School; ಮಕ್ಕಳ ಜೀವದ ಜತೆ ಚೆಲ್ಲಾಟವಾಡುವ ದುಷ್ಕರ್ಮಿಗಳ ಪತ್ತೆ ವಿಳಂಬ ಬೇಡ


Team Udayavani, Dec 2, 2023, 5:30 AM IST

1-wqewqewq

ರಾಜಧಾನಿ ಹಾಗೂ ಸುತ್ತಲಿನ 68 ಪ್ರತಿಷ್ಠಿತ ಶಾಲೆಗಳ ಆವರಣದಲ್ಲಿ ಸ್ಫೋಟಕ ವಸ್ತುಗಳನ್ನಿಡಲಾಗಿದೆ ಎಂಬ ಅನಾಮಧೇಯ ಇ-ಮೇಲ್‌ವೊಂದು ಇಡೀ ದಿನ ಬೆಂಗಳೂರಿನ ನಾಗರಿಕರನ್ನು ಆತಂಕಕ್ಕೆ ದೂಡಿತ್ತು. ಅದರಲ್ಲೂ ವಿಶೇಷವಾಗಿ ಇ-ಮೇಲ್‌ ಸ್ವೀಕರಿಸಿದ ಶಾಲೆಗಳ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಅನುಭವಿಸಿದ ಭಯ-ಭೀತಿ-ಆತಂಕವನ್ನು ಯಾವುದೇ ಪದಗಳಲ್ಲಿ ವಿವರಿಸಲು ಸಾಧ್ಯವೇ ಇಲ್ಲ. ಮುಂಜಾನೆ ಸಮಯ 6.08 ಕ್ಕೆ ಇ-ಮೇಲ್‌ ಸಂದೇಶ ಶಾಲೆಗಳಿಗೆ ತಲುಪಿದೆ. ಆದರೆ ಇ-ಮೇಲ್‌ ಸಂದೇಶವನ್ನು ಶಾಲಾ ಆಡಳಿತ ಮಂಡಳಿಗಳು ಸುಮಾರು 8.30ರ ವೇಳೆಗೆ ನೋಡುವಷ್ಟರಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಗಳ ಒಳಗಡೆ ಸೇರಿದ್ದರು. ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆ ಬಾಂಬ್‌ ನಿಷ್ಕ್ರಿಯ ದಳ ತಪಾಸಣೆ ನಡೆಸಿದಾಗ ಎಲ್ಲಿಯೂ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಪತ್ತೆಯಾಗಲಿಲ್ಲ, ಇದೊಂದು ಹುಸಿ ಬಾಂಬ್‌ ಕರೆ ಎಂದು ಖಚಿತವಾದ ಬಳಿಕ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಆದರೆ ಅಷ್ಟೊತ್ತಿಗಾಗಲೇ ಶಾಲೆಗಳಿಗೆ ಮಕ್ಕಳನ್ನು ಬಿಟ್ಟು ಮನೆ ಇಲ್ಲವೇ ಕಚೇರಿಗಳಿಗೆ ತೆರಳಿದ್ದ ಪೋಷಕರಿಗೆ ಸುದ್ದಿ ಮುಟ್ಟುತ್ತಿದ್ದಂತೆ ಹೈರಾಣಾಗಿದ್ದರು.

ಒಂದಲ್ಲ-ಎರಡಲ್ಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ವ್ಯಾಪ್ತಿಗೆ ಸೇರಿದ ಒಟ್ಟು 68 ಶಾಲೆಗಳಿಗೆ ಮುಜಾಹಿದ್ದೀನ್‌ ಸಂಘಟನೆ ಹೆಸರಲ್ಲಿ ಬಾಂಬ್‌ ಬೆದರಿಕೆ ಮೇಲ್‌ ರವಾನೆಯಾಗಿದೆ. ಅದರಲ್ಲಿ ಮುಂಬಯಿಯ ತಾಜ್‌ ಹೊಟೇಲ್‌ ಮೇಲೆ ನಡೆದ ದಾಳಿಯಂತೆ ದಾಳಿ ಮಾಡುತ್ತೇವೆ, ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ಸಿದ್ಧರಾಗಿ ಇಲ್ಲವೇ ಸಾಯಲು ರೆಡಿ ಯಾಗಿರಿ ಎಂದು ಧರ್ಮದ ಹೆಸರಲ್ಲಿ ಬೆದರಿಸಿ ಬರೆಯಲಾಗಿದೆ. ಇದೊಂದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಈ ರೀತಿ ಸಾರಸಗಟಾಗಿ ಶಾಲೆಗಳಿಗೆ ಮೇಲ್‌ ರವಾನೆಯಾಗಬೇಕಿದ್ದರೆ ಇದರ ಹಿಂದೆ ಸಾಕಷ್ಟು ಕಸರತ್ತುಗಳು ನಡೆ ದಿವೆ. ಈ ರೀತಿಯ ಪ್ರಕರಣಗಳನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ನಿಜಕ್ಕೂ ದೊಡ್ಡ ಸವಾಲು. ಏಕೆಂದರೆ ಈ ರೀತಿಯ ಕೃತ್ಯಗಳನ್ನು ಮಾಡುವವರು ಯಾವಾಗಲೂ ಸೇಫ್ಗೇಮ್‌ ಆಡುತ್ತಾರೆ. ಫೇಕ್‌ ಮೇಲ್‌ ಐಡಿ ಸೃಷ್ಟಿಸಿ ಯಾವುದೋ ಸಂಘಟನೆ ಹೆಸರನ್ನು ಉಲ್ಲೇಖೀಸಿ ಸಾರ್ವಜನಿಕರ ಜೀವದ ಜತೆ ಚೆಲ್ಲಾಟವಾಡುತ್ತಾರೆ. ಹೀಗಾಗಿ ಪಾಪಿಗಳನ್ನು ಪತ್ತೆ ಹಚ್ಚುವುದು ಅಷ್ಟು ಸುಲ ಭವಲ್ಲ. ಕಳೆದ ವರ್ಷವೂ ಇದೇ ರೀತಿ ಆಗಿತ್ತು. ಇದೊಂದು ಹುಸಿ ಬಾಂಬ್‌ ಕರೆ ಎಂದು ಸರಕಾರ ನಿರ್ಲಕ್ಷಿಸದೆ, ಗಂಭೀರವಾಗಿ ಪರಿಗಣಿಸಿ ತನಿಖೆಯಲ್ಲಿ ವಿಳಂಬ ಮಾಡದೇ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿನ ಶಿಕ್ಷೆ ವಿಧಿಸಲು ಮುಂದಾಗಬೇಕು.

