![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 3, 2023, 11:12 PM IST
ಹೊನ್ನಾಳಿ: ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇಮಕ ಮಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ಗಳಿಸಲು ಬಿಜೆಪಿಗೆ ಉತ್ತಮ ಅವಕಾಶ ಇರುವುದರಿಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅನಾವಶ್ಯಕವಾಗಿ ಟೀಕಿಸುವುದನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಾಕೀತು ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಯತ್ನಾಳ್ ಹಿರಿಯರು. ವಾಜಪೇಯಿ ಪ್ರಧಾನಿಯಾಗಿದ್ದಾಗ ಕೇಂದ್ರ ಸಚಿವರಾಗಿದ್ದವರು. ಈಗಾಗಲೇ ರಾಜ್ಯಾಧ್ಯಕ್ಷರ ಆಯ್ಕೆಯಾಗಿದೆ. ಸುಮ್ಮನೆ ಟೀಕಿಸುವುದರಿಂದ ಪಕ್ಷದಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಯತ್ನಾಳ್ ಹಿಂದೆ ಜೆಡಿಎಸ್ಗೆ ಹೋಗಿದ್ದರು. ಅವರನ್ನು ಮಾಜಿ ಸಿಎಂ ಬಿಎಸ್ವೈ ಗೌರವಯುತವಾಗಿ ಪಕ್ಷಕ್ಕೆ ಕರೆತಂದಿದ್ದಾರೆ. ಇದನ್ನು ಯತ್ನಾಳ್ ಅರ್ಥ ಮಾಡಿಕೊಳ್ಳಬೇಕು. 70-80ರ ದಶಕದಲ್ಲಿ ಪಕ್ಷ ಕಟ್ಟುವವರಿಲ್ಲದ ಸಮಯದಲ್ಲಿ ಯಡಿಯೂರಪ್ಪ ಸೈಕಲ್ನಲ್ಲಿ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದಾರೆ. ಪಕ್ಷ ಬೆಳೆದ ಮೇಲೆ ಪಕ್ಷಕ್ಕೆ ಅವರು, ಇವರು ಅನಿವಾರ್ಯವಲ್ಲ ಎಂದು ಶಾಸಕರಾಗಿ ಮಾತನಾಡುವುದು ಬಹು ಸುಲಭ. ಬಿಎಸ್ವೈ ಹಾಗೂ ಬಿವೈವಿ ರೆಡಿಮೇಡ್ ಫುಡ್ ಅಲ್ಲ ಎಂಬುದನ್ನು ಟೀಕಾಕಾರರು ಅರ್ಥೈಸಿಕೊಳ್ಳಬೇಕು ಎಂದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.