Winter Assembly session ವಿಳಂಬ ಆರಂಭ: ಬೆಳಗಾವಿ ಕಲಾಪಕ್ಕೆ ಮೊದಲ ದಿನವೇ ಆರು ಸಚಿವರು ಗೈರು


Team Udayavani, Dec 5, 2023, 12:41 AM IST

Winter Assembly session ವಿಳಂಬ ಆರಂಭ: ಬೆಳಗಾವಿ ಕಲಾಪಕ್ಕೆ ಮೊದಲ ದಿನವೇ ಆರು ಸಚಿವರು ಗೈರು

ಬೆಳಗಾವಿ: ಕಾಂಗ್ರೆಸ್‌ ಸರಕಾರಕ್ಕೆ ಮೊದಲನೆ ಯದಾದ ಬೆಳಗಾವಿ ಅಧಿವೇಶನದ ಮೊದಲ ದಿನವೇ ಆರು ಸಚಿವರು ಗೈರು ಹಾಜರಾಗಿದ್ದರಿಂದ ವಿಧಾನ ಪರಿಷತ್ತಿನಲ್ಲಿ ಸಭಾಪತಿ ಸಿಟ್ಟಾದರು, ಅತ್ತ ವಿಧಾನಸಭೆಯಲ್ಲೂ ಕಲಾಪ ಒಂದು ತಾಸು ತಡವಾಗಿ ಆರಂಭವಾಯಿತು.

ಮೇಲ್ಮನೆಯಲ್ಲಿ ಸದನ ಆರಂಭವಾಗುತ್ತಿದ್ದಂತೆ ವಿವಿಧ ಕ್ಷೇತ್ರಗಳಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದರ ಬೆನ್ನಲ್ಲೇ ಪ್ರಶ್ನೋತ್ತರ ಅವಧಿ ಪ್ರಾರಂಭವಾಯಿತು. ಹಲವು ಸಚಿವರ ಪರವಾಗಿ ಸಭಾ ನಾಯಕರು ಮತ್ತು ಪ್ರಿಯಾಂಕ್‌ ಖರ್ಗೆ ಉತ್ತರಿಸಿದರು. ಕೆಲವು ಉಪ ಪ್ರಶ್ನೆಗಳಿಗೆ ಉತ್ತರ ಕೊಡುವ ಪ್ರಯತ್ನವನ್ನೂ ಮಾಡಿದರು. ಈ ಸಂದರ್ಭ ಕೆಲವು ಶಾಸಕರು ಸಂಬಂಧಪಟ್ಟ ಖಾತೆಗಳ ಸಚಿವರಿಂದಲೇ ವಿವರವಾದ ಉತ್ತರ ಬಯಸಿದರು.

ಆಗ, ಮೊದಲ ದಿನವೇ ಆರು ಸಚಿವರು ಗೈರುಹಾಜರಿದ್ದಾರೆ. ಎಲ್ಲರೂ ಪೂರ್ವನಿರ್ಧರಿತ ಕಾರ್ಯಕ್ರಮದ ಕಾರಣ ನೀಡಿದ್ದಾರೆ.

ಹೀಗಾದರೆ ನಾನು ಸದನ ನಡೆಸಬೇಕೋ ಬೇಡವೋ ನೀವೇ ಹೇಳಿ. ನಾಳೆಯಿಂದ ಇದು ನಡೆಯುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಖಾರವಾಗಿ ಹೇಳಿದರು. ದೀರ್ಘ‌ ಉತ್ತರ ಬಯಸಿದ್ದರಿಂದ ಕೆಲವು ಪ್ರಶ್ನೆಗಳನ್ನು ಅರ್ಧ ತಾಸು ಚರ್ಚೆಗೆ ಕೈಗೆತ್ತಿಕೊಳ್ಳಲು ಸದಸ್ಯರು ಮನವಿ ಮಾಡಿದರು. ಸಚಿವರಾದ ಕೆ.ಜೆ. ಜಾರ್ಜ್‌, ಡಾ| ಎಂ.ಸಿ. ಸುಧಾಕರ್‌, ಕೆ.ಎಚ್‌. ಮುನಿಯಪ್ಪ, ಡಾ| ಶರಣಪ್ರಕಾಶ ಪಾಟೀಲ ಗೈರುಹಾಜರಿದ್ದರು.

