Daily Horoscope:ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ,ತಪ್ಪು ತಿಳಿವಳಿಕೆಯಿಂದ ಅನವಶ್ಯ ಕಲಹ


Team Udayavani, Dec 6, 2023, 7:16 AM IST

1-wednsdy

ಮೇಷ: ಉತ್ತರಾಯಣ ಸಮೀಪಿಸುತ್ತಿರುವಂತೆ ಚುರುಕಾಗುತ್ತಿರುವ ಬುದ್ಧಿಶಕ್ತಿ! ಉದ್ಯೋಗಸ್ಥರಿಗೆ ಹೆಚ್ಚು ಹುಮ್ಮಸ್ಸು. ಸರಕಾರಿ ರಂಗದವರಿಗೆ ಯಥಾಸ್ಥಿತಿ. ಹೊಟೇಲ್‌ ಉದ್ಯಮಿಗಳಿಗೆ ಹೊಸ ಸಮಸ್ಯೆಗಳು. ಪಶ್ಚಿಮ ದೇಶದಲ್ಲಿರುವ ಬಂಧುಗಳೊಡನೆ ದೂರವಾಣಿಯಲ್ಲಿ ಸಂಭಾಷಣೆ.

ವೃಷಭ: ಕಲ್ಪಿಸಿರುವ ಯೋಜನೆಗಳನ್ನು ಒಂದೊಂದಾಗಿ ಕಾರ್ಯಗತಗೊಳಿಸುವ ಪ್ರಯತ್ನ. ಉದ್ಯೋಗಸ್ಥರಿಗೆ ಹೊಸ ಅವಕಾಶಗಳು ತೆರೆದುಕೊಳ್ಳುವ ದಿನ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಹೇರಳ ಲಾಭ. ವೃತ್ತಿಪರಿಣತ ಶಿಕ್ಷಿತರಿಗೆ ಉದ್ಯೋಗಾವಕಾಶ.

ಮಿಥುನ: ಮುಂದೂಡುತ್ತಾ ಬಂದಿರುವ ಯೋಜನೆ ಗಳನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆ ಆರಂಭ. ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ತಪ್ಪು ತಿಳಿವಳಿಕೆಯಿಂದ ಅನವಶ್ಯ ಕಲಹ. ಕೇಳಿದವರಿಗೆ ಮಾತ್ರ ಸಲಹೆ ಕೊಡಿ. ಯುವ ಜನರಿಗೆ ಧಾರ್ಮಿಕ ಮಾರ್ಗದರ್ಶನದ ವ್ಯವಸ್ಥೆಯ ನೇತೃತ್ವ.

ಕರ್ಕಾಟಕ: ಸುಲಭದಲ್ಲಿ ಆಗುವ ಕೆಲಸಕ್ಕೆ ಸುತ್ತಿ ಬಳಸಿ ಹೋಗುವ ಮಾರ್ಗ ಹಿಡಿಯುವುದರಿಂದ ಕೆಲಸ ಇನ್ನಷ್ಟು ವಿಳಂಬ. ಉದ್ಯೋಗಸ್ಥರಿಗೆ ತಡವಾಗಿ ವೇತನ ಏರಿಕೆ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ ಆಸ್ಪತ್ರೆಗಳ ಸುಧಾರಣೆಗೆ ರಾಜಕಾರಣಿಗಳ ನಿರಾಸಕ್ತಿ.

ಸಿಂಹ: ಅಪೇಕ್ಷಿತ ವೇಗದಲ್ಲಿ ಸಾಗುವ ಪ್ರಯತ್ನ. ಒಂದಕ್ಕಿಂತ ಹೆಚ್ಚು ವ್ಯವಹಾರಗಳಲ್ಲಿ ಗಮನವನ್ನು ಕೇಂದ್ರೀಕರಿಸುವ ಆವಶ್ಯಕತೆ. ಉದ್ಯೋಗಸ್ಥರಿಗೆ ಘಟಕದ ನಾಯಕತ್ವ. ಉದ್ಯಮಕ್ಕೆ ಹೊಸ ರೂಪ ನೀಡುವ ಪ್ರಕ್ರಿಯೆ ಆರಂಭ. ಪಾಲುದಾರರಾಗಿ ಹಿರಿಯ ಪರಿಣತರ ಸೇರ್ಪಡೆ.

ಕನ್ಯಾ: ವೃತ್ತಿಪರಿಣತಿ ಸಾಧಿಸುವ ಪ್ರಯತ್ನ ಸಫ‌ಲ. ಹೊಸ ಕಾರ್ಯಕ್ಷೇತ್ರದಲ್ಲಿ ಹಿತಕರ ವಾತಾವರಣ. ಕಾರ್ಯನಿಷ್ಠೆಯನ್ನು ಗುರುತಿಸಿದ ಮಾಲಕರಿಂದ ತಕ್ಕ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಹೊಸ ಬಗೆಯ ಕೃಷಿ ಆರಂಭ. ಶಾಶ್ವತ ನೀರಾವರಿ ಒದಗಿಸುವ ಪ್ರಯತ್ನದಲ್ಲಿ ಮುನ್ನಡೆ.

