KPS: ಸಾವಿರ ಶಾಲೆಗಳಲ್ಲಿ ಒಂದೇ ಸೂರಿನಡಿ ಶಿಕ್ಷಣ!

ರಾಜ್ಯದಲ್ಲಿ ಮತ್ತಷ್ಟು ಕೆಪಿಎಸ್‌ ಆರಂಭಿಸಲು ಸರಕಾರ ಚಿಂತನೆ

Team Udayavani, Dec 3, 2023, 12:24 AM IST

teacher student

ಕಾರ್ಕಳ: ಶಾಲೆಗಳನ್ನು ಗುಣಮಟ್ಟದ ಶೈಕ್ಷಣಿಕ ಕೇಂದ್ರಗಳನ್ನಾಗಿ (ಸೆಂಟರ್‌ ಆಫ್ ಎಕ್ಸೆಲೆನ್ಸ್‌) ಪರಿವರ್ತಿಸಲು 2024-25ನೇ ಸಾಲಿನಲ್ಲಿ ರಾಜ್ಯದಲ್ಲಿ ಹಂತಹಂತವಾಗಿ 1 ಸಾವಿರ ಕರ್ನಾ ಟಕ ಪಬ್ಲಿಕ್‌ ಸ್ಕೂಲ್‌ (ಕೆಪಿಎಸ್‌)ಗಳನ್ನು ತೆರೆಯಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.

ಪ್ರತೀ ಮಗುವಿಗೂ ಶಿಕ್ಷಣ ಎಂಬ ನೀತಿಯನ್ವಯ ನೀತಿಯನ್ವಯ ಪೂರ್ವ ಪ್ರಾಥಮಿಕ ಶಾಲೆಯಿಂದ 12ನೇ ತರಗತಿವರೆಗೆ ಗುಣಾತ್ಮಕ ಶಿಕ್ಷಣ ನೀಡಲು 2018ರಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸಲಾಗಿತ್ತು. ದ.ಕ.ದಲ್ಲಿ 9 ಹಾಗೂ ಉಡುಪಿಯಲ್ಲಿ 8 ಸಹಿತ ರಾಜ್ಯದಲ್ಲಿ ಪ್ರಸ್ತುತ ಇಂತಹ 285 ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ.

ಹೊಸ ಶಾಲೆ
ಕರ್ನಾಟಕ ಜ್ಞಾನ ಆಯೋಗದ ಶಿಫಾರಸುಗಳ ಜಾರಿಯಡಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಮುಂದಿನ ಸಾಲಿನಲ್ಲಿ ಹೊಸದಾಗಿ ಕೆಪಿಎಸ್‌ಗಳನ್ನು ಆರಂಭಿಸಲು ಇಲಾಖೆಯ ಸಮಗ್ರ ಶಿಕ್ಷಣ (ಗುಣಮಟ್ಟ) ವಿಭಾಗದ ನಿರ್ದೇಶಕರು ಸೂಕ್ತ ಶಾಲೆಗಳನ್ನು ಗುರುತಿಸಲು ಎಲ್ಲ ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರಿಗೆ ಸುತ್ತೋಲೆ ಕಳುಹಿಸಲಾಗಿದೆ. ಈಗಾಗಲೇ ಜಿಲ್ಲಾವಾರು ಮಾಹಿತಿ ಸಂಗ್ರಹವೂ ಪ್ರಗತಿಯಲ್ಲಿದೆ. ಈ ಕೆಪಿಎಸ್‌ಗಳಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಬೋಧನ ಪದ್ಧತಿ ಇರಲಿದೆ.

ಮಾನದಂಡಗಳೇನು?
ಒಂದೇ ಆವರಣದಲ್ಲಿ ಹೊಂದಿ ಕೊಂಡಂತೆ ಸರಕಾರಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಇದ್ದು ಕನಿಷ್ಠ 500 ಮಕ್ಕಳು ಇರಬೇಕು. ತಪ್ಪಿದಲ್ಲಿ ಒಂದೇ ಆವರಣದಲ್ಲಿ ಹೊಂದಿಕೊಂಡಂತೆ ಸರಕಾರಿ ಪ್ರಾಥಮಿಕ, ಪ್ರೌಢಶಾಲೆ ಇರಬೇಕು. ಇರದಿದ್ದಲ್ಲಿ ಕನಿಷ್ಠ ಸುಮಾರು 500 ಮೀ. ಅಂತರದಲ್ಲಿ ಸರಕಾರಿ ಪ್ರಾಥಮಿಕ, ಪ್ರೌಢಶಾಲೆ, ಪ.ಪೂ. ಕಾಲೇಜು ಇರಬೇಕು.
ಸರಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು ಈ ಒಂದೇ ಸೂರಿನಡಿ ಪ್ರಾಥಮಿಕ ಹಂತದಿಂದ ಪ್ರೌಢಶಿಕ್ಷಣ ಹಂತದವರೆಗೆ ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಮುಂದಾಗಿದೆ.

