Chikaballapura: ಲೋಕಸಭೆ ಅಭ್ಯರ್ಥಿ ಆಯ್ಕೆಗೆ ಕೈ ಕಸರತ್ತು!
Team Udayavani, Dec 3, 2023, 4:11 PM IST
ಚಿಕ್ಕಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಆಯ್ಕೆಗೆ ಕೆಪಿಸಿಸಿ ವತಿಯಿಂದ ಚಾಲನೆ ಸಿಕ್ಕಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ವೀಕ್ಷಕರಾಗಿರುವ ವಸತಿ ಸಚಿವ ಜಮೀರ್ ಅಹಮ್ಮದ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿ, ಅಭ್ಯರ್ಥಿ ಆಯ್ಕೆಗೆ ತೀವ್ರ ಕಸರತ್ತು ನಡೆಸಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಜಿಲ್ಲೆಯ ಲೋಕಸಭಾ ಕ್ಷೇತ್ರದ ಉಸ್ತುವಾರಿ ಆಗಿರುವ ಜಮೀರ್ ಅಹಮ್ಮದ್, ಜಿಲ್ಲೆಗೆ ಕಾಲಿಡದೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರ, ಹಾಗೂ ಮಾಜಿ ಶಾಸಕರ ಮತ್ತು ಪ್ರಮುಖ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದು, ಈ ವೇಳೆ ಕೆಲ ಮುಖಂಡರು, ನಾಯಕರು ತಮ್ಮ ತಮ್ಮ ನಾಯಕರ ಪರ ಟಿಕೆಟ್ಗಾಗಿ ತೀವ್ರ ಜಟಾಪಟಿ ನಡೆದು ಸಭೆ ಗೊಂದಲದ ಗೂಡಾಗಿತ್ತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡರು ತಿಳಿಸಿದರು.
ಮುಖಂಡರಿಂದ ಅಭಿಪ್ರಾಯ ಸಂಗ್ರಹ: ಅಭಿಪ್ರಾಯ ಸಂಗ್ರಹದ ವೇಳೆ ಕೆಲವೊಂದು ಮುಖಂಡರು, ಮಾಜಿ ಶಾಸಕರು ಮಾತ್ರ ಸಭೆಯಲ್ಲಿ ಬಹಿರಂಗವಾಗಿ ತಮ್ಮ ನಾಯಕರ ಪರ ಟಿಕೆಟ್ಗಾಗಿ ಆಗ್ರಹಿಸಿದರೂ, ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು, ಕೆಲ ಯುವ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯ ಮಂಡಿಸದೇ ಜಮೀರ್ರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸಂಭವನೀಯ ಅಭ್ಯರ್ಥಿ ಬಗ್ಗೆ ತಮ್ಮ ಅಭಿಪ್ರಾಯ ಮಂಡಿಸಿ ಬಂದಿದ್ದಾರೆ.
ಸಭೆಯಲ್ಲಿ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕರಾದ ಎಸ್.ಎಂ.ಮುನಿಯಪ್ಪ, ಎಂ. ಶಿವಾನಂದ್ ಮತ್ತಿತರರು ಪಾಲ್ಗೊಂಡಿದ್ದರು. ಒಟ್ಟಿನಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾದಂತೆ ಕಾಂಗ್ರೆಸ್ ಪಾಳೆಯಲ್ಲಿ ರಾಜಕೀಯ ಚವಟಿಕೆಗಳು ವೇಗ ಪಡೆದಿವೆ.
ಈಗಾಗಲೇ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಬಿರುಸಿನಿಂದ ಸದ್ದಿಲ್ಲದೇ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಮೊಯ್ಲಿ, ಶಿವಶಂಕರರೆಡ್ಡಿ ಹಾಗೂ ರಕ್ಷಾ ರಾಮಯ್ಯ ಪರ ಬೆಂಬಲಿಗರು ಟಿಕೆಟ್ಗಾಗಿ ಬ್ಯಾಟಿಂಗ್ ಬೀಸುತ್ತಿದ್ದರೂ, ಅಂತಿಮವಾಗಿ ಅಭ್ಯರ್ಥಿ ಆಯ್ಕೆ ಮಾಡುವ ಚೆಂಡು ಹೈಕಮಾಂಡ್ ಅಂಗಳದಲ್ಲಿರುವುದರಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಯಾರಾಗಲಿದ್ದಾರೆಂಬ ಕುತೂಹಲ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಸುವರೆಗೂ ಕಾದು ನೋಡಬೇಕಿದೆ.
ಮೊಯ್ಲಿ, ಶಿವಶಂಕರೆಡ್ಡಿ,ರಕ್ಷಾ ರಾಮಯ್ಯ ಹೆಸರು ಮುಂಚೂಣಿ: ವೀಕ್ಷಕರಾದ ಸಚಿವ ಜಮೀರ್ ಅಹಮ್ಮದ್ ನಡೆಸಿದ ಅಭಿಪ್ರಾಯ ಸಂಗ್ರಹದಲ್ಲಿ ಈಗಾಗಲೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಗೆದ್ದು, ಮೂರನೇ ಬಾರಿ ಸೋತಿರುವ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಹೆಸರು ಮುಂಚೂಣಿಯಲ್ಲಿದ್ದರೆ, ನಂತರದಲ್ಲಿ ಜಿಲ್ಲೆಯ ಗೌರಿಬಿದನೂರು ಮಾಜಿ ಸಚಿವರಾದ ಎನ್.ಎಚ್. ಶಿವಶಂಕರರೆಡ್ಡಿ ಹಾಗೂ ಮಾಜಿ ಸಚಿವ ಎಂ.ಆರ್. ಸೀತಾರಾಮ್ರವರ ಪುತ್ರ ರಕ್ಷಾ ರಾಮಯ್ಯ ಹೆಸರು ಪ್ರಬಲವಾಗಿ ಕೇಳಿ ಬಂದಿದೆ. ಸಭೆಯಲ್ಲಿ ಬಹಳಷ್ಟು ಮಂದಿ ಮೊಯ್ಲಿ ಹೆಸರು ಪ್ರಸ್ತಾಪಿಸಿದರೆ ಖುದ್ದು ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಮಗೊಂದು ಅವಕಾಶ ಕೊಡಿಯೆಂದು ಲೋಕಸಭೆಗೆ ಟಿಕೆಟ್ ಕೊಡುವಂತೆ ಪಟ್ಟು ಹಿಡಿದಿದ್ದಾರೆ. ರಾಕ್ಷ ರಾಮಯ್ಯ ಪರ ಕೂಡ ಕೆಲ ಮುಖಂಡರು ಟಿಕೆಟ್ ಕೊಡುವಂತೆ ಒತ್ತಾಯಿಸಿದ್ದಾರೆ.
-ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್ ಪರದಾಟ!
Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!
Kasaragod: ಗಾಯಕಿಯ ಮಾನಭಂಗ; ದೂರು: ಗಾಯಕ ರಿಯಾಸ್ ಬಂಧನ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.