Bidar: ಭೀಮಣ್ಣ ಖಂಡ್ರೆ ಹೋರಾಟದ ಬದುಕು ಸ್ಫೂರ್ತಿದಾಯಕ- ಸಿಎಂ ಬಣ್ಣನೆ

ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ

Team Udayavani, Dec 2, 2023, 11:18 PM IST

SIDDARAMAYYA CM

ಬೀದರ್‌: ಸಮಾಜಮುಖೀ ಕೆಲಸಗಳ ಮೂಲಕ ತುಂಬು ಮತ್ತು ಸಾರ್ಥಕ ಜೀವನ ನಡೆಸಿದ ಡಾ| ಭೀಮಣ್ಣ ಖಂಡ್ರೆಯವರು ನಮಗೆಲ್ಲ ರಿಗೂ ಪ್ರೇರಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾಲ್ಕಿಯಲ್ಲಿ ಶನಿವಾರ ಹಮ್ಮಿ ಕೊಂಡ ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ “ಲೋಕನಾಯಕ’ ಅಭಿನಂದನ ಗ್ರಂಥ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಪ್ರತಿ ವ್ಯಕ್ತಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು. ಹುಟ್ಟು-ಸಾವಿನ ಮಧ್ಯೆ ಸಮಾಜದ ಪರ ಕೆಲಸ ಮಾಡುವವರನ್ನು ಜನ ಸ್ಮರಿಸುತ್ತಾರೆ. ಅಂಥ ಸಾರ್ಥಕ ಬದುಕು ಖಂಡ್ರೆ ಅವರದ್ದಾಗಿದೆ ಎಂದು ಬಣ್ಣಿಸಿದರು.

ಡಾ| ಭೀಮಣ್ಣ ಹುಟ್ಟು ಹೋರಾಟ ಗಾರರು. ಸಹಕಾರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಕೆಲಸ ಮಾಡಿದ್ದಾರೆ. ಗಡಿ ಭಾಗ ಬೀದರ ಜಿಲ್ಲೆ ಇಂದು ಕರ್ನಾಟಕದಲ್ಲಿ ಉಳಿಯುವಲ್ಲಿ ಅವರ ಪರಿಶ್ರಮವೂ ಹೆಚ್ಚಿದೆ. ಜತೆಗೆ ಇಂದಿನ ಕಲ್ಯಾಣ ಕರ್ನಾಟಕ ಭಾಗದ ವಿಮೋಚನ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಖಂಡ್ರೆಯವರ ಹೋರಾಟ ನಮ್ಮೆಲ್ಲರಿಗೂ ಸ್ಫೂರ್ತಿದಾಯಕ ಎಂದರು.

ಅಭಿನಂದನಾ ಗ್ರಂಥ ಎಂಬುದು ನಾವು ಜೀವನದಲ್ಲಿ ಮಾಡಿರುವ ಸತ್ಕಾರ್ಯಗಳಿಗೆ ಪ್ರತಿಬಿಂಬವಾಗಿದೆ. “ಲೋಕನಾಯಕ’ ಗ್ರಂಥದಲ್ಲಿ ಡಾ| ಭೀಮಣ್ಣ ಅವರ ವ್ಯಕ್ತಿತ್ವ ಹಿಡಿದಿಡ
ಲಾಗಿದೆ. ಖಂಡ್ರೆಯವರ ಒಡನಾಡಿಗಳು, ಅವರ ಸಮಾಜ ಸೇವೆ, ಸಾಧನೆಗಳು ಮತ್ತು ಬಸವತತ್ವ ಪ್ರಚಾರ ಹೀಗೆ ಹಲವು ವಿಷಯಗಳನ್ನು ಲೇಖನಗಳ ಮೂಲಕ ಪರಿಚಯಿಸಿದ್ದಾರೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಿದರು. ಸುತ್ತೂರು ಶ್ರೀಗಳು, ಸಿರಿಗೆರೆ ಶ್ರೀಗಳು, ತುಮಕೂರು ಶ್ರೀಗಳು, ಶ್ರೀಶೈಲ ಜಗದ್ಗುರುಗಳು, ಭಾಲ್ಕಿಯ ಡಾ| ಬಸವಲಿಂಗ ಪಟ್ಟದ್ದೇವರು, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್‌, ವೀರಪ್ಪ ಮೊಯ್ಲಿ, ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಗೋರು ಚನ್ನಬಸಪ್ಪ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌, ಸಚಿವರಾದ ಎಚ್‌.ಕೆ ಪಾಟೀಲ, ಕೆ.ಎಚ್‌ ಮುನಿಯಪ್ಪ, ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್‌, ಎಚ್‌.ಸಿ ಮಹಾದೇವಪ್ಪ, ಎಸ್‌.ಎಸ್‌. ಮಲ್ಲಿಕಾರ್ಜುನ, ಕೆ.ಎನ್‌. ರಾಜಣ್ಣ, ಶರಣಬಸಪ್ಪ ದರ್ಶನಾಪುರ, ಡಾ| ಶರಣಪ್ರಕಾಶ ಪಾಟೀಲ, ಜಮೀರ್‌ ಅಹ್ಮದ್‌ ಖಾನ್‌, ರಹೀಮ್‌ ಖಾನ್‌, ಆರ್‌.ಬಿ.ತಿಮ್ಮಾಪುರ, ಎನ್‌.ಎಸ್‌.
ಭೋಸರಾಜು ಇನ್ನಿತರರು ಪಾಲ್ಗೊಂಡಿದ್ದರು.

ಖಂಡ್ರೆ ಮಹಾನ್‌ ವ್ಯಕ್ತಿ: ಖರ್ಗೆ
ರಾಜಕಾರಣಿಗಳು ಅರವತ್ತು-ಎಪ್ಪತ್ತು ವರ್ಷ ಬದುಕುವುದೇ ಕಷ್ಟ. ಆದರೆ ಹೋರಾಟಮಯ ಜೀವನದ ಮೂಲಕ ಶತಾಯುಷಿಗಳಾಗಿ ರಾಜಕೀಯದ ಗುರಿ ಸಾ ಧಿಸಿದ ಡಾ| ಭೀಮಣ್ಣ ಖಂಡ್ರೆ ಅವರು ಮಹಾನ್‌ ವ್ಯಕ್ತಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದರು.

ಹಲವು ಸಾಮಾಜಿಕ ಕಾರ್ಯಕ್ರಮ ಮತ್ತು ರಾಜಕೀಯ ಕೆಲಸಗಳ ಮೂಲಕ ಖಂಡ್ರೆಯವರು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಸಮಾಜದವರನ್ನು ಒಗ್ಗೂಡಿಸುವ ಮಹತ್ವದ ಕಾರ್ಯ ಮಾಡಿದ್ದಾರೆ. ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೆ ಅದನ್ನು ಪೂರ್ಣಗೊಳಿಸುವವರೆಗೆ ಸುಮ್ಮನೆ ಕೂಡದಂತಹ ಛಲವಾದಿ ವ್ಯಕ್ತಿತ್ವ ಅವರದ್ದು ಎಂದರು.
ಖಂಡ್ರೆಯವರು ಇನ್ನೂ ಸು ದೀರ್ಘ‌ ಕಾಲ ಆರೋಗ್ಯವಂತರಾಗಿ ಬದುಕಲಿ, ಅವರಿಂದ ಮತ್ತಷ್ಟು ಸಮಾಜ ಸೇವಾ ಕಾರ್ಯಗಳು ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.