Punjalkatte ಪತ್ನಿಗೆ ಎರಡನೇ ವಿವಾಹ ದೃಢ: ಜೀವನಾಂಶ ರದ್ದುಗೊಳಿಸಿ ಕೋರ್ಟ್‌ ಆದೇಶ


Team Udayavani, Dec 9, 2023, 11:08 PM IST

Punjalkatte ಪತ್ನಿಗೆ ಎರಡನೇ ವಿವಾಹ ದೃಢ: ಜೀವನಾಂಶ ರದ್ದುಗೊಳಿಸಿ ಕೋರ್ಟ್‌ ಆದೇಶ

ಪುಂಜಾಲಕಟ್ಟೆ: ವಿವಾಹದ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿ ವಿಚಾರಣ ಹಂತದಲ್ಲಿರುವಾಗಲೇ ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಹಿನ್ನೆಲೆಯಲ್ಲಿ ಮಂಗಳೂರಿನ ಕೌಟುಂಬಿಕ ನ್ಯಾಯಾಲಯವು ಆಕೆಯ ನಿರ್ವಹಣೆಗಾಗಿ ನೀಡಲಾಗುತ್ತಿದ್ದ ಜೀವನಾಂಶವನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದೆ.

ಪಣಕಜೆ, ಮಂಡಾಡಿ ನಿವಾಸಿ ಉದಯ ನಾಯಕ್‌ ಅವರು ಮಂಗಳೂರಿನ ಮೇರಿಹಿಲ್‌ನ ಅನಿತಾ ನಾಯಕ್‌ರನ್ನು 2018ರಲ್ಲಿ ಮದುವೆಯಾಗಿದ್ದು, ಬಳಿಕ ಇವರ ದಾಂಪತ್ಯದಲ್ಲಿ ಕೆಲ ಅಡೆತಡೆಗಳು ಬಂದ ಹಿನ್ನೆಲೆಯಲ್ಲಿ ಉದಯ ನಾಯಕ್‌ ಅವರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವ್ಯಾಜ್ಯವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಅನಿತಾ ನಾಯಕ್‌ ಗೌಪ್ಯವಾಗಿ ಎರಡನೇ ವಿವಾಹವಾಗುತ್ತಿದ್ದಾಳೆಂದು ಪತಿ ಬೆಳ್ತಂಗಡಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ಫಿರ್ಯಾದು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಪುಂಜಾಲಕಟ್ಟೆ ಠಾಣಾ ಅಧಿಕಾರಿಗೆ ಸೂಚಿಸಿತ್ತು.

ಈ ಮಧ್ಯೆ ಉದಯ್‌ ನಾಯಕ್‌ ಅವರಿಂದ ಜೀವನಾಂಶವನ್ನು ಕೋರಿ ಪತ್ನಿ ಅನಿತಾ ನಾಯಕ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ಸಂದರ್ಭ ನ್ಯಾಯಾಲಯದ ಆದೇಶದಂತೆ ಉದಯ್‌ ನಾಯಕ್‌ ಅವರು ಪತ್ನಿಗೆ ನಿರ್ವಹಣ ಪಾವತಿಯಾಗಿ 15 ಸಾ. ರೂ.ವಿನ ಡಿಮ್ಯಾಂಡ್‌ ಡ್ರಾಫ್ಟ್ ಅನ್ನು ನೀಡಿದ್ದರು.

