Leelavathi Ji ನಿಧನದ ಸುದ್ದಿ ಕೇಳಿ ದುಃಖವಾಯಿತು: ಪ್ರಧಾನಿ ಮೋದಿ ಸಂತಾಪ
Team Udayavani, Dec 8, 2023, 10:03 PM IST
ಹೊಸದಿಲ್ಲಿ: ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
”ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ”. ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ
”ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ನಾಳೆ ಅಂತ್ಯಕ್ರಿಯೆ
ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಲೀಲಾವತಿ ಅವರ ಅಂತ್ಯಕ್ರಿಯೆ ನಾಳೆ (ಶನಿವಾರ) ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.