Udupi ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ್ ಡಿ. 5ರಿಂದ ನವೀಕರಣ
Team Udayavani, Dec 2, 2023, 12:26 AM IST
ಮಲ್ಪೆ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಹಯೋಗ, ಮಾಹೆ ವಿಶ್ವವಿದ್ಯಾನಿಲಯದ ಸಹಕಾರದೊಂದಿಗೆ ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಮತ್ತು ಹೊಸ ಕಾರ್ಡುಗಳ ನೋಂದಣಿ ಡಿ. 5ರಂದು ಆರಂಭವಾಗಲಿದೆ. ಮಣಿಪಾಲ ಸಮೂಹ ಆಸ್ಪತ್ರೆಗಳಿಗೆ ಮಾತ್ರ ಈ ಯೋಜನೆ ಸೀಮಿತವಾಗಿದ್ದು ಕಡಿಮೆ ವರಮಾನವಿರುವ ಕುಟುಂಬಗಳಿಗೆ ಈ ಯೋಜನೆ ವರದಾನವಾಗಲಿದೆ.
ಹೊರರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಯಲ್ಲಿ ಮಣಿಪಾಲ ಆಸ್ಪತ್ರೆಯ ಶೇ. 50, ಉಡುಪಿ ಟಿಎಂಎ ಪೈ ಆಸ್ಪತ್ರೆಯಲ್ಲಿ ಶೇ. 20, ಮಂಗಳೂರು ಅತ್ತವರ ಆಸ್ಪತ್ರೆಯಲ್ಲಿ ಶೇ. 50, ಮಂಗಳೂರು ಅಂಬೇಡ್ಕರ್ ಸರ್ಕಲ್ ಕೆಎಂಸಿ ಆಸ್ಪತ್ರೆಯಲ್ಲಿ ಶೇ. 25, ಕಾರ್ಕಳ ಡಾ| ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಶೇ. 20, ಕಟೀಲು ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆಯಲ್ಲಿ ಶೇ. 50 ರಿಯಾಯಿತಿ ಇರುತ್ತದೆ. ಆರೋಗ್ಯ ಸುರûಾ ಕಾರ್ಡಿನ ಸದಸ್ಯನು ಒಳರೋಗಿಯಾಗಿ ದಾಖಲಾದಲ್ಲಿ ಯಾವುದೇ ನಿರ್ಬಂಧವಿಲ್ಲದೆ ಶೇ. 35 ರಿಯಾಯಿತಿ ಪಡೆಯುವ ಸೌಲಭ್ಯ ಈ ಕಾರ್ಡಿನಲ್ಲಿರುತ್ತದೆ.
ನೋಂದಣಿಗೆ ಒಳಪಡುವ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಡಿ. 5ರಿಂದ 25ರೊಳಗಾಗಿ ಮೊಗವೀರ ಯುವ ಸಂಘಟನೆಯ ಜಿಲ್ಲಾ ಕಚೇರಿ, ಮಾಧವ ಮಂಗಲ ಸಮುದಾಯ ಭವನ, ಶ್ಯಾಮಿಲಿ ಸಭಾಂಗಣದ ಎದುರು, ಅಂಬಲಪಾಡಿ, ಉಡುಪಿ ಅಥವಾ ಮೊಗವೀರ ಯುವ ಸಂಘಟನೆಯ ವಿವಿಧ ಘಟಕಗಳನ್ನು ಸಂಪರ್ಕಿಸಿ ಈ ಯೋಜನೆಯನ್ನು ನೋಂದಾಯಿಸಬಹುದಾಗಿದೆ.
ಒಂದು ಕುಟುಂಬ ಅಥವಾ ಕುಟುಂಬದ ಸದಸ್ಯರು ಯಾವುದೇ ಒಂದು ಘಟಕದಲ್ಲಿ ರಿಯಾಯಿತಿ ಸೌಲಭ್ಯ ಯೋಜನೆಯನ್ನು ನೋಂದಾಯಿಸಿ ಕೊಳ್ಳಬಹುದು. ಒಂದಕ್ಕಿಂತ ಹೆಚ್ಚು ಘಟಕಗಳಲ್ಲಿ ನೋಂದಾಯಿಸಿಕೊಂಡರೆ ಅಂತಹ ವ್ಯಕ್ತಿಯ ಅಥವಾ ಕುಟುಂಬದ ರಿಯಾಯಿತಿ ಸೌಲಭ್ಯ ಯೋಜನೆಯ ಸದಸ್ಯತ್ವವನ್ನು ರದ್ದು ಪಡಿಸಲಾಗುವುದು ಎಂದು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.