![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
ಹುಟ್ಟುಹಬ್ಬದಂದು ಹಿಮಾಲಯದ ತಪ್ಪಲಿನಲ್ಲಿ ಬೆತ್ತಲಾದ ನಟ ವಿದ್ಯುತ್; ಹಂಚಿಕೊಂಡ ಫೋಟೋ ವೈರಲ್
Team Udayavani, Dec 10, 2023, 3:40 PM IST
![ಹುಟ್ಟುಹಬ್ಬದಂದು ಹಿಮಾಲಯದ ತಪ್ಪಲಿನಲ್ಲಿ ಬೆತ್ತಲಾದ ನಟ ವಿದ್ಯುತ್; ಹಂಚಿಕೊಂಡ ಫೋಟೋ ವೈರಲ್](https://www.udayavani.com/wp-content/uploads/2023/12/tdy-11-3-620x372.jpg)
ಮುಂಬಯಿ: ಬಾಲಿವುಡ್ ಸಿನಿರಂಗದ ಪ್ರತಿಭಾವಂತ ನಟರಲ್ಲಿ ಒಬ್ಬರಾಗಿರುವ ವಿದ್ಯುತ್ ಜಮಾವಾಲ್ ಅವರು ಇಂಟರ್ ನೆಟ್ ನಲ್ಲಿ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಅದಕ್ಕೆ ಕಾರಣ ಅವರು ಪೋಸ್ಟ್ ಮಾಡಿರುವ ಫೋಟೋಗಳು.
ಇಂದು(ಡಿ.10) ವಿದ್ಯುತ್ ಜಮಾವಾಲ್ ಅವರದು 43ನೇ ಹುಟ್ಟುಹಬ್ಬದ ಸಂಭ್ರಮ. ಅವರು ತನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ, ಆತ್ಮೀಯರೊಂದಿಗೆ ಆಚರಿಸಿಕೊಳ್ಳಿಲ್ಲ. ಬದಲಾಗಿ ಹಿಮಾಲಯದ ತಪ್ಪಲಿನಲ್ಲಿ ಒಂಟಿಯಾಗಿ, ಮೈಯಲ್ಲಿ ಯಾವ ಬಟ್ಟೆ ಬರೆಯಿಲ್ಲದೆಯೇ ಬೆತ್ತಲಾಗಿ ಆಚರಿಸಿಕೊಂಡಿದ್ದಾರೆ.!
ಹಿಮಾಲಯದ ತಪ್ಪಿಲಿನಲ್ಲಿ ನಟ ವಿದ್ಯುತ್ ಅವರು ಮೈ ಮೇಲೆ ತುಂಡು ಬಟ್ಟೆಯೂ ಇಲ್ಲದೇ ಕೂತುಕೊಂಡು ಯೋಗ, ಅಡುಗೆ ಮಾಡುವುದು ಹಾಗೂ ಸ್ನಾನ ಮಾಡುವಾಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇಂಟರ್ ನೆಟ್ ನಲ್ಲಿ ಬೆಂಕಿ ಹಚ್ಚಿದೆ.
