Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ


Team Udayavani, Dec 9, 2023, 6:21 AM IST

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

ಪುತ್ತೂರು: ಬಹು ನಿರೀಕ್ಷಿತ ಅತ್ಯಾಧುನಿಕ ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್‌ ಘಟಕ ಸ್ಥಾಪನೆಗೆ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತಕ್ಕೆ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮ ದಲ್ಲಿ 9.20 ಎಕರೆ ಮಂಜೂರು ಮಾಡಲು ಸರಕಾರ ಅನುಮತಿ ನೀಡಿದೆ.

ದ.ಕ.ದಲ್ಲಿ ಸಂಗ್ರಹ ಗೊಳ್ಳುವ ಹಾಲನ್ನು ಪ್ರಸ್ತುತ ಮಂಗಳೂರಿನ ಕುಲಶೇಖರ ಡೈರಿಯಲ್ಲಿ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಂಗ್ರಹಗೊಂಡ ಹಾಲನ್ನು ಉಪ್ಪೂರಿನ ಡೈರಿಯಲ್ಲಿ ಸಂಸ್ಕರಿಸಿ ಪ್ಯಾಕಿಂಗ್‌ ಮಾಡಿ ಸರಬರಾಜು ಮಾಡಲಾಗುತ್ತಿದೆ. ಪುತ್ತೂರಿನಲ್ಲಿ ಡೈರಿ ತೆರೆದು ಪ್ರತೀ ದಿನ 1.5 ಲಕ್ಷ ಲೀಟರ್‌ ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್‌ ಕಾರ್ಯ ನಡೆಸಲು ಉದ್ದೇಶಿಸಲಾಗಿದೆ.

ಉದ್ಯೋಗ ಸೃಷ್ಟಿ ,
ಖರ್ಚು ಉಳಿತಾಯ
ಪುತ್ತೂರು, ಸುಳ್ಯ, ಕಡಬ, ವಿಟ್ಲ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಸಂಗ್ರಹವಾಗುವ ಹಾಲನ್ನು ಕುಲಶೇಖರ ಡೈರಿಗೆ ಒಯ್ಯಲು ಪ್ರತೀ ದಿನ ಕಿ.ಮೀ. ಒಂದಕ್ಕೆ 1 ರೂ. ಸಾಗಾಟ ವೆಚ್ಚ ತಗಲುತ್ತದೆ. ಪ್ಯಾಕೆಟ್‌ ಹಾಲನ್ನು ಮರಳಿ ತರಲು ಪ್ರತೀ ದಿನ ಪ್ರತೀ ಲೀಟರ್‌ಗೆ 85 ಪೈಸೆ ವೆಚ್ಚವಾಗುತ್ತದೆ. ಪುತ್ತೂರಿನಲ್ಲಿ ಡೈರಿ ನಿರ್ಮಿಸಿದರೆ ಸಾಗಾಟ ವೆಚ್ಚ ಉಳಿಯಲಿದೆ. ದ.ಕ. ಜಿಲ್ಲೆಯಲ್ಲಿನ 75 ಹಾಲಿನ ಸೊಸೈಟಿಗಳ ಪೈಕಿ ಪ್ರಸ್ತುತ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹಾಲು ಉತ್ಪತ್ತಿಯಾಗುತ್ತಿದೆ. ಪುತ್ತೂರಿನಲ್ಲಿ ಡೈರಿ ನಿರ್ಮಾಣದಿಂದ 750 ಜನರಿಗೆ ಉದ್ಯೋಗ ಸಿಗಲಿದೆ.

60 ಕೋ.ರೂ. ಯೋಜನೆ
ಜಾಗದ ಪಹಣಿ ಆದ ಅನಂತರದ 2 ವರ್ಷಗಳಲ್ಲಿ ಅತ್ಯಾಧುನಿಕ ಸಂಸ್ಕರಣ ಮತ್ತು ಪ್ಯಾಕಿಂಗ್‌ ಘಟಕ ನಿರ್ಮಿಸುವ ಗುರಿ ಇದೆ. ಇದಕ್ಕೆ 50ರಿಂದ 60 ಕೋಟಿ ರೂ. ಅಗತ್ಯ ಇದೆ. ಪುತ್ತೂರು ನಗರದ ಆಸುಪಾಸಿನಲ್ಲೇ 15 ಎಕರೆ ಸರಕಾರಿ ಜಾಗವನ್ನು ದ.ಕ. ಸಹಕಾರಿ ಹಾಲು ಒಕ್ಕೂಟ ನಿಯಮಿತ (ಡಿಕೆಎಂಯುಎಲ್‌)ಕ್ಕೆ ಮಂಜೂರು ಮಾಡುವ ಪ್ರಯತ್ನ ನಡೆದಿತ್ತು. ಶಾಸಕರು ಈ ಸಂಬಂಧ ಎರಡು ಬಾರಿ ಕಂದಾಯ ಇಲಾಖೆ ಮತ್ತು ಹಾಲು ಒಕ್ಕೂಟದ ಆಡಳಿತ ಮಂಡಳಿಯ ಜತೆ ಸಭೆ ನಡೆಸಿದ್ದರು. ಪ್ರಸ್ತುತ 15 ಎಕರೆಯಲ್ಲಿ 9.20 ಎಕರೆ ಮಂಜೂರಿಗೆ ಸಮ್ಮತಿ ಸಿಕ್ಕಿದ್ದು ಉಳಿದ 4 ಎಕರೆಯನ್ನು ಮಾರುಕಟ್ಟೆ ಮೌಲ್ಯ ನೀಡಿ ಖರೀದಿಸಲಾಗುವುದು.

ಅರ್ಧ ಮೊತ್ತ ಪಾವತಿ
ಮಂಜೂರಾಗಿರುವ ಜಮೀನು ಕುಮ್ಕಿ ಆಗಿದ್ದು ಕುಮ್ಕಿಹಕ್ಕು ವಿರಹಿತಗೊಳಿಸಿದ ಅನಂತರ ಮಾರುಕಟ್ಟೆ ಮೌಲ್ಯದ ಶೇ. 50ರಷ್ಟನ್ನು ಸರಕಾರಕ್ಕೆ ಪಾವತಿಸುವಂತೆ ಡಿಕೆಎಂಯುಎಲ್‌ಗೆ ಸೂಚಿಸಲಾಗಿದೆ.

ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್‌ ಘಟಕ ಸ್ಥಾಪನೆಗೆ ಜಾಗ ಒದಗಿಸುವಂತೆ ದ.ಕ. ಸಹಕಾರಿ ಹಾಲು ಒಕ್ಕೂಟ ನಿಯಮಿತ ಮನವಿ ಮಾಡಿತ್ತು. ಪೂರಕ ಪ್ರಕ್ರಿಯೆಗಳ ಬಳಿಕ ಇದೀಗ ಸರಕಾರದ ಹಂತದಲ್ಲಿ ಮಂಜೂರಾತಿ ಸಿಕ್ಕಿದೆ. ಇದರಿಂದ ಪುತ್ತೂರಿನಲ್ಲಿ ಉದ್ಯೋಗ ಸೃಷ್ಟಿಗೆ ಅವಕಾಶ ಸಿಗಲಿದೆ.
– ಅಶೋಕ್‌ ಕುಮಾರ್‌ ರೈ,
ಶಾಸಕ, ಪುತ್ತೂರು

 

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.