![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
Excise Department: ಸಿಎಲ್-7 ಸನ್ನದು ಪಡೆಯಲು ಸೂಕ್ತ ನಿಯಮ- ಆರ್.ಬಿ. ತಿಮ್ಮಾಪುರ
Team Udayavani, Dec 5, 2023, 11:21 PM IST
![R B Timmapur](https://www.udayavani.com/wp-content/uploads/2023/12/timmapur-620x372.jpg)
ಬೆಳಗಾವಿ: ಅಬಕಾರಿ ಇಲಾಖೆಯ ಸಿಎಲ್-7 (ಬೋರ್ಡಿಂಗ್ ಅಂಡ್ ಲಾಡ್ಜಿಂಗ್) ಸನ್ನದು ಪಡೆಯುವಾಗ ಕಟ್ಟಡದ ವಿನ್ಯಾಸ, ಎಷ್ಟು ಕೊಠಡಿಗಳಿರಬೇಕು? ಎಷ್ಟು ಅಳತೆಯಲ್ಲಿರಬೇಕು? ವಾಹನ ನಿಲುಗಡೆ ಪ್ರದೇಶ ಇರಬೇಕು ಎಂಬಿತ್ಯಾದಿ ನಿಯಮಗಳಿಲ್ಲ. ಹೀಗಾಗಿ ಈ ಬಗ್ಗೆ ಸೂಕ್ತ ನಿಯಮ ರೂಪಿಸುವುದಾಗಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, 2020-21 ರಲ್ಲಿ 10 ಸಿಎಲ್-7 ಸನ್ನದು ಮಂಜೂರು ಮಾಡಿದ್ದು, 2021-22ರಲ್ಲಿ 18 ಹಾಗೂ 2022-23ರಲ್ಲಿ 24 ಸನ್ನದುಗಳನ್ನು ಮಂಜೂರು ಮಾಡಲಾಗಿದೆ. ಅಲ್ಲದೆ, ಪ್ರಸಕ್ತ ವರ್ಷ ಅಕ್ಟೋಬರ್ವರೆಗೆ 4 ಸಿಎಲ್-7 ಸನ್ನದುಗಳನ್ನು ಮಂಜೂರು ಮಾಡಿದೆ ಎಂದರು.
ಅಧಿಕಾರಿ ಮದ್ಯದಂಗಡಿ ಪಾಲುದಾರ
ನಾರಾಯಣಸ್ವಾಮಿ ಮಾತನಾಡಿ, ಕೋಲಾರದಲ್ಲಿ ರಂಗಪ್ಪ ಎಂಬ ಸೂಪರಿಂಟೆಂಡೆಂಟ್ ನಿಯಮ ಮೀರಿ ಪರವಾನಿಗೆಗಳನ್ನು ನೀಡಿದ್ದಾರೆ. ಸಾಲದ್ದಕ್ಕೆ ಎಲ್ಲ ಮದ್ಯದಂಗಡಿಗಳಲ್ಲೂ ಸಹಭಾಗಿತ್ವ ಹೊಂದಿದ್ದಾರೆ. ವಾಹನ ನಿಲುಗಡೆಗೆ ಜಾಗ ಇಲ್ಲದ ಹೆದ್ದಾರಿ ಬದಿಯಲ್ಲೂ ಸಿಎಲ್-7ಗೆ ಅನುಮತಿ ನೀಡಲಾಗಿದೆ. ಸಾಕಷ್ಟು ಅಪಘಾತ ಪ್ರಕರಣಗಳು ಸಂಭವಿಸಿವೆ. 18 ವರ್ಷದಿಂದ ಕೋಲಾರದಲ್ಲೇ ಇರುವ ರಂಗಪ್ಪನನ್ನು ವರ್ಗಾವಣೆ ಮಾಡಿ, ಆತನ ವಿರುದ್ಧ ಕ್ರಮ ಜರಗಿಸಿ ಎಂದು ಆಗ್ರಹಿಸಿದರು. ವಿಷಯದ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ಸಹಿತ ಆಡಳಿತ, ವಿಪಕ್ಷ ಸದಸ್ಯರು ದನಿಗೂಡಿಸಿದರು.
ಮೀಸಲಾತಿಗೆ ಆಗ್ರಹ
ಅಬಕಾರಿ ಇಲಾಖೆಯು ಮದ್ಯದಂಗಡಿಗಳನ್ನು ತೆರೆಯಲು ಪರವಾನಗಿ ನೀಡುವ ಸಂದರ್ಭ ಎಸ್ಸಿ, ಎಸ್ಟಿಗೆ ಮೀಸಲಾತಿ ನೀಡುವಂತೆ ಮಳವಳ್ಳಿಯ ನರೇಂದ್ರಸ್ವಾಮಿ ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಈಗ ಮಂಜೂರಾತಿ ನೀಡಿರುವ 3975 ಸಿಎಲ್-2ಗಳಲ್ಲಿ 49 ಎಸ್ಸಿ ಹಾಗೂ 34 ಎಸ್ಟಿ, 2444 ಸಿಎಲ್-7 ರಲ್ಲಿ 96 ಎಸ್ಸಿ, 68 ಎಸ್ಟಿ ಸಮುದಾಯಗಳಿಗೆ ಪರವಾನಗಿ ನೀಡಲಾಗಿದೆ ಎಂದರು. ಬಿಜೆಪಿಯ ಸುನಿಲ್ಕುಮಾರ್ ಮಧ್ಯಪ್ರವೇಶಿಸಿ ಮೀಸಲಾತಿ ಹೆಸರಿನಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ಕೊಡುತ್ತೀರಾ? ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ](https://www.udayavani.com/wp-content/uploads/2024/07/NH-150x90.jpg)
National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ
![Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು](https://www.udayavani.com/wp-content/uploads/2024/07/le-150x90.jpg)
Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.