BJP ಕಡೆಗೆ ಪ್ರಭಾವಿ ಕೈ ಸಚಿವ- 50-60 ಶಾಸಕರ ಜತೆ ಪಕ್ಷಾಂತರ ಸಾಧ್ಯತೆ: HDK ಹೊಸ ಬಾಂಬ್
ಬಿಜೆಪಿ ಕೇಂದ್ರ ನಾಯಕರ ಜತೆ ಚರ್ಚೆ ಎಂದ ಮಾಜಿ ಮುಖ್ಯಮಂತ್ರಿ
Team Udayavani, Dec 11, 2023, 12:19 AM IST
ಹಾಸನ: “ರಾಜ್ಯ ಕಾಂಗ್ರೆಸ್ ಸರಕಾರದ ಪ್ರಭಾವಿ ಸಚಿವರೊಬ್ಬರು 50-60 ಶಾಸಕರ ಜತೆ ಬಿಜೆಪಿಗೆ ಹೋಗಲು ಸಜ್ಜಾಗಿರುವ ಮಾಹಿತಿ ನನಗೆ ಸಿಕ್ಕಿದೆ’.
-ಇದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಸಿಡಿಸಿರುವ ಹೊಸ ಬಾಂಬ್.
ರವಿವಾರ ಇಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮೇಲಿರುವ ಅಕ್ರಮದ ಆರೋಪಗಳಿಂದ ಪಾರಾಗಲು ಈ “ಪ್ರಭಾವಿ’ ಸಚಿವರು ಬಿಜೆಪಿ ಕೇಂದ್ರ ನಾಯಕರ ಜತೆ ಚೌಕಾಸಿ ಮಾಡುತ್ತಿದ್ದಾರೆ. ತಮ್ಮ ಮೇಲಿರುವ ಅಕ್ರಮಗಳ ಆರೋಪಗಳಿಂದ ಪಾರಾಗಲು ಅವರು ಬಿಜೆಪಿಯ ಕೇಂದ್ರ ನಾಯಕರ ಕೈಕಾಲು ಹಿಡಿಯುತ್ತಿದ್ದಾರೆ. ಸುಮಾರು 50 ಶಾಸಕರ ಜತೆ ಬೇಲಿ ಹಾರಲು ತಯಾರಿ ನಡೆಸುತ್ತಿದ್ದಾರೆ ಎಂದು ನನಗೆ ಒಬ್ಬರು ಮಾಹಿತಿ ನೀಡಿದ್ದಾರೆ ಎಂದರು.
ಒಂದೊಂದೇ ಧ್ವನಿ ಹೊರಬರಲಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿ ಪ್ರಸಾದ್ ವಾಗ್ಧಾಳಿ ನಡೆಸಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿ ಸಿದ ಎಚ್ಡಿಕೆ, “ಬರೀ ಹರಿಪ್ರಸಾದ್ ಅಲ್ಲ. ಇನ್ನೂ ಸಾಕಷ್ಟು ಜನ ಇದ್ದಾರೆ. ಒಂದೊಂದೇ ಧ್ವನಿ ಹೊರಬರಲಿದೆ. ಹರಿ ಪ್ರಸಾದ್ ಅವರ ಹೆಸರನ್ನಷ್ಟೇ ಏಕೆ ಹೇಳುತ್ತೀರಿ? ಅಧಿಕಾರ ದಲ್ಲಿ ಉಳಿದುಕೊಳ್ಳಲು ವ್ಯಾಪಾರ ಮಾಡಲು ಹೋಗಿದ್ದಾರೆ. ಮಾಡಿರುವ ಅಕ್ರಮಗಳನ್ನು ಮುಚ್ಚಿಹಾಕಲು ಹೋಗಿರುವ ಮಾಹಿತಿಯೂ ನನಗೆ ಇದೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರು’ ಎಂದರು.
ಜನವರಿಯಲ್ಲಿ ಮೈತ್ರಿಗೆ ಅಂತಿಮ ರೂಪ
ಬಿಜೆಪಿ – ಜೆಡಿಎಸ್ ಮೈತ್ರಿಗೆ ಜನವರಿ ಕೊನೆಯ ವಾರ ದೊಳಗೆ ಅಂತಿಮ ರೂಪ ಸಿಗಲಿದೆ. ಎಚ್.ಡಿ. ದೇವೇಗೌಡ ರನ್ನೂ ಸೇರಿಸಿಕೊಂಡೇ ಮೈತ್ರಿಯ ಅಂತಿಮ ರೂಪ, ಸೀಟು ಹಂಚಿಕೆ ತೀರ್ಮಾನವಾಗಲಿದೆ. ಜೆಡಿಎಸ್ ಪಾಲಿಗೆ ಬರುವ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವ ಅಂಶ ಆಧರಿಸಿ ಸೀಟು ಹಂಚಿಕೆ ಆಗಲಿದೆ ಎಂದು ಎಚ್ಡಿಕೆ ಸ್ಪಷ್ಟಪಡಿಸಿದರು.
ಜಾತಿಗಣತಿ ಯಾಕೆ ಬೇಕು? ಈ ರಾಜ್ಯ-ದೇಶ ಉದ್ಧಾರ ಆಗಬೇಕಾದರೆ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮಾಡಲಿ. ಜಾತಿಗಣತಿ ಮಾಡಿ ಈಗ ಮುಸ್ಲಿಮರಿಗೆ ಹಣ ಕೊಡುತ್ತೇವೆ ಎಂದು ಹೇಳಿ ಅವರ ಹೆಸರಿನಲ್ಲಿಯೂ ಕಮಿಷನ್ ಹೊಡೆಯುತ್ತಾರೆ ಅಷ್ಟೇ.
- ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.