Viral: ನೆದರ್ಲ್ಯಾಂಡ್ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ಮದುವೆಯಾದ ಯುಪಿ ಮೂಲದ ಯುವಕ
Team Udayavani, Dec 2, 2023, 8:57 AM IST
ಲಕ್ನೋ: ಉತ್ತರ ಪ್ರದೇಶ ಮೂಲದ ಯುವಕನೊಬ್ಬ ನೆದರ್ಲ್ಯಾಂಡ್ ಮೂಲದ ಯುವತಿಯನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಉತ್ತರ ಪ್ರದೇಶದ ಫತೇಪುರದ ಹಳ್ಳಿಯೊಂದರಲ್ಲಿ ವಾಸವಾಗಿದ್ದ ಹಾರ್ದಿಕ್ ವರ್ಮಾ(32) ಕೆಲಸದ ನಿಮಿತ್ತ ನೆದರ್ಲ್ಯಾಂಡ್ಗೆ ತೆರಳಿದ್ದರು. ಅಲ್ಲಿ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಮೇಲ್ವಿಚಾರಕರಾಗಿ ಕೆಲಸವನ್ನು ಪಡೆದುಕೊಂಡಿದ್ದರು. ಈ ವೇಳೆ ಅದೇ ಕಂಪೆನಿಯಲ್ಲಿದ್ದ ನೆದರ್ಲ್ಯಾಂಡ್ ಮೂಲದ ಗೇಬ್ರಿಯೆಲಾ ದುಡಾ(21) ಅವರ ಪರಿಚಯವಾಗಿದೆ.
ಪ್ರತಿನಿತ್ಯ ಕೆಲಸ ಮಾಡುತ್ತಾ, ಆತ್ಮೀಯತೆಯಲ್ಲಿ ಇದ್ದ ಇಬ್ಬರಲ್ಲಿ ಪ್ರೀತಿ ಹುಟ್ಟಿದೆ. ಹಾರ್ದಿಕ್ ಅವರು ತನ್ನ ಪ್ರೀತಿಯನ್ನು ಮೊದಲು ಗೇಬ್ರಿಯೆಲಾ ಅವರಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅವರು ಕೂಡ ಹಾರ್ದಿಕ್ ಅವರನ್ನು ಇಷ್ಟಪಟಿದ್ದಾರೆ. ಮೂರು ವರ್ಷ ಸಹಜೀವನವಾಗಿ ಜೊತೆಗಿದ್ದ ಇಬ್ಬರು ಮದುವೆಯಾಗುವ ನಿಟ್ಟಿನಲ್ಲಿ ಕಳೆದ ವಾರ ಭಾರತಕ್ಕೆ ಬಂದಿದ್ದಾರೆ.
ಕುಟುಂಬದವರ ಒಪ್ಪಿಗೆಯ ಮೇರೆ ಬುಧವಾರ(ನ.29) ಹಿಂದೂ ಸಂಪ್ರದಾಯದಂತೆ ಎಲ್ಲಾ ವೈವಾಹಿಕ ವಿಧಿಗಳನ್ನು ಪೂರ್ಣಗೊಳಿಸಿ, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಫತೇಪುರದಲ್ಲಿ ಹಾರ್ದಿಕ್ ಅವರ ಪೂರ್ವಜರ ಮನೆ ಇದೆ. ಅದಕ್ಕಾಗಿ ಅವರು ಅಲ್ಲಿಯೇ ವಿವಾಹವಾಗಿದ್ದಾರೆ ಎಂದು ʼಇಂಡಿಯಾ ಟುಡೇʼಗೆ ಹಾರ್ದಿಕ್ ಹೇಳಿದ್ದಾರೆ.
ಡಿಸೆಂಬರ್ 11 ರಂದು ಗಾಂಧಿನಗರದಲ್ಲಿ ಆರತಕ್ಷತೆಯನ್ನು ಆಯೋಜಿಸಲಾಗಿದೆ. ಇದರಲ್ಲಿ ಗೇಬ್ರಿಯೆಲಾ ಅವರ ತಂದೆ ಮಾರ್ಸಿನ್ ದುಡಾ, ಅವರ ತಾಯಿ ಬಾರ್ಬರಾ ದುಡಾ ಮತ್ತು ಇತರ ಕುಟುಂಬ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದೆಲ್ಲಾ ಆದ ಬಳಿಕ ಡಿ.25 ನಾವು ನೆದರ್ಲ್ಯಾಂಡ್ಗೆ ತೆರಳಿದ್ದೇವೆ. ಅಲ್ಲಿ ಚರ್ಚ್ ನಲ್ಲಿ ಕ್ರೈಸ್ತ ಸಂಪ್ರದಾಯದಂತೆ ವಿವಾಹವಾಗಲಿದ್ದೇವೆ ಎಂದು ಹಾರ್ದಿಕ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.