ಸರಕಾರವೇನೋ ಧೈರ್ಯವಾಗಿರಿ, ಆತಂಕಪಡಬೇಡಿ ಎಂಬ ಮಾತು ಹೇಳಿರಬಹುದು, ಆದರೆ ಸೋಮವಾರ‌ ಶಾಲೆಗಳು ಮತ್ತೆ ತೆರೆದಾಗ ಸಹಜ ವಾಗಿಯೇ ಪೋಷಕರಲ್ಲಿ ಇದೇ ಆತಂಕ ಇನ್ನೂ ಇದ್ದೇ ಇರುತ್ತದೆ. ಎಲ್ಲ ಶಾಲೆಗಳಿಗೂ ಸರಕಾರ ಭದ್ರತೆ ಕೊಡುವುದು ಅಸಾಧ್ಯದ ಮಾತು. ಈ ನಿಟ್ಟಿನಲ್ಲಿ ಶಾಲಾ ಆಡಳಿತ ಮಂಡಳಿಗಳೇ ದಿನದ 24 ಗಂಟೆಯೂ ತಮ್ಮ ಸಂಸ್ಥೆಗಳ ಸುರಕ್ಷೆ ದೃಷ್ಟಿಯಿಂದ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರ ಣಗಳನ್ನು ಬಳಸಿಕೊಂಡು ಕಣ್ಗಾವಲು ಇಟ್ಟರೆ ವಿದ್ಯಾರ್ಥಿಗಳು ಧೈರ್ಯವಾಗಿ ಶಾಲೆಗಳ ಒಳಗಡೆ ಬರುತ್ತಾರೆ ಇಲ್ಲದೆ ಇದ್ದರೇ ಇದು ನಿತ್ಯದ ಗೋಳು ಆಗಲಿದೆ.

ಟಾಪ್ ನ್ಯೂಸ್

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಕೇರಳದಲ್ಲಿ ಅಮೀಬಾ ಸೋಂಕು- ರಾಜ್ಯದಲ್ಲೂ ಮುಂಜಾಗ್ರತೆ ಅಗತ್ಯ

Editorial: ಕೇರಳದಲ್ಲಿ ಅಮೀಬಾ ಸೋಂಕು- ರಾಜ್ಯದಲ್ಲೂ ಮುಂಜಾಗ್ರತೆ ಅಗತ್ಯ

Vidhana-Soudha

State Government ವ್ಯಾಜ್ಯಮುಕ್ತ ಗ್ರಾಮ: ಸರಕಾರದ ವಿನೂತನ ಚಿಂತನೆ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

ಸಮಾವೇಶಗಳ ಆಯೋಜನೆ: ರಾಷ್ಟ್ರೀಯ ಮಾರ್ಗಸೂಚಿ ಅಗತ್ಯ

ಸಮಾವೇಶಗಳ ಆಯೋಜನೆ: ರಾಷ್ಟ್ರೀಯ ಮಾರ್ಗಸೂಚಿ ಅಗತ್ಯ

job for kannadigas

Editorial; ಕನ್ನಡಿಗರಿಗೆ ಉದ್ಯೋಗ: ಸರಕಾರ ಗಮನಹರಿಸಲಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

TOOFAAN

Toofaan; ಭರವಸೆ ಮೂಡಿಸಿದ ತೂಫಾನ್‌ ನೋಟ

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.