BJP; ರಾಜಸ್ಥಾನದಲ್ಲಿ ಅಧಿಕಾರ ಸಿಕ್ಕರೆ ಮಾನ್ ಸಿಂಗ್ 2 ಮೊಮ್ಮಗಳಿಗೆ ಪಟ್ಟ?

ಲೆಕ್ಕಾಚಾರ ಮಾಡಿಯೇ ಸಂಸದೆಯನ್ನು ಕಣಕ್ಕಿಳಿಸಿದ್ದು ಎನ್ನಲಾಗುತ್ತಿದೆ...

Team Udayavani, Dec 2, 2023, 6:23 PM IST

1-sadsd-sad

ಜೈಪುರ: ವಿಧಾನಸಭಾ ಚುನಾವಣ ಫಲಿತಾಂಶ ಭಾನುವಾರ ಪ್ರಕಟಗೊಳ್ಳಲಿದ್ದು ಪ್ರಮುಖವಾಗಿ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರವನ್ನು ಮರಳಿ ಪಡೆಯುವ ಭಾರಿ ವಿಶ್ವಾಸ ಹೊಂದಿದೆ. ಹಲವು ಸಮೀಕ್ಷೆಗಳೂ ಬಿಜೆಪಿಗೆ ಅಧಿಕಾರ ಸಿಗಲಿದೆ ಎನ್ನುವ ಭವಿಷ್ಯ ನುಡಿದಿದೆ.

ಬಿಜೆಪಿ ದೊಡ್ಡ ಬದಲಾವಣೆ ಮಾಡುವ ಸಾಹಸಕ್ಕೆ ಮುಂದಾಗಲಿದೆ ಎನ್ನುವ ಮಾತುಗಳು ರಾಷ್ಟ್ರ ರಾಜಕೀಯದಲ್ಲಿ ತೀವ್ರವಾಗಿ ಕೇಳಿಬರುತ್ತಿದ್ದು, ಬಹುಮತ ದೊರೆತು ಅಧಿಕಾರ ಸಿಕ್ಕರೆ  ಮಾಜಿ ಮುಖ್ಯಮಂತ್ರಿ,70 ರ ಹರೆಯದ ವಸುಂಧರಾ ರಾಜೇ ಅವರ ಬದಲಾಗಿ ರಾಜ ಮನೆತನದ ಪರಂಪರೆಯ ದಿಯಾ ಕುಮಾರಿ ಅವರಿಗೆ ಮಹಿಳಾ ಕೋಟಾದ ಅಡಿಯಲ್ಲಿ ಪ್ರಮುಖ ಹುದ್ದೆ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಬಿಜೆಪಿ ಸಂಸದೆಯಾಗಿರುವ 52 ರ ಹರೆಯದ ದಿಯಾ ಅವರು ವಿದ್ಯಾಧರ್‌ನಗರದಿಂದ ಕಣಕ್ಕಿಳಿದಿದ್ದಾರೆ. ಮಹಾರಾಜ ಸವಾಯಿ ಮಾನ್ ಸಿಂಗ್ 2  ಅವರ ಮೊಮ್ಮಗಳಾಗಿ ಬಲವಾದ ರಾಜಕೀಯ ಹಿನ್ನೆಲೆ ಮತ್ತು ತನ್ನದೇ ಆದ ಪ್ರಾಬಲ್ಯವನ್ನು ಹೊಂದಿದ್ದಾರೆ.

ಜೈಪುರ ಸಿಟಿ ಪ್ಯಾಲೇಸ್ ಸೇರಿದಂತೆ ಹಲವಾರು ಆಸ್ತಿಗಳು, ವ್ಯವಹಾರಗಳು, ಟ್ರಸ್ಟ್‌ಗಳು ಮತ್ತು ಶಾಲೆಗಳನ್ನು ನಿರ್ವಹಿಸುತ್ತಿರುವ ದಿಯಾ ಬಿಲಿಯನೇರ್. ಜೈಗಢ್ ಫೋರ್ಟ್, ಮಹಾರಾಜ ಸವಾಯಿ ಮಾನ್ ಸಿಂಗ್ 2 ಮ್ಯೂಸಿಯಂ ಟ್ರಸ್ಟ್, ಜೈಪುರ ಮತ್ತು ಜೈಗಢ್ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್, ಅರಮನೆ ಶಾಲೆ ಮತ್ತು ಮಹಾರಾಜ ಸವಾಯಿ ಭವಾನಿ ಸಿಂಗ್ ಶಾಲೆಗಳನ್ನೂ ನಡೆಸುತ್ತಿದ್ದಾರೆ. ಜೈಪುರದ ರಾಜಮಹಲ್ ಅರಮನೆ, ಮೌಂಟ್ ಅಬುನಲ್ಲಿರುವ ಹೋಟೆಲ್ ಜೈಪುರ ಹೌಸ್ ಮತ್ತು ಹೋಟೆಲ್ ಲಾಲ್ ಮಹಲ್ ನ ಮಲಕತ್ವವನ್ನೂ ಹೊಂದಿದ್ದಾರೆ.

