Belagavi ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರಿಡಬೇಕು: ಈರಣ್ಣ ಕಡಾಡಿ ಆಗ್ರಹ


Team Udayavani, Dec 7, 2023, 4:43 PM IST

Belagavi ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರಿಡಬೇಕು: ಈರಣ್ಣ ಕಡಾಡಿ ಆಗ್ರಹ

ಮೂಡಲಗಿ: ಕಿತ್ತೂರು ರಾಣಿ ಚನ್ನಮ್ಮ 1824ರಲ್ಲಿ ಬ್ರೀಟಿಷರ್ ವಿರುದ್ದ ಮೊದಲ ಯುದ್ದ ಗೆದ್ದು 2024ಕ್ಕೆ 200ನೇ ವರ್ಷದ ವಿಜಯೋತ್ಸವವನ್ನು ರಾಷ್ಟ್ರೀಯ ಉತ್ಸವವಾಗಿ ಆಚರಿಸಬೇಕು ಮತ್ತು 200ನೇ ವಿಜಯೋತ್ಸವದ ಸವಿನೆನಪಿಗಾಗಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಬೇಕು ಜೊತೆಗೆ ಚನ್ನಮ್ಮಾಜಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡುವಂತೆ ಸಂಸತ್ತಿನ ಚಳಿಗಾಲದ ಅಧಿವೇಶನದ ಶೂನ್ಯ ವೇಳೆಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ದೇಶದ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಲಕ್ಷಾಂತರ ಜನ ಭಾಗವಹಿಸಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಅಂತಹ ಹೋರಾಟಗಾರರಲ್ಲಿ ಕರ್ನಾಟಕದ ಮಹಿಳೆಯೋರ್ವಳು 1824ರಲ್ಲೇ ಸೂರ್ಯ ಮುಳಗದ ಬ್ರಿಟಿಷ್ ಸಾಮ್ರಾಜ್ಯದ ಎದುರು ಯುದ್ದ ನಡೆಸಿ ಬ್ರೀಟಿಷ ಅಧಿಕಾರಿ ಥ್ಯಾಕರೆಯ ಹತ್ಯೆಗೈಯುವ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿ ಚುಕ್ಕಿಯಾಗಿ ಗುರುತಿಸಲ್ಪಟ್ಟಿದ್ದಾರೆ. ಅವರೆ ನಮ್ಮ ಕನ್ನಡ ನಾಡಿನ ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ. ಅವರೇ ಸ್ವಾತಂತ್ರ್ಯ ಹೋರಾಟದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ ಎಂದರು.

ಚನ್ನಮ್ಮಾಜೀ ಕರ್ನಾಟಕದ ಬೆಳಗಾವಿ ಜಿಲ್ಲೆಯ ಕಾಕತಿಯಲ್ಲಿ ಜನ್ಮತಾಳಿದರು. ಚೆನ್ನಮ್ಮ, ಕಿತ್ತೂರಿನ ರಾಜ ಮಲ್ಲಸರ್ಜ ದೇಸಾಯಿಯನ್ನು ಮದುವೆಯಾಗಿದರು. ಪತಿಯ ಮರಣಾನಂತರ ಸಂಸ್ಥಾನದ ಪಟ್ಟಕ್ಕೆ ದತ್ತಕ ಪುತ್ರನನ್ನು ತೆಗೆದುಕೊಳ್ಳಲು ವಿರೋಧಿಸಿದ ಬ್ರೀಟಿಷರ್ ವಿರುದ್ಧ ಯುದ್ದ ಸಾರಿದ ವೀರವನಿತೆ ಅವಳು. ಈ ಯುದ್ದದ ಸಮಯದಲ್ಲಿ ರಾಣಿ ಚನ್ನಮ್ಮನ ಸೈನಿಕರು ಬ್ರಿಟಿಷ್ ಅಧಿಕಾರಿಗಳು ಮತ್ತು ಅವರ ಕುಟುಂಬದವರನ್ನು ಒತ್ತೆಯಾಳಾಗಿ ಹಿಡಿದಿಟ್ಟುಕೊಂಡಿದ್ದು ಇತಿಹಾಸವೇ ಸರಿ. ತದನಂತರ ಬ್ರಿಟಿಷ್ರೊಂದಿಗಿನ ಮಾತುಕತೆಯ ಫಲವಾಗಿ ಆ ಅಧಿಕಾರಿಗಳನ್ನು ಹಾಗೂ ಅವರ ಕುಟುಂಬಗಳನ್ನು ಅತ್ಯಂತ ಗೌರವಯುತವಾಗಿ ಬಿಡುಗಡೆ ಮಾಡುವ ಮೂಲಕ ಕಿತ್ತೂರು ಸಂಸ್ಥಾನದ ಘನತೆಯನ್ನು ಎತ್ತಿಹಿಡಿದ್ದಿದ್ದಾರೆ ಎಂದು ಸಂಸದ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಯುದ್ಧದಲ್ಲಿ ಸೋಲಾದ ಹಿನ್ನಲೆಯಲ್ಲಿ ಆ ಸೋಲಿನ ಸೇಡು ತೀರಿಸಿಕೊಳ್ಳಲು ಬ್ರಿಟಿಷರು ಕಿತ್ತೂರಿನ ಮೇಲೆ ಪದೇ ಪದೇ ದಾಳಿ ಮಾಡುತ್ತಲೇ ಇದ್ದರು. ಒಂದು ಬಾರಿ 12 ದಿನಗಳ ಕಾಲ ಚನ್ನಮ್ಮ ಮತ್ತು ಕಿತ್ತೂರಿನ ಸೈನ್ಯ ತಮ್ಮ ಕೋಟೆಯನ್ನು ರಕ್ಷಿಸಲು ಬ್ರಿಟಿಷರೊಂದಿಗೆ ನಿರಂತರವಾಗಿ ಹೋರಾಡಿದರು. ಈ ಹೋರಾಟದಲ್ಲಿ ಬ್ರಿಟಿಷ್ ಸೈನ್ಯವು ರಾಣಿ ಚನ್ನಮ್ಮನನ್ನು ಕುತಂತ್ರದಿಂದ ಬಂಧಿಸುವಲ್ಲಿ ಯಶಸ್ವಿಯಾಯಿತು. ರಾಣಿ ಚನ್ನಮ್ಮಾಜಿ ಬ್ರಿಟಿಷರ್ ವಿರುದ್ದದ ಮೊದಲನೆಯ ಯುದ್ದದಲ್ಲಿ ಗೆದ್ದು ಮತ್ತೊಂದು ಬಾರಿ ಯುದ್ದದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರು ಕೂಡಾ ಬ್ರಿಟಿಷರ ವಿರುದ್ದ ಹೋರಾಡಲು ಹೆದರುತ್ತಿದ್ದ ಆ ಕಾಲದಲ್ಲಿ ಒಬ್ಬ ಮಹಿಳೆಯೋರ್ವಳು ದಿಟ್ಟತನದಿಂದ ಹೋರಾಟ ಮಾಡಿರುವುದು ನಮ್ಮ ನಾಡಿನ ಸ್ವಾಂತತ್ರ್ಯ ಹೋರಾಟಗಾರರಿಗೆ ಪ್ರೇರಣೆಯಾಯಿತು ಎಂದು ಸಂಸದರು ಮಾತನಾಡಿದ್ದಾರೆ.