ವಿಧಾನಸಭೆ ಒಂದು ತಾಸು ವಿಳಂಬ ಆರಂಭ: ವಿಧಾನಸಭೆಯಲ್ಲಿ ನಿಗದಿತ ಸಮಯಕ್ಕಿಂತ ಒಂದು ತಾಸು ತಡವಾಗಿ ಕಲಾಪ ಆರಂಭವಾಗುತ್ತಿದ್ದಂತೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಎಸ್‌. ಸುರೇಶ್‌ ಕುಮಾರ್‌, ಯಾವ ಕಾರಣಕ್ಕೆ ಕಲಾಪ ವಿಳಂಬವಾಗಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಬಸವರಾಜ ರಾಯರೆಡ್ಡಿ, ಕಲಾಪ ನಿಯಮಗಳ ಪ್ರಕಾರ ಸದನವನ್ನು ಹೇಗೆ ಪ್ರಾರಂಭಿಸಬೇಕೆಂಬ ಬಗ್ಗೆ ನಿರ್ದಿಷ್ಟ ಪದ್ಧತಿ ಇದೆ. ಯಾರು ಬೇಕಾದರೂ ಬರಲಿ, ಬಿಡಲಿ; ನೀವು ಪೀಠದಲ್ಲಿ ಆಸೀನರಾಗಿ ಕಲಾಪ ಆರಂಭಿಸಿ. ಆಗ ಎಲ್ಲರೂ ಬರುತ್ತಾರೆ. ಇಲ್ಲವಾದರೆ ಬೆಳಗಾವಿ ಅಧಿವೇಶನ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಯನ್ನು ಜನರು ಒಪ್ಪಿಕೊಳ್ಳಬೇಕಾಗುತ್ತದೆ. ಇದಕ್ಕೆ ಆಸ್ಪದ ನೀಡಬೇಡಿ ಎಂದು ಸ್ಪೀಕರ್‌ ಖಾದರ್‌ ಅವರಿಗೆ ಮನವಿ ಮಾಡಿದರು.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌, ಉತ್ತರ ಕರ್ನಾಟಕ ಭಾಗದ ಸಮಸ್ಯೆ ಹಾಗೂ ಉತ್ತರ ಕರ್ನಾಟಕದ ರಾಜಕೀಯ ನಾಯಕತ್ವವನ್ನು ಅವಗಣಿಸುತ್ತಿರುವ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡದೆ ಇದ್ದರೆ ಧರಣಿ ನಡೆಸುವುದಾಗಿ ಎಚ್ಚರಿಸಿದರು.

ಡಿ. 6ರಿಂದ ಉ.ಕ. ಸಮಸ್ಯೆಗಳ ಬಗ್ಗೆ ಚರ್ಚೆ: ಡಿ. 6ರಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದ ನೀರಾವರಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ಸ್ಪೀಕರ್‌ ಯು.ಟಿ. ಖಾದರ್‌ ಪ್ರಕಟಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅವಕಾಶ ಕೊಡಬೇಕೆಂದು ಅನೇಕ ಶಾಸಕರು ಬೇಡಿಕೆ ಇರಿಸಿದ್ದರು. ಇದಕ್ಕೆ ಸಹಮತ ವ್ಯಕ್ತವಾಗಿದ್ದು, ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಕಾಲಾವಕಾಶ ಒದಗಿಸಲು ವಿಧಾನಸಭೆ ಕಾರ್ಯಕಲಾಪಗಳ ಸಲಹಾ ಸಮಿತಿ (ಬಿಎಸಿ) ಸಭೆ ನಿರ್ಧರಿಸಿದೆ. ಸೋಮವಾರ ಭೋಜನ ವಿರಾಮದ ವೇಳೆಯಲ್ಲಿ ನಡೆದ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಅವಕಾಶ ಕೊಡುವುದು, ಮಸೂದೆಗಳನ್ನು ಮೊದಲ ವಾರದಲ್ಲೇ ಮಂಡಿಸಿ, ಎರಡನೇ ವಾರದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.

ಎಚ್ಚರ ವಹಿಸಬೇಕು
ಆಡಳಿತ ಪಕ್ಷದ ಮುಖ್ಯ ಸಚೇತಕರಾದರೂ ಈ ಬಗ್ಗೆ ಎಚ್ಚರ ವಹಿಸಬೇಕಲ್ಲವೇ ಎಂದು ಸಭಾಪತಿ ಹೊರಟ್ಟಿ ಪ್ರಶ್ನಿಸಿದರು. ಆಗ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ “ಆನ್‌ ದಿ ವೇ’ ಎಂದು ಸಮಜಾಯಿಷಿ ನೀಡಲು ಮುಂದಾದರು. “ಯಾವ ಆನ್‌ ದಿ ವೇ ರೀ? ಸದನದ ಸಮಯ ಗೊತ್ತಿಲ್ಲವೇ? ನಾಳೆಯಿಂದ ಇದು ಪುನರಾವರ್ತನೆಯಾಗುವಂತಿಲ್ಲ’ ಎಂದು ಹೊರಟ್ಟಿಯವರು ಸ್ಪಷ್ಟ ಸೂಚನೆ ನೀಡಿದರು.

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.