ಕುಮಾರಿಯವರ ತಂದೆ, ಜೈಪುರದ ಮಾಜಿ ಪಟ್ಟದ ರಾಜ ದಿವಂಗತ ಭವಾನಿ ಸಿಂಗ್ ಅವರು 1989 ರ ಲೋಕಸಭಾ ಚುನಾವಣೆಯಲ್ಲಿ ಜೈಪುರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು, ಆದರೆ ಬಿಜೆಪಿ ಅಭ್ಯರ್ಥಿ ಎದುರು ಪರಾಭವಗೊಂಡಿದ್ದರು. ಕುಮಾರಿಯವರ ಮಲತಾಯಿ ಮತ್ತು ಜೈಪುರದ ಮಾಜಿ ರಾಣಿ ಗಾಯತ್ರಿ ದೇವಿ ಅವರು 1962, 1967 ಮತ್ತು 1971 ರಲ್ಲಿ ಜೈಪುರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಅವರು ಸ್ವತಂತ್ರ ಪಕ್ಷದ ಟಿಕೆಟ್‌ನಲ್ಲಿ ದಾಖಲೆಯ ಅಂತರದಿಂದ ಈ ಚುನಾವಣೆಗಳನ್ನು ಗೆದ್ದಿದ್ದರು.

ಜೈಪುರದಲ್ಲಿ 2013 ಸೆಪ್ಟೆಂಬರ್ 10 ರಂದು ನಡೆದ ಬೃಹತ್ ರ‍್ಯಾಲಿಯಲ್ಲಿ ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಸಮ್ಮುಖದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

2013 ರ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸವಾಯಿ ಮಾಧೋಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದರು. ವಿರೋಧಿ ಅಲೆಯಿಂದಾಗಿ ಬಿಜೆಪಿ ಸೋತಿದ್ದ 2018 ರ ಚುನಾವಣೆಯಲ್ಲಿ ಸ್ಪರ್ಧಿಸದೇ ಬುದ್ದಿವಂತಿಕೆ ತೋರಿದ್ದರು. 2019 ರಲ್ಲಿ ರಾಜ್‌ಸಮಂದ್‌ನಿಂದ ಲೋಕಸಭೆಗೆ ಆಯ್ಕೆಯಾದರು. 8.58 ಲಕ್ಷ ಮತಗಳನ್ನು ಪಡೆದು, ದಾಖಲೆಯ 5.51 ಲಕ್ಷ ಮತಗಳ ಅಂತರದ ದಿಗ್ವಿಜಯ ಸಾಧಿಸಿದ್ದರು. 2019 ರ ಅಗ್ರ 20 ಗೆಲುವಿನ ಅಂತರಗಳಲ್ಲಿ ಇವರದ್ದೂ ಒಂದಾಗಿದೆ.

”ನಾಯಕತ್ವದ ವಿಚಾರ ಫಲಿತಾಂಶ ಪ್ರಕಟವಾದ ನಂತರ ಪಕ್ಷದ ಸಂಸದೀಯ ಮಂಡಳಿ ಮತ್ತು ಪಕ್ಷದ ಉನ್ನತ ನಾಯಕತ್ವ ನಿರ್ಧರಿಸುತ್ತದೆ.ಪಕ್ಷ ನನಗೆ ಯಾವುದೇ ಕೆಲಸ ನೀಡಿದರೂ, ನಾನು ಯಾವಾಗಲೂ ಅದನ್ನು ಪೂರ್ಣಗೊಳಿಸುತ್ತೇನೆ”ಎಂದು ದಿಯಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Recipe; ಈ ಸ್ನಾಕ್ಸ್ ಒಂದು ಸಲ ಮಾಡಿದ್ರೆ ಸಾಕು ಪದೇ ಪದೇ ಮಾಡ್ತೀರಾ ಏನ್ ರುಚಿ ಗೊತ್ತಾ!

Recipe; ಈ ಸ್ನಾಕ್ಸ್ ಒಂದು ಸಲ ಮಾಡಿದ್ರೆ ಸಾಕು ಪದೇ ಪದೇ ಮಾಡ್ತೀರಾ ಏನ್ ರುಚಿ ಗೊತ್ತಾ!

Sheetal Devi: ಕೈಗಳಿಲ್ಲದ ಹುಡುಗಿ ಬಿಲ್ಗಾರಿಕೆಯಲ್ಲಿ ನಿಪುಣೆ; ಇದು ಸ್ಪೂರ್ತಿಯ ಕಥೆ

Sheetal Devi: ಕೈಗಳಿಲ್ಲದ ಹುಡುಗಿ ಬಿಲ್ಗಾರಿಕೆಯಲ್ಲಿ ನಿಪುಣೆ; ಇದು ಸ್ಪೂರ್ತಿಯ ಕಥೆ

1-asaasas

Haryana ಗೆಲ್ಲಲು ಕೈ ಕಸರತ್ತು: ರಾಹುಲ್ ಭೇಟಿಯಾದ ವಿನೇಶ್, ಬಜರಂಗ್ !

6-WLD

Weight Loss Drinks: ತೂಕ, ಕೊಬ್ಬು ಕಡಿಮೆ ಮಾಡಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ

Death Penalty: ಸ್ವಾತಂತ್ರ್ಯ ನಂತರ ಭಾರತದಲ್ಲಿ ಗಲ್ಲಿಗೇರಿಸಲ್ಪಟ್ಟ ಮೊದಲ ಮಹಿಳಾ ಕೈದಿ ಈಕೆ!

Death Penalty: ಸ್ವಾತಂತ್ರ್ಯ ನಂತರ ಭಾರತದಲ್ಲಿ ಗಲ್ಲಿಗೇರಿಸಲ್ಪಟ್ಟ ಮೊದಲ ಮಹಿಳಾ ಕೈದಿ ಈಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.