Tiger: ಅರಣ್ಯ ಸಿಬ್ಬಂದಿಯನ್ನು ಕಾಡಿಸುತ್ತಿರುವ ಹುಲಿರಾಯ


Team Udayavani, Dec 11, 2023, 10:31 AM IST

Tiger: ಅರಣ್ಯ ಸಿಬ್ಬಂದಿಯನ್ನು ಕಾಡಿಸುತ್ತಿರುವ ಹುಲಿರಾಯ

ಹುಣಸೂರು: ನಾಗರಹೊಳೆ ಉದ್ಯಾನದಂಚಿನ ನೇಗ ತ್ತೂರು ಬಳಿಯ ಶೆಟ್ಟಳ್ಳಿ-ಲಕ್ಕಪಟ್ಟಣ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿ ಪತ್ತೆಗಾಗಿ ಅಳವಡಿಸಿರುವ ಕ್ಯಾಮೆ ರಾದಲ್ಲಿ ಹುಲಿಯ ಛಾಯಾಚಿತ್ರ ಸೆರೆಯಾಗಿದ್ದರೆ, ಇತ್ತ ಕೂಂಬಿಂಗ್‌ ನಡೆಸುತ್ತಿರುವ ಸಿಬ್ಬಂದಿಯನ್ನು ಕಾಡಿಸುತ್ತಿದೆ.

ತಾಲೂಕಿನ ಹನಗೋಡು ಹೋಬಳಿ ನೇಗತ್ತೂರಿನ ಲಕ್ಷ್ಮಮ್ಮ ಚಂದ್ರೇಗೌಡರಿಗೆ ಸೇರಿದ 2 ಹಸುಗಳನ್ನು ಬಲಿ ಪಡೆದ ನಂತರ ಹುಲಿ ಪತ್ತೆಗಾಗಿ ಎಸಿಎಫ್‌ ದಯಾನಂದ್‌ ಮಾರ್ಗದರ್ಶನದಲ್ಲಿ ಆರ್‌ಎಫ್‌ಒ ಸುಬ್ರಹ್ಮಣ್ಯರ ನೇತೃತ್ವದಲ್ಲಿ ಡಿಆರ್‌ಎಫ್‌ಒಗಳಾದ ಸಿದ್ದರಾಜು, ವೀರಭದ್ರಯ್ಯ, ಅರಣ್ಯ, ಆರ್‌ಆರ್‌ಟಿ ಸಿಬ್ಬಂದಿ ಹಾಗೂ ಸಾಕಾನೆಗಳಾದ ಗಣೇಶ, ಶ್ರೀರಂಗ ಸಹಾಯದಿಂದ 3 ದಿನಗಳಿಂದ ಕೂಂಬಿಂಗ್‌ ನಡೆಸುತ್ತಿ ದ್ದರೂ ಹುಲಿ ಮಾತ್ರ ಪತ್ತೆಯಾಗುತ್ತಿಲ್ಲ.

ಕ್ಯಾಮೆರಾದಲ್ಲಿ ಹುಲಿ ಚಿತ್ರ ಸೆರೆ: ಹುಲಿ ಕಾಣಿಸು ತ್ತಿಲ್ಲವಾದರೂ ಹುಲಿಯ ಹೆಜ್ಜೆ ಪತ್ತೆಯಾಗಿದೆ. ಕ್ಯಾಮೆ ರಾಕ್ಕೆ ಎರಡನೇ ಬಾರಿಗೆ ಹುಲಿ ಸೆರೆಯಾಗಿದೆ. ಅರಣ್ಯ ದಂಚಿನ ಜಮೀನುಗಳಲ್ಲಿ ಕೆಲಸ ಮಾಡುತ್ತಿರುವ ರೈತ ರಿಗೆ ಹುಲಿ ಇರುವಿಕೆ ಕುರಿತು, ರಾತ್ರಿ ವೇಳೆ ಒಂಟಿಯಾಗಿ ತಿರುಗಾಡಬಾರದು ಎಂದು ಗ್ರಾಮಸ್ಥರಿಗೆ ಎಚ್ಚರಿಕೆ ನೀಡ ಲಾಗಿದೆ ಎಂದು ಆರ್‌ಎಫ್‌ಒ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಚಳ್ಳೆಹಣ್ಣು ತಿನ್ನಿಸುತ್ತಿರುವ ಹುಲಿ: ಹನಗೋಡು ಭಾಗದಲ್ಲಿ 6 ತಿಂಗಳಿನಿಂದ ಈ ಹುಲಿಯು ಒಮ್ಮೆ ಹನ ಗೋಡು, ಮತ್ತೂಮ್ಮೆ ನೇಗತ್ತೂರು, ಕಾಳಬೂಚನಹಳ್ಳಿ, ಉಡುವೆಪುರ ಹೀಗೆ ಸುತ್ತಮುತ್ತಲ ಗ್ರಾಮಗಳಲ್ಲಿ ಬೇಟೆ ಯಾಡಿ ಕಾಣದಂತೆ ಮಾಯವಾಗುವ ಈ ಹುಲಿಯ ಬಗ್ಗೆ ರೈತರು ದೂರು ನೀಡಿದ್ದರು. ಇತ್ತೀಚೆಗೆ ಹನ ಗೋಡು ಗ್ರಾಮದ ರಸ್ತೆ ದಾಟಿರುವ ಹುಲಿಯನ್ನು ಕಂಡವರು ಮಾಹಿತಿ ನೀಡಿದ್ದರು. ಹೀಗಾಗಿ ಸಿಬ್ಬಂದಿ ಪರಿಶೀಲನೆ ನಡೆಸಿದ ವೇಳೆ ಇದು ಹುಲಿ ಹೆಜ್ಜೆ ಎಂದು ದೃಢಪಡಿಸಿದ್ದರು.

