Aditya-L1: ಸೌರ ಮಾರುತ ಕಣಗಳ ಅಧ್ಯಯನ ಆರಂಭ
- ಆದಿತ್ಯ-ಎಲ್1 ನೌಕೆಯ ಪೇಲೋಡ್ ಕಾರ್ಯಾಚರಣೆ ಆರಂಭ
Team Udayavani, Dec 2, 2023, 10:20 PM IST
ಹೊಸದಿಲ್ಲಿ: ಸೂರ್ಯನ ಅಧ್ಯಯನಕ್ಕೆಂದು ಸತತ 3 ತಿಂಗಳ ಕಾಲ ದೀರ್ಘ ಪಯಣ ಬೆಳೆಸಿದ್ದ ಭಾರತದ ಆದಿತ್ಯ-ಎಲ್1 ನೌಕೆಯು ಶನಿವಾರ ಮಹತ್ವದ ಮೈಲುಗಲ್ಲನ್ನು ಸಾಧಿಸಿದ್ದು, ಸೌರ ಮಾರುತಗಳ ಅಧ್ಯಯನ ಆರಂಭಿಸಿದೆ.
ಆದಿತ್ಯ ಎಲ್1 ನೌಕೆಯಲ್ಲಿರುವ ಆದಿತ್ಯ ಸೌರ ಮಾರುತ ಕಣಗಳ ಪ್ರಯೋಗದ ಪೇಲೋಡ್(ಎಎಸ್ಪಿಇಎಕ್ಸ್) ತನ್ನ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಇಡೀ ವ್ಯವಸ್ಥೆ ಸುಸ್ಥಿತಿಯಲ್ಲಿದೆ ಎಂದು ಇಸ್ರೋ ತಿಳಿಸಿದೆ.
ಅಯಾನುಗಳನ್ನು ಅಳೆದ ಸ್ವಿಸ್
ಎಎಸ್ಪಿಇಎಕ್ಸ್ ಒಟ್ಟು ಎರಡು ಸಾಧನಗಳನ್ನು ಒಳಗೊಂಡಿದೆ. ಅವೆಂದರೆ ಸೋಲಾರ್ ವಿಂಡ್ ಅಯಾನ್ ಸ್ಪೆಕ್ಟ್ರೋಮೀಟರ್(ಸ್ವಿಸ್) ಮತ್ತು ಸುಪ್ರಾ ಥರ್ಮಲ್ ಆ್ಯಂಡ್ ಎನರ್ಜೆಟಿಕ್ ಪಾರ್ಟಿಕಲ್ ಸ್ಪೆಕ್ಟ್ರೋಮೀಟರ್(ಸ್ಟೆಪ್ಸ್). ಈ ಪೈಕಿ ಸ್ಟೆಪ್ಸ್ ಸಾಧನವು ಸೆ.10ರಂದೇ ತನ್ನ ಕಾರ್ಯಾಚರಣೆ ಆರಂಭಿಸಿದ್ದರೆ ಸ್ವಿಸ್ ಸಾಧನವು ಶನಿವಾರ ಸಕ್ರಿಯಗೊಂಡಿದ್ದು, ಅತ್ಯುತ್ತಮ ಕಾರ್ಯಕ್ಷಮತೆಯನ್ನು ತೋರಿದೆ. ಈ ಸಾಧನವು ಸೌರ ಮಾರುತದ ಅಯಾನುಗಳನ್ನು ಅಂದರೆ ಪ್ರೊಟಾನುಗಳು ಮತ್ತು ಆಲ್ಫಾ ಕಣಗಳನ್ನು ಯಶಸ್ವಿಯಾಗಿ ಅಳೆದಿದೆ.
ಇದರಿಂದಾಗಿ ಸೌರ ಮಾರುತದ ಕಣಗಳ ವರ್ತನೆಯ ಸಮಗ್ರ ಚಿತ್ರಣವನ್ನು ಪಡೆಯಲು ಸಾಧ್ಯವಾಗಲಿದೆ. ಜತೆಗೆ ಸೌರ ಮಾರುತದ ಗುಣಲಕ್ಷಣಗಳು, ಅಂತರ್ಗತ ಪ್ರಕ್ರಿಯೆಗಳು ಹಾಗೂ ಭೂಮಿಯ ಮೇಲೆ ಅವುಗಳ ಪ್ರಭಾವದ ಕುರಿತ ದೀರ್ಘಕಾಲದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವಲ್ಲಿ ಗಮನಾರ್ಹ ಕೊಡುಗೆಯನ್ನು ಇದು ನೀಡಲಿದೆ ಎಂದು ಇಸ್ರೋ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.