BJP: 3 ರಾಜ್ಯಗಳಲ್ಲಿ ಬಿಜೆಪಿ ಡಿಸಿಎಂ ತಂತ್ರ
Team Udayavani, Dec 6, 2023, 12:13 AM IST
ಹೊಸದಿಲ್ಲಿ: ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ವಿಧಾನಸಭೆ ಚುನಾವಣೆಗಳಲ್ಲಿ ಅಬ್ಬರದ ಗೆಲುವು ಸಾಧಿಸಿರುವ ಬಿಜೆಪಿ ಇದೀಗ ಈ ರಾಜ್ಯಗಳ ಸಿಎಂ ಆಯ್ಕೆಗೆ ಚಾಣಾಕ್ಷ ನೀತಿಯಲ್ಲಿ ವ್ಯೂಹ ರಚಿಸಲು ಮುಂದಾಗಿದೆ. ಇದಕ್ಕಾಗಿ ‘ಡಬ್ಬಲ್ ಡಿಸಿಎಂ’ ಅಸ್ತ್ರ ಬಳಕೆಗೆ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಮುಖಂಡರು ಸಿಎಂ ಆಯ್ಕೆ ವಿಚಾರದ ಬಗ್ಗೆ ಚಿಂತನೆ ನಡೆಸುತ್ತಿದ್ದರೆ, ಇತ್ತ ಮೂರೂ ರಾಜ್ಯ ಗಳಲ್ಲೂ ಸಿಎಂ ರೇಸಿಗೆ ಪೈಪೋಟಿ ಕಡಿಮೆ ಇಲ್ಲ.
ಈ ನಡುವೆ ಪಕ್ಷದೊಳಗಿನ ಭಿನ್ನತೆಯನ್ನೂ ಹೊರಗೆ ತೋರದೇ, ಸಿಎಂ ಆಯ್ಕೆಯನ್ನೂ ಸುಸೂತ್ರವಾಗಿ ನಡೆಸಲು ಈ ಡಬ್ಬಲ್ ಡಿಸಿಎಂ ತಂತ್ರವನ್ನು ಹಣೆಯಲು ಬಿಜೆಪಿ ಮುಂದಾಗಿದೆ.
ಈಗಾಗಲೇ ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್, ರಾಜಸ್ಥಾನದಲ್ಲಿ ವಸುಂಧರಾ ರಾಜೇ ಹಾಗೂ ಛತ್ತೀಸ್ಗಢದಲ್ಲಿ ರೇಣುಕಾ ಸಿಂಗ್ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡುವುದು ಖಚಿತವೆಂದು ಮೂಲಗಳು ತಿಳಿಸಿವೆ. ಆದರೆ ಪಕ್ಷದಲ್ಲಿ ಈ ಆಯ್ಕೆಗಳ ಬಗ್ಗೆ ಭಿನ್ನಮತವೂ ಇರುವುದರಿಂದ ಹಳೆ ಮುಖಗಳಿಗೆ ಮಣೆಹಾಕಬೇಕೋ? ಬದಲಾವಣೆಗೆ ನೆಲೆ ನೀಡಬೇಕೋ ಎನ್ನುವಂಥ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ 3 ರಾಜ್ಯಗಳಲ್ಲೂ ಸಿಎಂ ಗದ್ದುಗೆ ಏರಲು ಪೈಪೋಟಿ ನಡೆಸುತ್ತಿರುವ ಪ್ರಬಲರಿಗೆ ಡಿಸಿಎಂ ಸ್ಥಾನಗಳನ್ನು ನೀಡಿ ಬಿಕ್ಕಟ್ಟು ತಣ್ಣಗಾಗಿಸಲು ಬಿಜೆಪಿ ತಂತ್ರ ರೂಪಿಸಿದೆ ಎನ್ನಲಾಗಿದೆ.
ಶಾಸಕರಾದ ಸಂಸದರ ರಾಜೀನಾಮೆ?: ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಂಸದರಾದ ದಿಯಾ ಕುಮಾರಿ, ರಾಜ್ಯವರ್ಧನ್ ಸಿಂಗ್ ರಾಥೋಡ್, ಬಾಬಾ ಬಾಲಕ ನಾಥ್ ಹಾಗೂ ಕಿರೋಡಿ ಲಾಲ್ ಮೀನಾ ಅವರಿಗೆ ರಾಜ್ಯದಲ್ಲಿ ಪ್ರಮುಖ ಸಚಿವ ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಅವರನ್ನು ಸಂಸದರ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಳಬಹುದಾಗಿದೆ. ಈ ಮೂಲಕವೂ ಸಿಎಂ ರೇಸಿಗೆ ಇರುವ ಸ್ಪರ್ಧೆಯನ್ನು ಕಡಿಮೆ ಮಾಡಲು ಬಿಜೆಪಿ ಯೋಜಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.