Pollution; ಹೆಚ್ಚುತ್ತಿರುವ ಮಾಲಿನ್ಯವೂ…ಹವಾಮಾನ ಬದಲಾವಣೆಯೂ…


Team Udayavani, Dec 2, 2023, 6:15 AM IST

delhi air

ವಿಶ್ವದಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ಪರಿಣಾಮ ಹವಾಮಾನ ಬದಲಾವಣೆ ವರ್ಷಗಳುರುಳಿದಂತೆ ಬಲುದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ. ಭೂ, ಜಲ, ವಾಯುಮಾಲಿನ್ಯದಿಂದಾಗಿ ಮಾನವನ ಆರೋಗ್ಯದಲ್ಲಿ ಏರುಪೇರು ಗಳಾಗುತ್ತಿವೆ ಮಾತ್ರವಲ್ಲದೆ ಜೀವಜಗತ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಸಮಸ್ಯೆಯಿಂದ ಭಾರತವೂ ಹೊರತಾಗಿಲ್ಲ. ಪರಿಸರ ಸಂರಕ್ಷಣೆ ಹಾಗೂ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಪ್ರತೀ ವರ್ಷ ಡಿ.2ರಂದು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಗುತ್ತಿದೆ.

ಬಾಹ್ಯ ವಾಯುಮಾಲಿನ್ಯ: ಭಾರತ ದ್ವಿತೀಯ!
ಬ್ರಿಟಿಷ್‌ ಮೆಡಿಕಲ್‌ ಜರ್ನಲ್‌ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ ಬಾಹ್ಯ ವಾಯುಮಾಲಿನ್ಯದಲ್ಲಿ ವಿಶ್ವದಲ್ಲಿ ಚೀನ ಮೊದಲ ಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ವಾಯುಮಾಲಿನ್ಯದಿಂದ ದೇಶದಲ್ಲಿ ಅಂದಾಜು 2.18 ಮಿಲಿ ಯನ್‌ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ವರದಿ ಹೇಳಿದೆ. ಅದ ರಲ್ಲೂ ಕೇವಲ ಕಾರ್ಖಾನೆಗಳು ಬಳಸುವ ಪಳೆಯುಳಿಕೆ ಇಂಧನ ಗಳಿಂದ ಉಂಟಾಗುವ ವಾಯುಮಾಲಿನ್ಯದಿಂದ ವಿಶ್ವದಲ್ಲಿ 5.1 ಮಿಲಿಯನ್‌ ಜನರು ಸಾವನ್ನಪ್ಪುತ್ತಿದ್ದಾರೆ. ದಕ್ಷಿಣ ಹಾಗೂ ಪೂರ್ವ ಏಷ್ಯಾದಲ್ಲಿ ವಾಯುಮಾಲಿನ್ಯದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಅಧಿಕವಾಗಿದೆ. ಚೀನದಲ್ಲಿ ಪ್ರತೀ ವರ್ಷ 2.44 ಮಿಲಿಯನ್‌ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಹೇಳಿದೆ.

ಸಾಮೂಹಿಕ ಪ್ರಯತ್ನ ಅಗತ್ಯ
ಹವಾಮಾನ ಬದಲಾವಣೆಗೆ ಮೂಲ ಕಾರಣವಾಗಿರುವ ನೆಲ, ಜಲ ಮತ್ತು ವಾಯುಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಡೀ ಜಗತ್ತು ಒಗ್ಗೂಡಬೇಕಿದೆ. ಈ ನಿಟ್ಟಿನಲ್ಲಿ ಜನತೆ ಕೂಡ ತಮ್ಮ ಕರ್ತವ್ಯ, ಹೊಣೆಗಾರಿಕೆಗಳನ್ನು ಅರಿತುಕೊಳ್ಳಬೇಕಿದೆ.

ಹಿನ್ನೆಲೆ
1984ರ ಡಿ. 2-3ರ ರಾತ್ರಿ ಭೋಪಾಲ್‌ನ ಕ್ರಿಮಿನಾಶಕ ತಯಾರಿಕ ಕಂಪೆನಿಯಾದ ಯೂನಿಯನ್‌ ಕಾರ್ಬನ್‌ ಇಂಡಿಯಾ ಲಿಮಿಟೆಡ್‌ನ‌ ಕಾರ್ಖಾನೆಯಲ್ಲಿ ಸಂಭವಿಸಿದ ಅನಿಲ ಸೋರಿಕೆ ದುರಂತದ ವೇಳೆ ಮಿಥೈಲ್‌ ಐಸೋಸೈನೆಟ್‌ ವಿಷಾನಿಲ ಸೋರಿಕೆಯಾಗಿ ಸಾವಿರಾರು ಜನರು ಸಾವನ್ನಪ್ಪಿದ್ದರು. ಈ ದುರಂತದ ದುಷ್ಪರಿಣಾಮವನ್ನು ಆ ಪರಿಸರದ ಜನರು ಇಂದಿಗೂ ಅನುಭ ವಿಸುತ್ತಿದ್ದಾರೆ. ಭೋಪಾಲ್‌ ಅನಿಲ ದುರಂತದಲ್ಲಿ ಸಾವನ್ನಪ್ಪಿದವರ ಸ್ಮರಣೆಗಾಗಿ ಪ್ರತೀ ವರ್ಷ ಡಿ. 2ರಂದು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ ಆಚರಿಸಲಾಗುತ್ತಿದೆ. ಎಲ್ಲ ತೆರನಾದ ಮಾಲಿನ್ಯವನ್ನು ನಿಯಂತ್ರಿಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಈ ಭೂಮಿಯ ಮೇಲಣ ಜೀವ ಸಂಕುಲದ ರಕ್ಷಣೆಯ ಸದುದ್ದೇಶದೊಂದಿಗೆ ಈ ದಿನವನ್ನು ಆಚರಿಸುತ್ತ ಬರಲಾಗಿದೆ.

ಪಳೆಯುಳಿಕೆ ಇಂಧನಗಳ ಬಳಕೆಗೆ ಕಡಿವಾಣ ಅನಿವಾರ್ಯ
ಹೆಚ್ಚಿನ ದೇಶಗಳು ಇಂದಿಗೂ ಪಳೆಯುಳಿಕೆ ಇಂಧನ ಶಕ್ತಿಯ ಮೇಲೆ ಅವಲಂಬಿತವಾಗಿರುವುದರಿಂದ ವಾಯು ಮಾಲಿನ್ಯ ನಿಯಂತ್ರಣ ಕಷ್ಟಸಾಧ್ಯವಾಗುತ್ತಿದೆ. ಈ ಕಾರಣದಿಂದಾಗಿಯೇ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆ ಯನ್ನು ಕಡಿಮೆ ಮಾಡಿದಲ್ಲಿ ವಾಯುಮಾಲಿನ್ಯ ದಿಂದಾಗಿ ಸಂಭವಿಸುತ್ತಿರುವ ಸಾವುಗಳಲ್ಲಿ ಶೇ.90ರಷ್ಟು ತಡೆಗಟ್ಟಬಹುದು ಎಂದು ವರದಿ ಬೆಟ್ಟು ಮಾಡಿದೆ.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.