ಮೇನಾಲ: ಶಾಲೆಯಲ್ಲಿ ತುರ್ತು ಪೋಷಕರ ಸಭೆ; ವಿದ್ಯಾರ್ಥಿಯ ದುರ್ವರ್ತನೆ ಆಕ್ರೋಶ


Team Udayavani, Dec 11, 2023, 5:02 PM IST

ಮೇನಾಲ: ಶಾಲೆಯಲ್ಲಿ ತುರ್ತು ಪೋಷಕರ ಸಭೆ; ವಿದ್ಯಾರ್ಥಿಯ ದುರ್ವರ್ತನೆ ಆಕ್ರೋಶ

ಈಶ್ವರ ಮಂಗಲ: ಮೇನಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ಓರ್ವರಿಂದ ಇಡೀ ಶಾಲೆಗೆ ತೊಂದರೆ , ದುರ್ವರ್ತನೆ ಬಗ್ಗೆ ಪೋಷಕರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದ್ದು, ಇಲಾಖೆ ಯ ಮೇಲಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಮೇನಾಲ ಶಾಲೆಯಲ್ಲಿ ನಡೆದಿದೆ.

 ಒಬ್ಬ ವಿದ್ಯಾರ್ಥಿ ಯಿಂದ  122 ಮಕ್ಕಳಿಗೆ ತೊಂದರೆ:

ಮೇನಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 123 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 6ನೇ ತರಗತಿ ವಿದ್ಯಾರ್ಥಿ ಒಬ್ಬ  ಉಳಿದ ವಿದ್ಯಾರ್ಥಿಗಳಿಗೆ ಕೀಟಲೆ, ಉಪದ್ರ ,ಕಲ್ಲು ಬಿಸಾಡುವುದು, ನಿಷೇಧಿತ ವಸ್ತು ಸೇವನೆ ಮುಂತಾದ ದುರ್ವರ್ತನೆಯಿಂದ  ಉಳಿದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿತ್ತು. ಹಲವು ಸಲ ಈ ವಿದ್ಯಾರ್ಥಿಯ ಬಗ್ಗೆ ಗಮನಹರಿಸಿ, ಸರಿಪಡಿಸುವ ವ್ಯವಸ್ಥೆ ನಡೆದರು ಸಹ ವಿದ್ಯಾರ್ಥಿಯ ವರ್ತನೆ ಸರಿಯಾಗಿ ಆಗದೆ ಇರುವುದರಿಂದ 122 ವಿದ್ಯಾರ್ಥಿಗಳ ಪೋಷಕರ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದರು.

ದುರ್ವರ್ತನೆ ತೋರಿದ ವಿದ್ಯಾರ್ಥಿ ಶಾಲೆಗೆ ಬಂದರೆ 122 ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು  ಸಭೆಯಲ್ಲಿದ್ದ ಪೋಷಕರು ಹೇಳಿದರು. ಒಬ್ಬ ವಿದ್ಯಾರ್ಥಿ ಇಂದ ಆಗುವ ತೊಂದರೆಯನ್ನು  ಪೋಷಕರು, ವಿದ್ಯಾರ್ಥಿಗಳು  ಸಭೆಯಲ್ಲಿ ತಿಳಿಸಿದರು. ದುರ್ವರ್ತನೆ ತೋರಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿಯ ತಾಯಿಗೆ  ಕೌನ್ಸಿಲಿಂಗ್ ಮಾಡಿದರೆ ಉತ್ತಮ ಎಂದು ಅಭಿಪ್ರಾಯ ಪೋಷಕರಿಂದ ಬಂತು.

ಶಿಕ್ಷಣ ಸಂಯೋಜಕಿ ಅಮೃತಾ ಕಲಾ ಮಾತನಾಡಿ ಬಾಲ ಮಂದಿರ ಬೊಂದೆಲ್, ಮಂಗಳೂರು ಇಲ್ಲಿಗೆ ಕಳಿಸುವ ಅಥವಾ ಶಾಲಾ ಕೊಠಡಿ ಯಲ್ಲಿ ಶಿಕ್ಷಕಿಯನ್ನು ಇಟ್ಟು ತರಗತಿ ನಡೆಸುವ ಬಗ್ಗೆ ತಿಳಿಸಿದರು. ಇದರಿಂದ ಅಸಮಾಧಾನ ಗೊಂಡ ಪೋಷಕರು ಇಂಥ ಘಟನೆಗಳು ಕೆಲವು ಸಲ ನಡೆದಿವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು  ಸಭೆಯಿಂದ ಹೊರ ಬಂದ ಪೋಷಕರು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿ ಮೇಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು ನಂತರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಸ್ಪಂದಿಸಿದ ಶಿಕ್ಷಣ ಇಲಾಖೆ:

ಶಿಕ್ಷಣಾಧಿಕಾರಿಗಳು ನಗರ ಸಭೆಯ ಚುನಾವಣಾ ಕರ್ತವ್ಯದಲ್ಲಿ ರುವುದರಿಂದ ಶಿಕ್ಷಣಾಧಿಕಾರಿಗಳು ನಿರ್ದೇಶನದಂತೆ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಇವರು ಶಾಲೆಗೆ ಆಗಮಿಸಿ ವಿದ್ಯಾರ್ಥಿಯ ಪೋಷಕರೊಂದಿಗೆ ಮಾತುಕತೆ ನಡೆಸಿದರು.ಮಂಗಳವಾರ ಶಾಲೆಗೆ ಮಕ್ಕಳ ಹಕ್ಕು ಮತ್ತು ಕಲ್ಯಾಣಾಧಿಕಾರಿಗಳ ಸಮಿತಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಭೇಟಿ ನೀಡಿ ಕ್ರಮ ಕೈಗೊಳ್ಳುತ್ತಾರೆ.ಬುಧವಾರ ಈ ಪ್ರಕರಣಕ್ಕೆ ಸುಖಾಂತ್ಯ ಸಿಗಲಿದೆ ಎಂದು ಭರವಸೆ ನೀಡಿದರು.

ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಅಬ್ದುಲ್ ಮೆಣಸಿನಕಾನ, ಉಪಾಧ್ಯಕ್ಷೆ  ಮನೋರಮ, ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪೌಜಿಯ,ಉಪಾಧ್ಯಕ್ಷ ರಾಮ ಮೇನಾಲ, ಸದಸ್ಯ ರಾದ ಇಬ್ರಾಹಿಂ ,ರಮೇಶ್ ರೈ, ವೆಂಕಪ್ಪ ,ಶಶಿಕಲಾ ಮುಖ್ಯ ಶಿಕ್ಷಕಿ ಜಲಜ ಶಿಕ್ಷಕಿಯರಾದ ವಾಣಿಶ್ರೀ. ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.