ತುಲಾ: ಸಾಲುಗಟ್ಟಿ ಬರುವ ನೂರಾರು ಪ್ರಶ್ನೆಗಳನ್ನು ಬದಿಗೆ ಸರಿಸಿ ಮುಂದೆ ಸಾಗಬೇಕಾದ ಸಂದರ್ಭ. ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳಿಂದ ಪೈಪೋಟಿ. ಉದ್ಯೋಗ ಅರಸುವವರಿಗೆ ಮಾರ್ಗದರ್ಶನ ಮಾಡುವ ಅವಕಾಶ.

ವೃಶ್ಚಿಕ: ತಕ್ಕಮಟ್ಟಿಗೆ ಎಲ್ಲವೂ ಚೆನ್ನಾಗಿರುವ ಪರಿಸ್ಥಿತಿ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಹಾನಿಯಿಲ್ಲ. ಸರಕಾರಿ ಅಧಿಕಾರಿಗಳು ಸುಸ್ಥಿತಿಯಲ್ಲಿ. ರಾಜಕಾರಣಿಗಳಿಗೆ ಸೋಲಿನ ಪ್ರಶ್ನೆಯಿಲ್ಲ.ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಲಕ್ಷಿ¾àಕಟಾಕ್ಷ ಹೊತ್ತ ಸೊಸೆ ಮನೆಗೆ ಬರುವ ಸಾಧ್ಯತೆ.

ಧನು: ಜನ್ಮಜಾತ ಉದ್ಯಮಶೀಲರಾದವರಿಗೆ ಆಲಸ್ಯ ಬಾಧಿಸುವ ಪ್ರಶ್ನೆಯಿಲ್ಲ. ಉದ್ಯೋಗಸ್ಥರಿಗೆ ಘಟಕದ ಕಾರ್ಯ ನಿರ್ವಹಣೆಯನ್ನು ಸುಧಾರಿಸುವ ಜವಾಬ್ದಾರಿ. ಉದ್ಯಮದ ವೈವಿಧಿÂàಕರಣ ಯೋಜನೆ ಕಾರ್ಯಾರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.

ಮಕರ: ಏಳೂವರೆ ಶನಿಯ ಕೊನೆಯ ಹಂತದಲ್ಲಿ ಕ್ಷಣಕ್ಷಣಕ್ಕೆ ಎದುರಾಗುವ ವಿಚಿತ್ರ ಸಮಸ್ಯೆಗಳು. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷಿಸುವ ಸನ್ನಿವೇಶಗಳಲ್ಲಿ ವಿಜಯ. ಕೆಲವರ ಸಂಶಯಾಸ್ಪದ ನಡವಳಿಕೆಯಿಂದ ಹಾನಿಯಾಗಬಹುದಾದ ಸಂದರ್ಭ.

ಕುಂಭ: ವಾರದ ಮಧ್ಯದಲ್ಲಿ ನಿಲ್ಲದೆ ಸಾಗುವ ಹಲವು ಬಗೆಯ ಕೆಲಸ ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡುವವರಿಗೆ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸದ ಸಮಾಚಾರ.

ಮೀನ: ಸಪ್ತಾಹ ಪ್ರಾರಂಭದ ದಿನದ ಅನುಭವಗಳ ಮುಂದುವರಿಕೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಕಾರಾತ್ಮಕ ಸ್ಪಂದನದಿಂದ ಯಶಸ್ವಿ. ಕೊಂಚ ಕಾಲದಿಂದ ನಿಲ್ಲಿಸಿರುವ ಉದ್ಯಮವನ್ನು ಮತ್ತೆ ಪ್ರಾರಂಭಿಸಲು ಆಗ್ರಹ. ಪರಿಸರ ಸುಧಾರಣೆಗೆ ಸಂಬಂಧಪಟ್ಟ ಸಾಮೂಹಿಕ ಕಾರ್ಯಗಳಲ್ಲಿ ಆಸಕ್ತಿ. ಕುಟುಂಬದ ಹಿರಿಯ ವ್ಯಕ್ತಿಯ ಆಗಮನ.

ಟಾಪ್ ನ್ಯೂಸ್

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

14

ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

1-24-sunday

Daily Horoscope: ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ‌, ಭವಿಷ್ಯದ ಯೋಜನೆಗಳ ಕುರಿತು ಚಿಂತನೆ

Horoscope

Daily Horoscope; ಹೇಗಿದೆ ನೋಡಿ ನಿಮ್ಮ ಇಂದಿನ ರಾಶಿಫಲ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

14

ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?

forest

Forest; ಕಾಡಿನಲ್ಲಿ ಹಾಡಿನ ಸದ್ದು; ಫಾರೆಸ್ಟ್‌ ಒಳಗೆ ಚಿಕ್ಕಣ್ಣ- ಟೀಂ

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.