Madikeri ಕರಿಕೆಯಲ್ಲಿ ಕಾಡಾನೆಗಳಿಂದ ಕೃಷಿ ನಾಶ, ಆತಂಕ ಸೃಷ್ಟಿ
Team Udayavani, Dec 9, 2023, 11:25 PM IST
ಮಡಿಕೇರಿ: ಕೊಡಗಿನ ಗಡಿ ಗ್ರಾಮ ಕರಿಕೆಯ ಪಚ್ಚೆಪಿಲಾವು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟಗಳಿಗೆ ನುಗ್ಗಿ ಕೃಷಿ ಫಸಲನ್ನು ನಾಶಪಡಿಸುತ್ತಿರುವ ಗಜ ಹಿಂಡು ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ.
ಸ್ಥಳೀಯ ನಿವಾಸಿ ಎಚ್.ಎಂ. ನಂಜುಂಡ ಅವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು ಕರಿಮೆಣಸು, ಬಾಳೆ, ಅಡಿಕೆ ಮರಗಳು ಮತ್ತು ಸ್ಪ್ರಿಂಕ್ಲರ್ಗಳನ್ನು ನಾಶಪಡಿಸಿವೆ. ಅಕ್ಕಪಕ್ಕದ ತೋಟಗಳಿಗೂ ನುಗ್ಗಿ ನಷ್ಟವನ್ನುಂಟು ಮಾಡಿವೆ.
ಪ್ರತೀವರ್ಷ ಕೈಗೆ ಬಂದ ತುತ್ತು ಬಾಯಿಗೆ ಬಾರದ ಪರಿಸ್ಥಿತಿ ಎದುರಾಗುತ್ತಿದ್ದು, ಫಸಲು ಕಾಡಾನೆಗಳ ಹೊಟ್ಟೆ ಸೇರುತ್ತಿದೆ ಎಂದು ಕೃಷಿಕರು ಅಳಲು ತೋಡಿಕೊಂಡಿದ್ದಾರೆ. ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕು, ದಾಳಿಯನ್ನು ನಿಯಂತ್ರಿಸಲು ಆನೆ ಕಂದಕಗಳನ್ನು ನಿರ್ಮಿಸಬೇಕು ಮತ್ತು ಆನೆಗಳಿಂದ ಉಂಟಾದ ಬೆಳೆ ನಷ್ಟಕ್ಕೆ ಶೀಘ್ರ ಪರಿಹಾರ ವಿತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.