Thirthahalli ಜೆಜೆಎಮ್ ವಿಷಯದಲ್ಲಿ ಸ್ವಲ್ಪ ಬೇಜವಾಬ್ದಾರಿತನ ಕಾಣಿಸುತ್ತಿದೆ: ಮಧು ಬಂಗಾರಪ್ಪ

ಎಲೆ ಚುಕ್ಕಿ ರೋಗಕ್ಕೆ ಪರಿಹಾರ ಕೂಡ ನೀಡಬೇಕು ಆರಗ ಜ್ಞಾನೇಂದ್ರ

Team Udayavani, Dec 1, 2023, 7:50 PM IST

Thirthahalli ಜೆಜೆಎಮ್ ವಿಷಯದಲ್ಲಿ ಸ್ವಲ್ಪ ಬೇಜವಾಬ್ದಾರಿತನ ಕಾಣಿಸುತ್ತಿದೆ: ಮಧು ಬಂಗಾರಪ್ಪ

ತೀರ್ಥಹಳ್ಳಿ : ಅಡಿಕೆ ಬೆಳೆಗೆ ನೀರಿನ ತೊಂದರೆ ಆಗುತ್ತಿದೆ. ಅಂತರ್ಜಲ ಕುಸಿತ ಕಂಡಿದ್ದು 6% ಇದ್ದದ್ದು 15% ಡೌನ್ ಆಗಿದೆ. ಎಲೆಚುಕ್ಕೆ ರೋಗ ಬಂದಿದ್ದರಿಂದ ರೈತರಿಗೆ ಸಮಸ್ಯೆ ಆಗಿದೆ. ಅಡಿಕೆ ಬೆಳೆಗೆ ತಗುಲಿರುವ ಎಲೆಚುಕ್ಕಿ ರೋಗಕ್ಕೆ ವಿಜ್ಞಾನಿಗಳನ್ನು ಕಳುಹಿಸಿ ಸಂಶೋಧನೆ ಮಾಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ತೀರ್ಥಹಳ್ಳಿ ತಾಲೂಕುಗಳ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆಗೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರುಗ್ರಾಮೀಣ ಪ್ರದೇಶದಲ್ಲಿರುವ ಕುಡಿಯುವ ನೀರಿನಲ್ಲಿ ಸಮಸ್ಯೆಗೆ 46 ಗ್ರಾಮಗಳಲ್ಲಿ ಈಗಾಗಲೇ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.28 ಬೋರ್ವೆಲ್ ಅವಶ್ಯಕತೆ ಇರುವುದರಿಂದ ಪ್ರತಿ ತಾಲೂಕಿಗೆ 50 ಲಕ್ಷ ಮಿಸಲಿಟ್ಟಿದ್ದಾರೆ ಅದನ್ನು ಉಪಯೋಗಿಸಿಕೊಳ್ಳಿ ಎಂದರು.

ಫ್ಲೋರೇಡ್ ಕಂಟೆಂಟ್ ನೀರು ಇರುವ ಗ್ರಾಮಗಳಿಗೆ ಪ್ರಧಾನ್ಯತೆ ನೀಡಬೇಕು ಎಂದು ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದಕ್ಕೆ ಆ ವಿಷಯಕ್ಕೆ ಪೂರಕವಾಗಿ ಪರಿಹಾರ ಈಗಲೇ ಮಾಡಿ ಇಟ್ಟುಕೊಳ್ಳಿ. ಪ್ಲಾನ್ ಎ ಪ್ಲಾನ್ ಬಿ ಅಂತ ರೆಡಿ ಮಾಡಿ ಇಟ್ಟು ಕೊಳ್ಳಬೇಕಾಗುತ್ತದೆ. ಈಗಾಗಲೇ 2 ಗ್ರಾಮಗಳಲ್ಲಿ ನಲ್ಲಿ ಫ್ಲೋರೇಡ್ ಇದೆ ಎಂದು ತಿಳಿದು ಬಂದಿರುವುದರಿಂದ ಪ್ರತಿಯೊಂದು ಗ್ರಾಮಗಳಲ್ಲಿ ಪರೀಕ್ಷೆ ನೆಡೆಸಿ ಎಂದು ತಿಳಿಸಿದರು.

ಅರಣ್ಯ ಇಲಾಖೆಗೆ ಸಂಬಂಧಪಟ್ಟ ಜಾಗದಲ್ಲಿ ನೀರಿನ ಟ್ಯಾಂಕ್ ಹಾಕಲು ಬಿಡುವುದಿಲ್ಲ ಎಂದು ಪಿಡಿಓ ತಿಳಿಸಿದ್ದಕ್ಕೆ ಫಾರೆಸ್ಟ್ ಅಧಿಕಾರಿಗಳು ಮಾತನಾಡಿ ಎಫ್ ಸಿ ಗೆ ಅಪ್ಲೈ ಮಾಡಿದರೆ ಕ್ಲಿಯರ್ ಮಾಡಿಕೊಡುತ್ತೇವೆ ಎಂದರು ಆಗ ಸಚಿವರು ಮಾತನಾಡಿ ನನ್ನ ಪ್ರಕಾರ ಎಲ್ಲದಕ್ಕೂ ಪರ್ಮಿಷನ್ ತಗೊಂಡೆ ಮಾಡಲಾಗುವುದಿಲ್ಲ ಕೆಲವು ಮಾನವೀಯತೆ ದೃಷ್ಟಿಯಿಂದ ಕೆಲಸ ಮಾಡಬೇಕಾಗುತ್ತದೆ ಎಂದರು.

