Lok Sabha Elections ನಂತರ ರಾಜ್ಯ ಸರಕಾರ ಪತನ: ರೇಣುಕಾಚಾರ್ಯ
Team Udayavani, Dec 2, 2023, 6:18 PM IST
ದಾವಣಗೆರೆ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಇದಕ್ಕಾಗಿ “ಆಪರೇಷನ್ ಕಮಲ’ ಮಾಡುವುದಿಲ್ಲ. ಬದಲಾಗಿ ಕಾಂಗ್ರೆಸ್ ಶಾಸಕರೇ ಬೇಸತ್ತು ರಾಜೀನಾಮೆ ನೀಡಿ ಸರ್ಕಾರ ಪತನಕ್ಕೆ ಕಾರಣರಾಗಲಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಭೀಕರ ಬರಗಾಲವಿದ್ದು ಜನ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ನಿಗಮ ಅಧ್ಯಕ್ಷ ಸ್ಥಾನಕ್ಕಾಗಿ ಕಚ್ಚಾಟ ನಡೆದಿದೆ.
ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಬೇಸತ್ತು ಪತ್ರ ಬರೆಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರೇಳು ತಿಂಗಳು ಕಳೆದರೂ ಇನ್ನೂ ಸರ್ಕಾರ ಟೇಕಾಫ್ ಆಗಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದರು.
ಜಾತಿಗಣತಿಗೆ ತಮ್ಮ ವಿರೋಧ ಇಲ್ಲ. ಆದರೆ, ಅವೈಜ್ಞಾನಿಕ ವರದಿ ಒಪ್ಪಲು ಸಾಧ್ಯವಿಲ್ಲ. ಆಡಳಿತ ಪಕ್ಷದ ಡಿಸಿಎಂ, ಶಾಸಕರು ಹಾಗೂ ವೀರಶೈವ ಮಹಾಸಭಾದ ಶಾಮನೂರು ಶಿವಶಂಕರಪ್ಪ ಸೇರಿದಂತೆ ಸರ್ಕಾರದ ಸಚಿವರೇ ವಿರೋಧ ಮಾಡಿದ್ದಾರೆ.
ನ್ಯಾ|ಕಾಂತರಾಜು ವರದಿ ಸರಿಯಿಲ್ಲ. ಯಾರ ಮನೆಗೂ ಹೋಗಿ ಸಮೀಕ್ಷೆ ಮಾಡಿಲ್ಲ. ಇದು ಅವೈಜ್ಞಾನಿಕ ಸರಿಯಾದ ರೀತಿ ಸಮೀಕ್ಷೆ ಮಾಡಿ ಅದರ ಆಧಾರದಲ್ಲಿ ವರದಿ ನೀಡಬೇಕು ಎಂದರು.
ಜಮೀರ್ ಅಹಮದ್ ಖಾನ್ ತಾವು ಸಚಿವರು ಎಂಬುದನ್ನು ಮರೆತು ಮಾತನಾಡುವುದು ಸರಿಯಲ್ಲ. ಅವರು ಸಭಾಪತಿ ಹುದ್ದೆಗೆ ಅಪಮಾನ ಮಾಡಿದ್ದಾರೆ. ಅವರ ಹೇಳಿಕೆ ಖಂಡನೀಯ ಎಂದ ರೇಣುಕಾಚಾರ್ಯ, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲಿದೆ. ತೆಲಂಗಾಣ ಹಾಗೂ ಮಿಜೋರಾಂನಲ್ಲಿ ಪೈಪೋಟಿ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
M. P. Renukacharya:ಪ್ಯಾಲೆಸ್ತೇನ್ ಪರ ಧ್ವಜ ಹಾರಿಸುವವರ ಮೇಲೆ ಗುಂಡು ಹೊಡೆಯಿರಿ
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.