ಪತ್ತೆದಾರನಾದ ಪತಿ
ಪತ್ನಿ ಗೌಪ್ಯವಾಗಿ ಎರಡನೇ ವಿವಾಹವಾಗಿರುವುದನ್ನು ಖಚಿತಪಡಿಸುವ ನಿಟ್ಟಿನಲ್ಲಿ ಪತಿ ಉದಯ ನಾಯಕ್‌ ಖುದ್ದು ಪತ್ತೆದಾರಿಕೆಗೆ ಮುಂದಾದರು. ಪತ್ನಿ ಅನಿತಾ 2023ರ ಮಾರ್ಚ್‌ 13ರಂದು ಮುಂಬಯಿಯ ಡೊಂಬಿವಲಿಯ ಲೋಧಾ ಪ್ಯಾನೇಸಿಯಾದಲ್ಲಿ ಹರಿಕೃಷ್ಣ ಗಣಪತ್‌ ರಾವ್‌ ಕೀಲು ಅವರೊಂದಿಗೆ ಎರಡನೇ ವಿವಾಹವಾಗಿದ್ದು ಈ ಬಗ್ಗೆ ಮಹಾರಾಷ್ಟ್ರ ಶಾಸನ ರಾಜಪತ್ರದ ಮಾರ್ಚ್‌ 16-22, 2023ರ ಆವೃತ್ತಿಯಲ್ಲಿ ಪ್ರಕಟಗೊಂಡಿರುವ ದಾಖಲೆಯ ಮೂಲಕ ಉದಯ ನಾಯಕ್‌ ದೃಢಪಡಿಸಿಕೊಂಡರು. ಅನಿತಾ ನಾಯಕ್‌ ತನ್ನ ಹೆಸರನ್ನು ಅನಿತಾ ಹರಿಕೃಷ್ಣ ಕೀಲು ಎಂದು ಬದಲಾಯಿಸಿಕೊಂಡಿದ್ದರು. ಇವರ ಎರಡನೇ ವಿವಾಹವು 2022ರ ಡಿ. 27ರಂದೇ ನಡೆದಿತ್ತು ಎಂಬ ವಿಚಾರ ಮಹಾರಾಷ್ಟ್ರ ಗೆಜೆಟ್‌ ಕಚೇರಿಗೆ ಸಲ್ಲಿಸಿದ ಪ್ರಮಾಣಪತ್ರದ ಪ್ರಕಾರ ಬೆಳಕಿಗೆ ಬಂದಿದೆ. ಅನಿತಾ ಅವರ ಎರಡನೇ ವಿವಾಹದ ಛಾಯಾಚಿತ್ರಗಳನ್ನು ಆಕೆಯ ಸಂಬಂಧಿಯೋರ್ವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದರು. ಆದರೂ ಜೀವನಾಂಶ ಪಡೆಯಲು ಅನಿತಾಳ ತಂದೆ ರಾಮಚಂದ್ರ ನಾಯಕ್‌ ತನ್ನ ಸಂಬಂಧಿಯ ಜತೆ ಮಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಆಗಮಿಸುತ್ತಿದ್ದರೆನ್ನಲಾಗಿದೆ.

ಉದಯ್‌ ನಾಯಕ್‌ ತನ್ನ ಪತ್ನಿ ಅನಿತಾ ಎರಡನೇ ವಿವಾಹವಾದ ಕುರಿತಂತೆ ಛಾಯಾಚಿತ್ರಗಳ ಸಹಿತ ಪ್ರಕಟವಾದ ಮಹಾರಾಷ್ಟದ ಗೆಜೆಟ್‌ ಅನ್ನು ಕೌಟುಂಬಿಕ ನ್ಯಾಯಾಲಯಕ್ಕೆ ಪುರಾವೆಯಾಗಿ ಸಲ್ಲಿಸಿದರು. ಇದರ ವಿಚಾರಣೆ ನಡೆಸಿದ ಪ್ರಧಾನ ನ್ಯಾಯಾಧೀಶರು ಈ ಪುರಾವೆಗಳನ್ನು ಅಂಗೀಕರಿಸಿದ್ದಲ್ಲದೆ ಅನಿತಾಳಿಗೆ ನಿರ್ವಹಣೆಗಾಗಿ ನೀಡಲಾಗುತ್ತಿದ್ದ ಜೀವನಾಂಶವನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದ್ದಾರೆ. ಅನಿತಾ ನಾಯಕ್‌ ಅವರ ಎರಡನೇ ವಿವಾಹಕ್ಕೆ ಸಂಬಂಧಿಸಿದಂತೆ ಉದಯ್‌ ನಾಯಕ್‌ ಅವರ ಅರ್ಜಿಯ ಹೆಚ್ಚಿನ ತನಿಖೆಗೂ ನಿರ್ದೇಶಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.