![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 5, 2023, 4:57 PM IST
ಮುಂಬೈ: 2024ರಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಆಡಳಿತಾರೂಢ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬವಾನ್ ಕುಲೆ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ:
ಲಖ್ನಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರು ಗೊತ್ತಾ? ಎಂದು ಪ್ರಶ್ನಿಸಿದ್ದರು, ಆಗ ನೆರೆದಿದ್ದ ಜನಸಮೂಹ, ಫಡ್ನವೀಸ್, ಫಡ್ನವೀಸ್ ಎಂದು ಕೂಗಿ ಚಪ್ಪಾಳೆ ತಟ್ಟಿದ್ದರು. ಈ ಸಂದರ್ಭದಲ್ಲಿ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆಗೆ ತಿರುಗೇಟು ನೀಡಿದ ಕುಲೆ, ಮಹಾರಾಷ್ಟ್ರದಲ್ಲಿ ಇರುವುದು ಒಂದೇ ಒಂದು ಹುಲಿ, ಅದು ಫಡ್ನವೀಸ್ ಎಂದು ಹೇಳಿದರು.
ರಾಜಸ್ಥಾನ್, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದ ಗದ್ದುಗೆ ಏರಿದ್ದ ಹಿನ್ನೆಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು.
ಮೂರು ನಿರ್ಧಾರ ತೆಗೆದುಕೊಳ್ಳಿ:
ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬವಾನ್ ಕುಲೆ, ನೀವು ಮುಂದಿನ ವರ್ಷ (2024)ಮೂರು ನಿರ್ಧಾರವನ್ನು ತೆಗೆದುಕೊಳ್ಳಬೇಕು, ಮೊದಲನೆಯದಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಲು ಮಹಾರಾಷ್ಟ್ರದಲ್ಲಿ 45 ಸಂಸದರನ್ನು ಗೆಲ್ಲಿಸಬೇಕು. ಎರಡನೇಯದಾಗಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಸಿಎಂ ಆಗಿ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಲು ಪಕ್ಷದ ಕಾರ್ಯಕರ್ತರು ಶ್ರಮವಹಿಸಿ ದುಡಿಯಬೇಕು. ಮೂರನೇಯದಾಗಿ ಮುಂಬರುವ ಮಹಾನಗರ ಪಾಲಿಕೆ, ನಗರ ಪಾಲಿಕೆ ಸೇರಿದಂತೆ ಎಲ್ಲಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಣ ತೊಡಬೇಕು ಎಂದು ಹೇಳಿದರು.
ಈ ಮೂರು ಕಾರ್ಯವನ್ನು ನೆರವೇರಿಸಲು ಮುಂದಿನ 13 ತಿಂಗಳ ಕಾಲ ಬಿಜೆಪಿ ಕಾರ್ಯಕರ್ತರು ಪ್ರತಿದಿನ ಮೂರು ಗಂಟೆಗಳನ್ನು ಮೀಸಲಿಡಬೇಕು ಎಂದು ಕುಲೆ ತಿಳಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.