![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 2, 2023, 11:59 PM IST
ಖಾನ್ ಯೂನಿಸ್: ತಾತ್ಕಾಲಿಕ ಕದನ ವಿರಾಮ ಶುಕ್ರವಾರಕ್ಕೆ ಮುಕ್ತಾಯಗೊಂಡಿ ರುವಂತೆಯೇ ಗಾಜಾ ಪಟ್ಟಿಯಲ್ಲಿ ಹಮಾಸ್ ಉಗ್ರರನ್ನು ಮಟ್ಟ ಹಾಕುವ ಕಾರ್ಯಾಚರಣೆ ಬಿರುಸುಗೊಳಿಸಿದೆ. ವಿಶೇಷವಾಗಿ ಗಾಜಾ ಪಟ್ಟಿಯ ದಕ್ಷಿಣ ಭಾಗವನ್ನು ಆರಿಸಿಕೊಂಡು, ವೈಮಾನಿಕ ದಾಳಿ ನಡೆಸಲಾಗುತ್ತಿದೆ. ಹೀಗಾಗಿ ಶುಕ್ರವಾರದಿಂದ ಶನಿವಾರದ ಅವಧಿಯಲ್ಲಿ ಸಾವಿನ ಸಂಖ್ಯೆ 200ನ್ನು ಮೀರಿಸಿದೆ. ಈ ನಡುವೆ ದಕ್ಷಿಣ ಲೆಬನಾನ್ನಲ್ಲಿಯೂ ಇಸ್ರೇಲ್ ದಾಳಿ ನಡೆಸಿದೆ.
ಈ ನಡುವೆ, ಗಾಜಾ ಪಟ್ಟಿಯ ಸರಕಾರ ನೀಡಿದ ಮಾಹಿತಿಯ ಪ್ರಕಾರ ಅ.7ರಿಂದ ಈಚೆಗೆ ನಡೆಯುತ್ತಿರುವ ಕಾರ್ಯಾಚರಣೆ ಯಲ್ಲಿ ಸಾವಿಗೀಡಾದವರ ಸಂಖ್ಯೆ 15, 200. ಈ ಪೈಕಿ ಶೇ.70 ಮಂದಿ ಮಹಿಳೆಯರು ಮತ್ತು ಮಕ್ಕಳೇ ಆಗಿದ್ದಾರೆ. ಜತೆಗೆ 40 ಸಾವಿರಕ್ಕೂ ಅಧಿಕ ಮಂದಿ ಗಾಯ ಗೊಂಡಿದ್ದಾರೆ.
ಸಂಧಾನಕಾರರು ವಾಪಸ್: ಹಮಾಸ್ ಉಗ್ರ ಸಂಘಟನೆಯ ಜತೆಗೆ ಕದನ ವಿರಾಮ ಸದ್ಯಕ್ಕೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇಸ್ರೇಲ್ ತನ್ನ ಕಡೆಯ ಸಂಧಾನ ಕಾರರನ್ನು ವಾಪಸ್ ಕರೆಯಿಸಿಕೊಳ್ಳಲು ತೀರ್ಮಾನಿಸಿದೆ. ಎಂಟು ವಾರಗಳ ಅವಧಿಯ ಕಾಳಗದಲ್ಲಿ ಗಾಜಾ ಪಟ್ಟಿಯ ಶೇ.80 ಮಂದಿ ನಿರ್ಗತಿಕರಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.
ನಿಗಾ, ಶೋಧ ಮತ್ತು ಹತ್ಯೆ
ಜಗತ್ತಿನಾದ್ಯಂತ ಇರುವ ಇಸ್ರೇಲ್ನ ವೈರಿಗಳು ವಿಶೇಷವಾಗಿ ಹಮಾಸ್ ನಾಯಕರನ್ನು ಕೊಂದೇ ಬಿಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಗಾಜಾ ಪಟ್ಟಿಯ ಯುದ್ಧದ ಬಳಿಕ ನಿಗಾ, ಶೋಧ ಮತ್ತು ಹತ್ಯೆ ಎಂಬ ಯೋಚನೆಯನ್ನು ಕರಾರುವಾಕ್ಕಾಗಿ ಅನುಷ್ಠಾನಗೊಳಿಸುವಂತೆ ಗುಪ್ತಚರ ಸಂಸ್ಥೆ ಮೊಸಾದ್ಗೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೂಚಿಸಿದ್ದಾರೆ. ಟರ್ಕಿ, ಕತಾರ್ ಮತ್ತು ಲೆಬನಾನ್ಗಳಲ್ಲಿ ಇರುವ ಹಮಾಸ್ನ ವರಿಷ್ಠ ನಾಯಕರನ್ನು ಮುಗಿಸಲು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖೀಸಿ “ವಾಲ್ಸ್ಟ್ರೀಟ್ ಜರ್ನಲ್’ ಪತ್ರಿಕೆ ವರದಿ ಮಾಡಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.