ಇನ್ನು ಜೆಜೆಎಮ್ ವಿಷಯದಲ್ಲಿ ಸ್ವಲ್ಪ ಬೇಜವಾಬ್ದಾರಿತನ ಕಾಣಿಸುತ್ತಿದೆ. ಜೆಜೆಎಂ ಸಮಸ್ಯೆ ನನಗೆ ಗೊತ್ತಿದೆ ಸಂಬಂಧಪಟ್ಟ ಅಧಿಕಾರಿಗಳು ರಿಪೋರ್ಟ್ ಕಳುಹಿಸಿಕೊಡಿ ಎಂದಿದ್ದಕ್ಕೆ ಈ ವಿಷಯದ ಬಗ್ಗೆ ಮಾತನಾಡಿದ ಶಾಸಕರು 20 ಮನೆಗಳಿಗಿಂತ ಕಡಿಮೆ ಇರುವ ಊರುಗಳಿಗೆ ಜೆಜೆಎಂ ಅಡಿಯಲ್ಲಿ ಕನೆಕ್ಷನ್ ಕೊಡಲು ಬರುವುದಿಲ್ಲ ಎಂಬ ಕಾನೂನಿದೆ. ಮೋರಿಕಟ್ಟಲು ಶಕ್ತಿ ಇಲ್ಲದವರು ಕೂಡ ಇಲ್ಲಿ ಬಂದು ಜೆಜೆಎಂ ಅಡಿಯಲ್ಲಿ ಕಂಟ್ರಾಕ್ಟರ್ ಆಗಿ ಬರುತ್ತಿದ್ದಾರೆ. ಅಷ್ಟೇ ಅಲ್ಲದೆ ಅವರು ಬಂದು ಇಲ್ಲಿಯ ಜನರಿಗೆ ನಿಬಂಧನೆಯನ್ನು ಹೇಳುತ್ತಾರೆ ಅದನ್ನು ಸಡಿಲಗೊಳಿಸಬೇಕು. ಲೋಕಲ್ ಕಂಟ್ರಾಕ್ಟ್ ಗರುಗಳಿಗೆ ಅವಕಾಶ ಕೊಡಬೇಕು ಅದು ಯಾರೇ ಆಗಿರಲಿ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡದಿದ್ದರೆ ತೊಂದರೆ ಆಗುತ್ತದೆ. ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿ ಬರುವ ಮಾರ್ಚ್ ನಲ್ಲಿ ಕೆಲಸ ಶುರುಮಾಡದೇ ಹೋದರೆ ಈ ಸ್ಕೀಮ್ ಕ್ಯಾನ್ಸಲ್ ಆಗುವ ಸಾಧ್ಯತೆ ಇದೆ.

ಕುಡಿಯುವ ನೀರಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಎಲೆ ಚುಕ್ಕಿ ರೋಗಕ್ಕೆ ಪರಿಹಾರ ಕೂಡ ನೀಡಬೇಕು ಎಂದು ಮನವಿ ಮಾಡಿದರು. ತಕ್ಷಣವೇ ಮಂತ್ರಿಗಳು ಇದಕ್ಕೆ ಶಾಶ್ವತ ಪರಿಹಾರ ನೀಡುವುದಾಗಿ ಸೈಂಟಿಸ್ಟ್ ಗಳು ಹೇಳಿದ್ದಾರೆ ಫಾಲೋ ಅಪ್ ಮಾಡುತ್ತೇನೆ ಎಂದರು

ಪಟ್ಟಣ ಪಂಚಾಯತಿ ಸದಸ್ಯರಾದ ಗಣಪತಿಯವರು ಗುರುವಾರ ದಿವಸ ಕನಕದಾಸ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಕಾಟಚಾರಕ್ಕೆ ಮಾಡಿದ್ದಾರೆ ಎಂದು ಮಂತ್ರಿಗಳ ಮುಂದೆ ತಿಳಿಸಿದಾಗ ಇಲ್ಲಿ ಜಾತಿಯಾಧರಿತ ಆಚರಣೆಗಿಂತ ಎಲ್ಲರೂ ಒಟ್ಟು ಸೇರಿ ಮಹಾತ್ಮರ ಜಯಂತಿಯನ್ನು ಮಾಡಬೇಕಿದೆ.

ನಾನು ಈ ಹಿಂದೆ ಮುಖ್ಯಮಂತ್ರಿಗಳಿಗೆ ಯಾವುದೇ ಜಯಂತಿಗಳಿಗೆ ದಯಮಾಡಿ ರಜೆಯನ್ನು ಕೊಡಬೇಡಿ ಹೇಳಿದ್ದೆ. ಇನ್ನು ಮುಂದೆಯಾದರೂ ಎಲ್ಲರನ್ನು ಒಗ್ಗೂಡಿಸಿ ಆಚರಣೆ ಮಾಡಿ ಎಂದು ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.