foreign ವ್ಯವಹಾರ ನಿಪುಣ: ಹೆನ್ರಿ ಕಿಸಿಂಜರ್‌


Team Udayavani, Dec 1, 2023, 6:00 AM IST

1-sadsadsa

ಅಮೆರಿಕ ರಾಜಕಾರಣದಲ್ಲಿ ಮಾತ್ರವಲ್ಲ, ಸಮಕಾಲೀನ ವಿದೇಶಾಂಗ ವ್ಯವಹಾರಗಳ ವಲಯದಲ್ಲಿ  ಹೆನ್ರಿ ಕಿಸಿಂಜರ್‌ ಅವರದ್ದು ಬಹುದೊಡ್ಡ ಹೆಸರು. ಸತತ ಎಂಟು ವರ್ಷಗಳ ಕಾಲ ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಾಗಿ, ಅದಕ್ಕೂ ಮುನ್ನ ವಿದೇಶಾಂಗ ಇಲಾಖೆ ಸಲಹೆಗಾರರಾಗಿ ಕೆಲಸ ಮಾಡಿದ ಕಿಸಿಂಜರ್‌, ಡೆಮಾಕ್ರೆಟಿಕ್‌ ಮತ್ತು ರಿಪಬ್ಲಿಕನ್‌ ಪಕ್ಷದ ಸರಕಾರಗಳಿಗೂ ಖಾಯಂ ಸಲಹೆಗಾರರಾಗಿದ್ದರು.

ಅಮೆರಿಕದ ಇತಿಹಾಸದಲ್ಲಿ ಅಲ್ಲಿನ ಅಧ್ಯಕ್ಷರಷ್ಟೇ ಪ್ರಸಿದ್ಧಿ ಪಡೆದವರೆಂದರೆ ಅದು ಕಿಸಿಂಜರ್‌ ಅವರೇ ಇರಬೇಕು. ಒಂದೆಡೆ ಯುದ್ಧದಾಹಿ ಎಂಬ ಹೆಸರು ಪಡೆದಿರುವಂತೆಯೇ, ಇನ್ನೊಂದೆಡೆ ನೊಬೆಲ್‌ ಶಾಂತಿ ಪ್ರಶಸ್ತಿಯನ್ನೂ ಗಿಟ್ಟಿಸಿಕೊಂಡವರು. ಅವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ ಘೋಷಿಸಿದಾಗ, ಅದನ್ನು ವಿರೋಧಿಸಿ ನೊಬೆಲ್‌ ಸಮಿತಿಯ ಇಬ್ಬರು ರಾಜೀನಾಮೆ ಸಲ್ಲಿಸಿದ್ದರು. ಆದರೆ ಕಾಂಬೋಡಿಯಾ ದೇಶದ ಆಂತರಿಕ ಕದನ ಮತ್ತು ಅದರ ಮೇಲಿನ ಬಾಂಬ್‌ ದಾಳಿಗೂ ಇವರೇ ಕಾರಣ ಎಂಬ ಮಾತುಗಳೂ ಇವೆ. ಅಲ್ಲದೆ ಅಮೆರಿಕದ ಸುದೀರ್ಘ‌ ಕಾಲದ ವಿಯೆಟ್ನಾಂ ಕದನಕ್ಕೆ ಇತಿಶ್ರೀ ಹಾಡಿ ಅಮೆರಿಕದ ಮುಖ ಉಳಿಸಿದವರು. ಯುದ್ಧವನ್ನು ದೀರ್ಘ‌ಕಾಲ ನಡೆಸಲು ಬಿಟ್ಟು ಸಾವಿರಾರು ಮಂದಿ ಬದುಕಿಗೆ ಎರವಾದ ಆರೋಪದಲ್ಲಿ ಇವರ ವಿರುದ್ಧ ಯುದ್ಧಾಪರಾಧದ ಬಗ್ಗೆ ತನಿಖೆ ನಡೆಸಬೇಕಿತ್ತು ಎಂಬ ಮಾತುಗಳೂ ಕೇಳಿಬಂದಿದ್ದವು.

ಕಿಸಿಂಜರ್‌ ಅಮೆರಿಕ ಅಧ್ಯಕ್ಷರಾದ ರಿಚರ್ಡ್‌ ನಿಕ್ಸನ್‌ ಮತ್ತು ಗೆರಾಲ್ಡ್‌ ಫೋರ್ಡ್‌ ಅಧ್ಯಕ್ಷರಾಗಿದ್ದ ಕಾಲದಲ್ಲಿ ವಿದೇಶಾಂಗ ಸಚಿವರಾಗಿದ್ದರು.   ಇವರ ಬಗ್ಗೆ ತೀರಾ ವಿಶೇಷವೆನ್ನಿಸುವ ಸಂಗತಿಗಳಿವೆ. ಕಿಸಿಂಜರ್‌ ಅವರನ್ನು “ಶಟಲ್‌ ಡಿಪ್ಲೋಮಸಿ’ಯ ವಿದೇಶಾಂಗ ಸಚಿವ ಎಂದೇ ಕರೆಯಲಾಗುತ್ತಿತ್ತು. ಇದಕ್ಕೆ ಕಾರಣಗಳೂ ಇವೆ. ಮಧ್ಯಪ್ರಾಚ್ಯ ದೇಶಗಳಲ್ಲಿನ ಅಶಾಂತಿ ನಿಲ್ಲಿಸುವ ಕಾರಣದಿಂದ ರಹಸ್ಯವಾಗಿ ಹಲವಾರು ನಾಯಕರನ್ನು ಭೇಟಿ ಮಾಡಿ ಅವರ ಮನವೊಲಿಕೆ ಮಾಡಿದ್ದರು. ಅಷ್ಟೇ ಅಲ್ಲ, ರಷ್ಯಾದೊಂದಿಗಿನ ಶೀತಲ ಸಮರಕ್ಕೆ ಹೊಸ ಆಯಾಮ ನೀಡಿದ ಇವರು, ಕಾಲದಲ್ಲಿ ಅಮೆರಿಕ ಮತ್ತು ಚೀನ ನಡುವಿನ ಸಂಬಂಧ ಸುಧಾರಣೆಗೆ ಆದ್ಯತೆ ನೀಡಿದ್ದರು. ಅಮೆರಿಕದ ವಾಟರ್‌ಗೇಟ್‌ ಹಗರಣದ ವೇಳೆ ನಿಕ್ಸನ್‌ ಬದಲಿಗೆ ಅರೆ ಅಧ್ಯಕ್ಷೀಯ ಜವಾಬ್ದಾರಿಯನ್ನೂ ಹೊಂದಿದ್ದರು.

