Job: ಖಾಲಿ ಹುದ್ದೆ ಕಾಲಮಿತಿಯಲ್ಲಿ ಭರ್ತಿ: ಸಿಎಂ
Team Udayavani, Dec 8, 2023, 11:45 PM IST
ಬೆಳಗಾವಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ಕ್ಕೆ ಗುರಿ ನಿಗದಿಪಡಿಸಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೇಲ್ಮನೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿಯ ಶಶೀಲ್ ನಮೋಶಿ ಪ್ರಸ್ತಾವಿಸಿದ ವಿಷಯಕ್ಕೆ ಲಿಖೀತ ಉತ್ತರ ನೀಡಿದ ಮುಖ್ಯಮಂತ್ರಿ, ಕೆಪಿಎಸ್ಸಿಯಿಂದ ವಿವಿಧ ಹುದ್ದೆಗಳ ನೇಮಕದಲ್ಲಿ ಆಗುತ್ತಿರುವ ವಿಳಂಬ ತಡೆಗಟ್ಟಲು ನೇಮಕಾತಿ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಆಯೋಗದ ಅಧಿಕಾರಿಗಳು, ನೌಕರರು ಸಾರ್ವತ್ರಿಕ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ತಾತ್ಕಾಲಿಕ ವೇಳಾಪಟ್ಟಿ ಹಾಕಿಕೊಂಡು ಗುರಿ ನಿಗದಿಪಡಿಸಲಾಗಿದೆ ಎಂದರು. ಪ್ರತಿ ನೇಮಕಾತಿ ಪ್ರಕ್ರಿಯೆಗಳಲ್ಲಿಯೂ ಅಭ್ಯರ್ಥಿಗಳು ಕಾನೂನು ಪ್ರಕರಣ ಗಳನ್ನು ದಾಖಲಿಸುತ್ತಿದ್ದಾರೆ. ಇದರಿಂದ ಕೆಲವು ಸಂದರ್ಭಗಳಲ್ಲಿ ನೇಮಕಾತಿ ವಿಳಂಬವಾಗುತ್ತಿದೆ. ಆಯೋಗವು ಅಧಿಸೂಚಿಸುವ ಕೆಲವು ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳಲ್ಲಿ ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಕಾರ್ಯ ಮಾಡಿಸಬೇಕಾಗಿದ್ದರಿಂದ ತಡವಾಗಿದೆ. ನಿಗದಿತ ಸಮಯದಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸದಿರುವುದೂ ವಿಳಂಬಕ್ಕೆ ಕಾರಣವಾಗಿದೆ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.