ಶಾಲೆಯ ವೈಶಿಷ್ಟ್ಯಗಳೇನು?
ಈ ಶಾಲೆಗಳಲ್ಲಿ ಆಯಾ ಹಂತದ ಮಕ್ಕಳಿಗೆ ಉತ್ತಮ ಕೊಠಡಿ, ಸುಸಜ್ಜಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್‌ ಲ್ಯಾಬ್‌ ಮತ್ತು ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯಗಳಿರಲಿವೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿರಲಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತದೆ. ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲದೆ ವೃತ್ತಿ ಶಿಕ್ಷಣ, ಕಲೆ, ಸಂಗೀತ ಇತ್ಯಾದಿ ಸಹ ಪಠ್ಯೇತರ ಚಟುವಟಿಕೆಗಳಿಗೂ ತರಬೇತಿ ನೀಡಲಾಗುವುದು. ಗುರು ಚೇತನ ಕಾರ್ಯಕ್ರಮದಡಿ ವಿಶೇಷ ಶಿಕ್ಷಕರನ್ನೂ ನೇಮಿಸಲಾಗುತ್ತದೆ.

ತಂತ್ರಜ್ಞಾನ ಕಲಿಕೆಗೂ ಆದ್ಯತೆ
ಈ ಶಾಲೆಯಲ್ಲಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲಾಗುತ್ತದೆ. ಇಂಗ್ಲಿಷ್‌ ಭಾಷೆ ಮತ್ತು ಗಣಿತಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಪ್ರೌಢ
ಮತ್ತು ಪದವಿಪೂರ್ವ ಹಂತದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ನೆರವಿನ ಕಲಿಕೆಗೆ (ಟಿಎಎಲ್‌ಪಿ) ವಿಶೇಷ ಆದ್ಯತೆ ನೀಡುವುದರೊಂದಿಗೆ ಆರ್ಥಿಕ ನೆರವನ್ನೂ ಒದಗಿಸಲಾಗುತ್ತದೆ.

2024-25ನೇ ಸಾಲಿನಲ್ಲಿ ಪಬ್ಲಿಕ್‌ ಸ್ಕೂಲ್‌ಗ‌ಳನ್ನು ಆರಂಭಿಸಲು ಸೂಚಿತ ಮಾನದಂಡಗಳನ್ನು ಆಧರಿಸಿ ಸೂಕ್ತವಾಗಿರುವ ಶಾಲೆಗಳನ್ನು ಗುರುತಿಸಲಾಗುತ್ತಿದೆ. ನಮ್ಮ ಜಿಲ್ಲೆಗಳಲ್ಲಿ ಎಷ್ಟು ಶಾಲೆಗಳು ಹೆಚ್ಚುವರಿಯಾಗಿ ಸೇರಲಿವೆ ಎಂಬ ಸ್ಪಷ್ಟ ಚಿತ್ರಣ ಎರಡು ತಿಂಗಳಿನಲ್ಲಿ ತಿಳಿಯಬಹುದು.
-ಗಣಪತಿ ಮತ್ತು ದಯಾನಂದ, ಡಿಡಿಪಿಐಗಳು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ

ರಾಜ್ಯದಲ್ಲಿ ಕರ್ನಾಟಕ
ಪಬ್ಲಿಕ್‌ ಶಾಲೆಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವ ಹಿಸುತ್ತಿವೆ. ಹಂತ ಹಂತವಾಗಿ ಕೆಪಿಎಸ್‌ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಪ್ರತೀ ಶಾಸಕರಿಗೆ 5ರಿಂದ 6 ಶಾಲೆಗಳು, ಎರಡು ಗ್ರಾಮ ಪಂಚಾಯತ್‌ಗೆ ಒಂದರಂತೆ ಕರ್ನಾಟಕ ಪಬ್ಲಿಕ್‌ ಶಾಲೆ ತೆರೆಯುವ ಕುರಿತು ಕೂಡ ಚಿಂತನೆ ನಡೆಸುತ್ತಿದ್ದೇವೆ.
-ಮಧು ಬಂಗಾರಪ್ಪ, ಪ್ರಾಥಮಿಕ ಶಿಕ್ಷಣ ಸಚಿವ

 ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.