Confidence: ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು


Team Udayavani, Dec 3, 2023, 3:50 PM IST

10-uv-fusion

ಸಾಧನೆಯ ಹಾದಿಗೆ ಆತ್ಮವಿಶ್ವಾಸವೇ ಮೆಟ್ಟಿಲು. ಆತ್ಮವಿಶ್ವಾಸ ಇಲ್ಲವಾದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ಗುರಿ ತಲುಪುವ ದಾರಿಯಲ್ಲಿ ಏನೇ ಅಡ್ಡಿಯಾದರೂ ನಾನು ಎದುರಿಸುತ್ತೇನೆ, ನನ್ನ ಸಾಧನೆಗೆ ಅಡ್ಡಿಪಡಿಸುವವರನ್ನು ಮೆಟ್ಟಿ ನಿಲ್ಲುತ್ತೇನೆ ಎಂಬ ಆತ್ಮವಿಶ್ವಾಸ ನಮ್ಮಲ್ಲಿದ್ದರೆ ಒಂದಲ್ಲ ಒಂದು ದಿನ ನಮಗೆ ಯಶಸ್ಸು ಖಂಡಿತ.

ಆತ್ಮವಿಶ್ವಾಸ ಎಂಬುದು ವ್ಯಕ್ತಿಯ ಬಳಿ ಇರುವ ಅತ್ಯಮೂಲ್ಯ ಆಸ್ತಿಗಳಲ್ಲೊಂದು. ಅದನ್ನು ರಕ್ಷಿಸುತ್ತಾ, ಪೋಷಿಸುತ್ತಾ, ಸದ್ಭಳಕೆ ಮಾಡಿದರೆ ಆತನನ್ನು ಉತ್ತಮ ಸ್ಥಿತಿಗೆ ಕೊಂಡೊಯ್ಯುವುದರಲ್ಲಿ ಸಂಶಯವಿಲ್ಲ. ಆದ್ದರಿಂದಲೇ ಆತ್ಮವಿಶ್ವಾಸ ವ್ಯಕ್ತಿಯ ಯಶಸ್ಸಿನ ಮೊದಲ ಮೆಟ್ಟಿಲು ಎನ್ನುತ್ತಾರೆ. ತನ್ನ ಗುಣ ನಡತೆ, ಸ್ವಭಾವ, ನಡವಳಿಕೆಗಳನ್ನು ತಾನೇ ಮೆಚ್ಚಿಕೊಳ್ಳುವುದು ಮತ್ತು ಸ್ವಸಾಮರ್ಥಯದ ಬಗ್ಗೆ ವ್ಯಕ್ತಿಗಿರುವ ನಂಬಿಕೆಯೇ ಆತ್ಮವಿಶ್ವಾಸ.

ಆತ್ಮವಿಶ್ವಾಸ ಇದ್ದವರು ಸೋಲುವುದಿಲ್ಲ ಎಂದಲ್ಲ. ಆತ್ಮವಿಶ್ವಾಸ ಇದ್ದರೆ ಮಾಡಬೇಕಾಗಿರುವ ಕೆಲಸವನ್ನು ಆರಂಭಿಸಲು ಪ್ರೇರಣೆ ಸಿಗುತ್ತದೆ. ಅಷ್ಟೇ ಅಲ್ಲ ಕಷ್ಟಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ತೋರಿಸಿಕೊಡುತ್ತದೆ. ಮನಸ್ಸಿನ ಆಲೋಚನೆಯಂತೆ ಏನೋ ಮಾಡಬೇಕು ಎಂದುಕೊಂಡಿರುತ್ತೀರಿ. ಆ ಕೆಲಸ ಶುರು ಮಾಡುವ ಮೊದಲೇ ಆ ಕುರಿತು ನಕಾರಾತ್ಮಕ ಫಲಿತಾಂಶವೇ ಕಣ್ಣ ಮುಂದೆ ಕಾಣಿಸಿಕೊಳ್ಳಬಹುದು. ಇದರಿಂದ ನಮ್ಮೊಳಗಿನ ಸಾಮರ್ಥ್ಯ ಕುಂಠಿತವಾಗಬಹುದು. ಇಂತಹ ಭಯದಿಂದ ಹೊರಬರಲು ಪ್ರಯತ್ನಿಸಬೇಕು. ತನ್ನ ಬಗ್ಗೆ ಬೆಳೆಸಿಕೊಂಡು ಬಂದಿದ್ದ ನಂಬಿಕೆಗಳನ್ನು ಬಿಟ್ಟು ಹೊಸತನ್ನು ಕಂಡುಕೊಳ್ಳಬೇಕು. ಇತರರು ನಮ್ಮನ್ನು ಅಳೆಯುವ ಮೊದಲು ನಮ್ಮನ್ನು ನಾವು ಬದಲಾಯಿಸಿಕೊಳ್ಳಬೇಕು.

ದೋಣಿ ನಡೆಸಲು ಹರಿಗೋಲು ಎಷ್ಟು ಮುಖ್ಯವೋ ನಮ್ಮ ಬದುಕು ಸಾಗಿಸಲು ಆತ್ಮವಿಶ್ವಾಸ ಅಷ್ಟೇ ಮುಖ್ಯ. ಇದೊಂದಿದ್ದರೆ ನಮಗೆ ಎಂಥ ಕಷ್ಟದ ಪರಿಸ್ಥಿತಿ, ಸವಾಲುಗಳನ್ನೂ ಎದುರಿಸಬಹುದು. ಅಲ್ಲದೆ ಸವಾಲಿನ ಪ್ರಥಮಾರ್ಧವನ್ನು ಗೆದ್ದಂತೆ. ಇಲ್ಲವಾದರೆ ಸವಾಲುಗಳನ್ನು ಕಂಡಕೂಡಲೇ ಗಾಳಿ ತೆಗೆದ ಬಲೂನಿನಂತೆ ಕುಗ್ಗಿ ಬಿಡುತ್ತೇವೆ.