ಸ್ವಾತಂತ್ರ್ಯಾ ನಂತರ ಅಂದಿನ ಮುಖ್ಯಮಂತ್ರಿ ಬಂಗಾರಪ್ಪನವರ ಸರ್ಕಾರದ ಅವಧಿಯಲ್ಲಿ ಈ ಇತಿಹಾಸವನ್ನು ಯಾರು ಮರೆಯಬಾರದು ಎಂಬ ಕಾರಣದಿಂದ ಕಿತ್ತೂರು ಉತ್ಸವವನ್ನು ಪ್ರಾರಂಭಿಸಿದರು. ಮೊದಲು ಕಿತ್ತೂರಿಗೆ ಸೀಮಿತವಾಗಿದ್ದ ಉತ್ಸವ ನಂತರ ತಾಲೂಕಾ ಮಟ್ಟಕ್ಕೆ ವಿಸ್ತರಣೆಯಾಗಿ, ಆ ಮೇಲೆ ಜಿಲ್ಲಾಮಟ್ಟದ ಉತ್ಸವವಾಗಿ ಬೆಳೆದುನಿಂತಿತು. ಈಗ ಅದು ರಾಜ್ಯ ಮಟ್ಟದ ಉತ್ಸವವಾಗಿ ಕನಾಟಕದಲ್ಲಿ ಮನೆ ಮಾತಾಗಿದೆ. ಚನ್ನಮ್ಮನ ಗತವೈಭವದ ಇತಿಹಾಸಕ್ಕೆ ಬೆಳಕು ಚೆಲ್ಲುವಂತಹ ಮತ್ತು ಕೋಟೆಯನ್ನು ಪುನರ್ ಅಭಿವೃದ್ದಿ ಮಾಡುವಂತ ಕೆಲಸಗಳು ನಡೆಯುತ್ತಿವೆ. 2007ರಲ್ಲಿ ಅಂದಿನ ರಾಷ್ಟ್ರಪತಿ ಶ್ರೀಮತಿ ಪ್ರತಿಭಾ ಪಾಟೀಲ್ ಅವರು ಸಂಸತ್ತಿನ ಆವರಣದಲ್ಲಿ ರಾಣಿ ಚೆನ್ನಮ್ಮನ ಪ್ರತಿಮೆಯನ್ನು ಅನಾವರಣಗೊಳಿಸುವ ಮೂಲಕ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ಸಲ್ಲಿಸಿದ್ದಾರೆ. ಆ ಮೂಲಕ ದೇಶದ ಸ್ವಾತಂತ್ರ ಹೋರಾಟಕ್ಕಾಗಿ ತ್ಯಾಗ, ಬಲಿದಾನಗೈದ ಮಹನೀಯರಿಗೆ ಗೌರವ ನೀಡಿದಂತಾಗುತ್ತದೆ. ಈ ಕುರಿತು ಅಗತ್ಯಕ್ರಮ ಜಾರಿಗೊಳಿಸಬೇಕಾಗಿ ಕರ್ನಾಟಕದ ಜನತೆಯ ಪರವಾಗಿ ಅತ್ಯಂತ ವಿನಮ್ರವಾಗಿ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: New delhi; ಬಿಲಿಯನೇರ್ ಫಾರ್ಮರ್ ಪ್ರಶಸ್ತಿ ಸ್ವೀಕರಿಸಿದ ತೆಕ್ಕಟ್ಟೆಯ ರಮೇಶ್ ನಾಯಕ್

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.