1970ರ ಪಾಕಿಸ್ಥಾನ ಯುದ್ಧದ ವೇಳೆಯಲ್ಲಿ ಪಾಕಿಸ್ಥಾನವನ್ನು ಬೆಂಬಲಿಸಿದ ಇವರು, ಭಾರತ ವಿರೋಧಿ ಭಾವನೆ ಹೊಂದಿದ್ದರಲ್ಲದೆ, ಒಂದು ಹಂತದಲ್ಲಿ  ಭಾರತೀಯರ ಬಗ್ಗೆ ಕೆಟ್ಟದ್ದಾಗಿ ಮಾತನಾಡಿ ವಿವಾದಕ್ಕೀಡಾಗಿದ್ದರು. 2014ರಲ್ಲಿ ಮೋದಿ ಪ್ರಧಾನಿಯಾದ ಮೇಲೆ ಅಮೆರಿಕ ಮತ್ತು ಭಾರತದ ಸಂಬಂಧ ಹೆಚ್ಚು ಸುಧಾರಣೆಯಾಗಬೇಕು ಎಂದು ಹೇಳುತ್ತಿದ್ದರು. ಇತ್ತೀಚೆಗಷ್ಟೇ ಮೋದಿಯವರು ಅಮೆರಿಕದ ಆತಿಥ್ಯದ ಮೇಲೆ ಹೋಗಿದ್ದಾಗ, ಪ್ರಧಾನಿ ಭಾಷಣ ಕೇಳಲೆಂದೇ ವೈಟ್‌ಹೌಸ್‌ಗೆ ಹೋಗಿದ್ದರು. ಆಗ ಮೋದಿಯವರನ್ನೂ ಭೇಟಿ ಮಾಡಿದ್ದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮರುನಾಮಕರಣ ರಾಜಕಾರಣ! ಪ್ರಮುಖ ಸ್ಥಳಗಳು, ನಗರಗಳ ಹೆಸರು ಬದಲಾವಣೆ ಈಚೆಗಿನ ಟ್ರೆಂಡ್‌

ಮರುನಾಮಕರಣ ರಾಜಕಾರಣ! ಪ್ರಮುಖ ಸ್ಥಳಗಳು, ನಗರಗಳ ಹೆಸರು ಬದಲಾವಣೆ ಈಚೆಗಿನ ಟ್ರೆಂಡ್‌

ವಿಕಸಿತ ಭಾರತದ ಕನಸು ಸಾಕಾರದತ್ತ ದಿಟ್ಟ ಹೆಜ್ಜೆ

ವಿಕಸಿತ ಭಾರತದ ಕನಸು ಸಾಕಾರದತ್ತ ದಿಟ್ಟ ಹೆಜ್ಜೆ

1-rrrr

Yakshagana;ನೋಡಿ ಕಲಿಯುವುದು ಬಹಳಷ್ಟಿದೆ: ಶಿವರಾಮ ಜೋಗಿ ಬಿ.ಸಿ.ರೋಡು

Desi Swara: ಸಾಂಪ್ರದಾಯಿಕ ವೈವಿಧ್ಯದ ಓಣಂ ವೈಭವ-ವಿಶೇಷ ಹತ್ತು ದಿನಗಳು

Desi Swara: ಸಾಂಪ್ರದಾಯಿಕ ವೈವಿಧ್ಯದ ಓಣಂ ವೈಭವ-ವಿಶೇಷ ಹತ್ತು ದಿನಗಳು

ಇ-ತ್ಯಾಜ್ಯ ತಗ್ಗಿಸಲು ಸರಕಾರದ ಐಡಿಯಾ! ಯಶಸ್ಸು ತಂದೀತೇ ಕರ್ನಾಟಕ ಸರಕಾರದ ಹೊಸ ಹೆಜ್ಜೆ?

Electronic Waste ತಗ್ಗಿಸಲು ಸರಕಾರದ ಐಡಿಯಾ!ಯಶಸ್ಸು ತಂದೀತೇ ಕರ್ನಾಟಕ ಸರಕಾರದ ಹೊಸ ಹೆಜ್ಜೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.