ನಮ್ಮಿಂದ ಈ ಕಾರ್ಯ ನಡೆಸಲು ಸಾಧ್ಯವೋ ಎಂದು ಚಿಂತಿಸುತ್ತಾ ಕೂತರೆ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಪ್ರಯತ್ನಶೀಲರಾದಾಗ ಎಂತಹ ಕಠಿನ ಕೆಲಸವಾದರೂ ಸಾಧಿಸುವ ಛಲ, ಧೈರ್ಯ ನಮ್ಮಲ್ಲಿ ಮೂಡಿ ಯಶಸ್ಸು ಹೊಂದಲು ಸಾಧ್ಯವಿದೆ.

ಆತ್ಮವಿಶ್ವಾಸದ ಇನ್ನೊಂದು ಮುಖ ಧೈರ್ಯ. ಧೈರ್ಯದಿಂದ ಮುಂದುವರಿದಾಗ ಜಯ ಖಂಡಿತ. ಸಮಯ, ಸಂದರ್ಭಕ್ಕೆ ಅನುಗುಣವಾಗಿ ಧೈರ್ಯ, ನಂಬಿಕೆಗಳನ್ನು ಬೆಳೆಸಿಕೊಳ್ಳಬೇಕು. ಆತ್ಮವಿಶ್ವಾಸ ಇಲ್ಲದವರನ್ನು ಹೇಡಿಗಳು, ಸೋಮಾರಿಗಳು, ತಮ್ಮ ಬಗ್ಗೆ ಅಪನಂಬಿಕೆ ಉಳ್ಳವರು ಎನ್ನಲಾಗುತ್ತದೆ. ಯಾವುದೇ ಕೆಲಸಗಳನ್ನು ಮಾಡಬೇಕಾಗಿ ಬಂದಾಗಲೂ “ನನ್ನಿಂದ ಆಗೋದಿಲ್ಲ’, “ನನಗೆ ಸಾಧ್ಯವಿಲ್ಲ’ ಎನ್ನುವುದೇ ಅವಿಶ್ವಾಸದ ಕುರುಹು. ಪ್ರತಿಯೊಬ್ಬನ ವರ್ತನೆ, ವ್ಯಕ್ತಿತ್ವದಿಂದ ಆತನ ಜೀವನ ಮೌಲ್ಯ ನಿರ್ಧರಿಸಲಾಗುತ್ತದೆ ಅಥವಾ ವ್ಯಕ್ತವಾಗುತ್ತದೆ. ಮೌಲ್ಯಗಳು ನಮ್ಮ ಜೀವನದಲ್ಲಿ ಸಕಾರಾತ್ಮಕ ಶಕ್ತಿಗಳನ್ನು ಬೆಳೆಸುತ್ತವೆ. ಇದರಿಂದ ಆತ್ಮವಿಶ್ವಾಸ ದ್ವಿಗುಣಗೊಳ್ಳುತ್ತದೆ.

ಯಾವುದೇ ಕೆಲಸ ಕಾರ್ಯಗಳನ್ನು ನಿರ್ವಹಿಸುವಾಗ ಒಮ್ಮೆ ಸೋಲಾಯಿತೆಂದು ಆತ್ಮವಿಶ್ವಾಸವನ್ನೇ ಕಳೆದುಕೊಳ್ಳುವುದಲ್ಲ. “ಮರಳಿ ಯತ್ನವ ಮಾಡು’ ಎಂಬಂತೆ ಮತ್ತೆ ಮತ್ತೆ ಪ್ರಯತ್ನಿಸಬೇಕು. ಸೋಲಿನಿಂದ ನಾವು ಕಳೆದುಕೊಳ್ಳುವುದು ಏನೂ ಇಲ್ಲ. ಆದರೆ ಪಾಠ ಕಲಿಯುತ್ತೇವೆ. ಅನುಭವ ಗಳಿಸುತ್ತೇವೆ. ನಮ್ಮಲ್ಲಿರುವ ಅಹಂಕಾರ ದೂರವಾಗುತ್ತದೆ. ಆದ್ದರಿಂದ ಸೋಲು ಬಂತೆಂದು ಹತಾಶರಾಗುವುದು ಬೇಡ. ಬದಲಾಗಿ ಸೋಲೇ ಗೆಲುವಿನ ಮೆಟ್ಟಿಲು ಎಂದು ಭಾವಿಸಿ, ಆತ್ಮವಿಶ್ವಾಸ ವೃದ್ಧಿಸಿಕೊಂಡು ಪ್ರಯತ್ನಶೀಲರಾಗುವುದು ತುಂಬಾ ಮುಖ್ಯ.

 ಸದಾಶಿವ ಬಿ.ಎನ್‌. ಉಡುಪಿ

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

Education System: ಶಿಕ್ಷಕರು, ಶಿಕ್ಷಣ ಹೇಗಿದ್ದರೆ ಚೆನ್ನ..?

19-uv-fusion

UV Fusion: ಶಿಕ್ಷಕರೊಂದಿಗಿನ ನೆನಪುಗಳು

18-uv-fusion

UV Fusion: ಬಯಕೆಯ ಬೆನ್ನೇರಿದಷ್ಟು ನೆಮ್ಮದಿ ಮರೀಚಿಕೆಯಷ್ಟೇ?

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

16-uv-fusion

UV Fusion: ಮಾತು ಅತಿಯಾಗದಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.