Odisha: ಕ್ಷಿಪಣಿ ಪರೀಕ್ಷೆ ನಡೆಸದಿರಿ: DRDO ಗೆ ಒಡಿಶಾ ಸರಕಾರ ಮನವಿ
ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲಿ ಸಮುದ್ರ ಆಮೆಗಳು ಸಾಮೂಹಿಕವಾಗಿ ಗೂಡುಕಟ್ಟುವ ಋತು
Team Udayavani, Dec 9, 2023, 11:55 PM IST
ಭುವನೇಶ್ವರ್: ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲಿ ಸಮುದ್ರ ಆಮೆಗಳು ಸಾಮೂಹಿಕವಾಗಿ ಗೂಡುಕಟ್ಟುವ ಋತುವಾದ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಒಡಿಶಾ ಕರಾವಳಿಯಲ್ಲಿ ಕ್ಷಿಪಣಿ ಪರೀಕ್ಷೆಗಳನ್ನು ನಡೆಸದಂತೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ)ಗೆ ಒಡಿಶಾ ಸರಕಾರ ಮನವಿ ಮಾಡಿದೆ.
ರಾಜ್ಯದ ಬಾಲಾಸೋರ್ ಜಿಲ್ಲೆಯ ಚಾಂದಿಪುರ್ ಹಾಗೂ ಭದ್ರಕ್ ಜಿಲ್ಲೆಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಎರಡು ಪ್ರಮುಖ ಕ್ಷಿಪಣಿ ಪರೀಕ್ಷಾ ಪ್ರದೇಶಗಳನ್ನು ಡಿಆರ್ಡಿಒ ಹೊಂದಿದೆ. ಗರ್ಹೀಮಠ ಅಭಯಾರಣ್ಯ ಸಮೀಪದಲ್ಲಿ ಈ ಕ್ಷಿಪಣಿ ಪರೀಕ್ಷಾ ಪ್ರದೇಶಗಳಿವೆ. ಈ ಅಭಯಾರಣ್ಯದಲ್ಲಿ ಆಲಿವ್ ರಿಡ್ಲಿ ಸಮುದ್ರ ಆಮೆಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತವೆ. ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಕ್ಷಿಪಣಿ ಪರೀಕ್ಷೆ ನಡೆಸದಂತೆ ಪ್ರತಿ ವರ್ಷ ಡಿಆರ್ಡಿಒಗೆ ಒಡಿಶಾ ಸರಕಾರ ಮನವಿ ಮಾಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.