“ಹಿಮಾಲಯ ಶ್ರೇಣಿಗಳಿಗೆ ನನ್ನ ನಮನಗಳು. ಕಳೆದ 14 ವರ್ಷಗಳಿಂದ ನಾನು ಈ ರೀತಿಯಾಗಿ ಒಂಟಿಯಾಗಿ ಐಷಾರಾಮಿ ಜೀವನ ಶೈಲಿಯನ್ನು ಬಿಟ್ಟು, ಪ್ರತಿ ವರ್ಷ 7-10 ದಿನಗಳನ್ನು ಕಳೆಯುತ್ತೇನೆ. ಇದು ಜೀವನದ ಒಂದು ಅವಿಭಾಜ್ಯ ಅಂಗವಾಗಿದೆ. ಐಷಾರಾಮಿ ಜೀವನವನ್ನು ಬಿಟ್ಟು ಈ ರೀತಿ ಏಕಂತದಲ್ಲಿರುವಾಗ ನಾನು ಯಾರು – ಯಾರಲ್ಲ ಎನ್ನುವುದರ ಪ್ರಾಮುಖ್ಯತೆಯ ಬಗ್ಗೆ ತಿಳಿದುಕೊಳ್ಳುತ್ತೇನೆ. ಇದು “ನಾನು ಯಾರು” ಎಂದು ತಿಳಿದುಕೊಳ್ಳುವ ಮೊದಲ ಹಂತವಾಗಿದೆ. ಇದು ಪ್ರಕೃತಿ ಒದಗಿಸಿದ ಐಷಾರಾಮಿ” ಎಂದು ನಟ ವಿದ್ಯುತ್ ಪೋಸ್ಟ್ ಕೆಳಗೆ ಬರೆದುಕೊಂಡಿದ್ದಾರೆ.
ಸ್ಥಳೀಯ ಕುರಿಗಾಹಿಯೊಬ್ಬರು ಫೋಟೋ ತೆಗೆದಿರುವುದಾಗಿ ವಿದ್ಯುತ್ ಹೇಳಿದ್ದಾರೆ.
ಸದ್ಯ ಫೋಟೋ ನೋಡಿ ನೆಟ್ಟಿಗರು ವಿದ್ಯುತ್ ಅವರು ಆಧ್ಯಾತ್ಮದ ಕಡೆಗೆ ಹೋಗುತ್ತಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ. ಕೆಲವರು ಇಂತಹ ಫೋಟೋಗಳನ್ನು ಹಾಕಬಾರದಿತ್ತು ಎಂದು ಕಮೆಂಟ್ ಮಾಡಿದ್ದಾರೆ.
ವಿದ್ಯುತ್ ಅವರು ಮುಂದೆ ʼ ಕ್ರ್ಯಾಕ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಸಿನಿಮಾ 2024 ರ ಫೆ.23 ರಂದು ತೆರೆ ಕಾಣಲಿದೆ.
ಟಾಪ್ ನ್ಯೂಸ್
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![samanta](https://www.udayavani.com/wp-content/uploads/2024/07/samanta-150x95.jpg)
Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು
![Bollywood: 8 ವರ್ಷದ ಬಳಿಕ ಬಾಲಿವುಡ್ಗೆ ಪಾಕ್ ನಟ ಫವಾದ್ ಖಾನ್ ಕಂಬ್ಯಾಕ್](https://www.udayavani.com/wp-content/uploads/2024/07/14-1-150x90.jpg)
Bollywood: 8 ವರ್ಷದ ಬಳಿಕ ಬಾಲಿವುಡ್ಗೆ ಪಾಕ್ ನಟ ಫವಾದ್ ಖಾನ್ ಕಂಬ್ಯಾಕ್
![ಜಪಾನ್ನಲ್ಲಿ ರಿಲೀಸ್ ಆಗಲಿದೆ ʼಜವಾನ್ʼ: 4 ತಿಂಗಳ ಮೊದಲೇ ಅಡ್ವಾನ್ಸ್ ಬುಕಿಂಗ್ ಶುರು](https://www.udayavani.com/wp-content/uploads/2024/07/12-2-150x90.jpg)
ಜಪಾನ್ನಲ್ಲಿ ರಿಲೀಸ್ ಆಗಲಿದೆ ʼಜವಾನ್ʼ: 4 ತಿಂಗಳ ಮೊದಲೇ ಅಡ್ವಾನ್ಸ್ ಬುಕಿಂಗ್ ಶುರು
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
![Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…](https://www.udayavani.com/wp-content/uploads/2024/07/12-150x90.jpg)
Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…
MUST WATCH
ಹೊಸ ಸೇರ್ಪಡೆ
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.