Minister ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ
Team Udayavani, Dec 2, 2023, 6:22 PM IST
ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದ್ದು ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಮ್ಮದೇ ಪಕ್ಷದ ಸಚಿವರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ , ನಮಗೂ ಜವಾಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.
ನಾವೆಲ್ಲ ಯಡಿಯೂರಪ್ಪ ಅವರ ಮಕ್ಕಳನ್ನು ಸೋಲಿಸಬೇಕು ಎಂದು ಇದ್ದೇವೆ. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಬೇಕು ಅನ್ನೋದು ಗುರಿ. ಆದರೆ, ನಮ್ಮ ಸಚಿವರು ನಮ್ಮಲ್ಲೇ ಒಡಕು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನೂ ಒಗ್ಗೂಡಿಸಿ ಕರೆದುಕೊಂಡು ಹೋಗಬೇಕು. ಅವರೇ ಪಕ್ಷವನ್ನು ಒಡೆಯುವುದಲ್ಲ ಎಂದರು.
ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಆದರೆ ನಾನೊಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.