Server ಸಾಮರ್ಥ್ಯ ಹೆಚ್ಚಿಸಲು ಅಸಾಧ್ಯ: ಸಚಿವ ಮುನಿಯಪ್ಪ
Team Udayavani, Dec 11, 2023, 11:13 PM IST
ಬೆಳಗಾವಿ: ಬಿಪಿಎಲ್ ಪಡಿತರ ಚೀಟಿ ತಿದ್ದುಪಡಿಗಾಗಿ ಹಾಲಿ ಸರ್ವರ್ನ ಸಾಮರ್ಥ್ಯ ಹೆಚ್ಚಿಸಲು ಸಾಧ್ಯವಿಲ್ಲ. ಎನ್ಐಸಿಯಿಂದ ಕೆಎಸ್ಐಡಿಸಿಗೆ ಆಹಾರ ತಂತ್ರಾಂಶ ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರದಲ್ಲೇ ಸರ್ವರ್ ಸಮಸ್ಯೆಗೆ ಪರಿಹಾರ ಸಿಗಲಿದೆ. ಜತೆಗೆ ಸಾಧ್ಯವಾದಷ್ಟು ಕುಚಲಕ್ಕಿ ನೀಡಲು ಪ್ರಯತ್ನಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಗಮನ ಸೆಳೆಯುವ ಸೂಚನೆ ವೇಳೆ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್ನ ಅಶೋಕ ಕುಮಾರ್ ರೈ, ಬಿಪಿಎಲ್ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ಸಾಧ್ಯವಾಗದೆ ಇರುವುದರಿಂದ ಸರಕಾರದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ತೊಂದರೆಯಾಗುತ್ತಿದೆ ಎಂದು ಹೇಳಿದರು.
ಅನ್ನಭಾಗ್ಯದಡಿ ಕುಚಲಕ್ಕಿಗೆ ಬೇಡಿಕೆ
ಈಗಾಗಲೇ 10 ಕೆ.ಜಿ. ಅಕ್ಕಿಯ ಪೈಕಿ 5 ಕೆ.ಜಿ. ಅಕ್ಕಿಯನ್ನು ನೀಡುತ್ತಿದ್ದು, ಉಳಿದ 5 ಕೆ.ಜಿ. ಅಕ್ಕಿಯ ಬದಲು ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಭವಿಷ್ಯದಲ್ಲಿ ನಗದು ಬದಲು ಅಕ್ಕಿ ಕೊಡುವುದಾದರೆ ಕುಚಲಕ್ಕಿ ಕೊಡಿ ಎಂದು ಅಶೋಕ ಕುಮಾರ್ ರೈ ಆಗ್ರಹಿಸಿದರು.ಇದಕ್ಕೆ ಉತ್ತರಿಸಿದ ಆಹಾರ ಸಚಿವರು, ಸಾಧ್ಯವಾದಷ್ಟು ಕುಚಲಕ್ಕಿ ಕೊಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.