ಇದೀಗ ನೇಗತ್ತೂರು ಭಾಗಕ್ಕೆ ಹುಲಿ ಶಿಫ್ಟ್ ಆಗಿದೆ. 3 ದಿನಗಳ ಹಿಂದೆ 2 ಹಸುಗಳನ್ನು ಬಲಿ ಪಡೆದು ಪಕ್ಕದ ಶೆಟ್ಟಹಳ್ಳಿ-ಲಕ್ಕಪಟ್ಟಣ ಅರಣ್ಯ ಪ್ರದೇಶ ದಲ್ಲಿ ಸೇರಿಕೊಂಡಿತ್ತು. 3 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರೂ ಹುಲಿ ಕಣ್ಣಿಗೆ ಕಾಣಿಸುತ್ತಿಲ್ಲ, ಆದರೆ, ಇಲಾಖೆಯು ಹುಲಿ ಪತ್ತೆಗಾಗಿ ಅಳವಡಿಸಿರುವ ಕ್ಯಾಮರಾ ಟ್ರಾಪಿಂಗ್‌ನಲ್ಲಿ ತನ್ನ ಇರುಕೆಯನ್ನು ತೋರ್ಪಡಿಸಿ ಜಾಣತನ ಮೆರೆಯುತ್ತಾ ಸಿಬ್ಬಂದಿಗಳಿಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ‌

ಸೆರೆಗೆ ಹೆಚ್ಚಿದ ಒತ್ತಾಯ: ಶೆಟ್ಟಳ್ಳಿ-ಲಕ್ಕಪಟ್ಟಣ ಮೀಸಲು ಅರಣ್ಯ ಪ್ರದೇಶದ ರೈತರು, ಸಾರ್ವಜನಿಕರು ಜಮೀನಿಗೆ ತೆರಳಲು ಹೆದರುತ್ತಿದ್ದರೆ ಇನ್ನು ದ್ವಿಚಕ್ರವಾಹನಗಳಲ್ಲಿ ಶಾಲಾ -ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮುಂಜಾ ನೆಯೇ ಕಾಲೇಜು ಸೇರಿದಂತೆ ಕೆಲಸಕಾರ್ಯಗಳಿಗೆ ತೆರಳಬೇಕಿದ್ದು, ಹುಲಿ ಎಲ್ಲಿಂದ ಬರುತ್ತೋ,ಯಾವ ಕಡೆಯಿಂದ ರಸ್ತೆಗೆ ಬರುವುದೋ ಎಂಬು ಜೀವ ಭಯದಲ್ಲೇ ಓಡಾಡುವಂತಾಗಿದೆ. ಬೇಗ ಹುಲಿ ಸೆರೆ ಹಿಡಿಯಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಹುಣಸೂರು ತಾಲೂಕಿನ ಹನಗೋಡು ಬಾಗದಲ್ಲಿ ಅಡ್ಡಾಡುತ್ತಾ ಉಪಟಳ ನೀಡುತ್ತಿರುವ ಹುಲಿಯನ್ನು ಸೆರೆ ಹಿಡಿಯಬೇಕೆಂಬ ಗ್ರಾಮಸ್ಥರ ಒತ್ತಾಯದಂತೆ ಚೀಪ್‌ ವೈಲ್ಡ್‌ ಲೈಫ್‌ ವಾರ್ಡ್‌ನ್‌ರವರಿಗೆ ಮಾಡಿದ್ದ ಮನವಿಯಂತೆ ಸೆರೆ ಹಿಡಿಯಲು ಅನುಮತಿ ಸಿಕ್ಕಿದೆ. ಸೋಮವಾರ ಅಧಿಕೃತ ಆದೇಶ ಕೈ ತಲುಪುವ ನಿರೀಕ್ಷೆಯಲ್ಲಿದ್ದೇವೆ. ಶೆಟ್ಟಳ್ಳಿ-ಲಕ್ಕಪಟ್ಟಣ ಅರಣ್ಯ ಪ್ರದೇಶದಲ್ಲಿ ಸೇರಿಕೊಂಡಿರುವ ಈ ಹುಲಿ ಸೆರೆಗೆ ಅಗತ್ಯ ಕ್ರಮವಹಿಸಲಾಗುವುದು. ಹರ್ಷಕುಮಾರ್‌ ಚಿಕ್ಕನರಗುಂದ, ಹುಲಿಯೋಜನೆ ನಿರ್ದೇಶಕ

 –ಸಂಪತ್‌ ಕುಮಾರ್‌

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.