Vijay Hazare ಕೂಟದಲ್ಲಿ ಮಿಂಚಿದ ಆರ್ ಸಿಬಿಯಿಂದ ಹೊರಹೋದ ಆಟಗಾರ
Team Udayavani, Dec 12, 2023, 10:11 AM IST
ರಾಜಕೋಟ್: ವಿಜಯ್ ಹಜಾರೆ ಟ್ರೋಫಿ ಕೂಟದ ನಾಕೌಟ್ ಹಂತದ ಪಂದ್ಯಗಳು ನಡೆಯುತ್ತಿದೆ. ಸೋಮವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಕರ್ನಾಟಕ, ತಮಿಳುನಾಡು, ಹರ್ಯಾಣ ಮತ್ತು ರಾಜಸ್ಥಾನ ತಂಡಗಳು ಗೆದ್ದು ಸೆಮಿ ಫೈನಲ್ ಪ್ರವೇಶಿಸಿದೆ.
ಬಂಗಾಳದ ಆಲ್ ರೌಂಡರ್ ಶಹಬಾಜ್ ಅಹಮದ್ ಅವರು ಹರ್ಯಾಣ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ನಿಂದ ಮಿಂಚಿದರು. ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ಆಟಗಾರನಾಗಿದ್ದ ಶಹಬಾಜ್ ಅಹಮದ್ ಅವರನ್ನು ಇತ್ತೀಚೆಗೆ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಟ್ರೇಡ್ ಮಾಡಲಾಗಿತ್ತು.
ಹರ್ಯಾಣ ವಿರುದ್ಧದ ಪಂದ್ಯದಲ್ಲಿ ಸಂಕಷ್ಟದ ಸ್ಥಿತಿಯಲ್ಲಿದ್ದ ಬಂಗಾಲ ತಂಡವನ್ನು ಶಹಬಾಜ್ ಆಧರಿಸಿದರು. 118 ಎಸೆತ ಎದುರಿಸಿದ ಶಹಬಾಜ್ ಭರ್ತಿ ನೂರು ರನ್ ಬಾರಿಸಿದರು. ಈ ಇನ್ನಿಂಗ್ಸ್ ನಲ್ಲಿ ಅವರು ನಾಲ್ಕು ಸಿಕ್ಸರ್ ಮತ್ತು ನಾಲ್ಕು ಬೌಂಡರಿ ಬಾರಿಸಿದರು.
ಇದನ್ನೂ ಓದಿ:IPL 2024 Auction: ಇಲ್ಲಿದೆ ಆಟಗಾರರ ಸಂಪೂರ್ಣ ಪಟ್ಟಿ; 2 ಕೋಟಿ ಮೂಲಬೆಲೆಯಲ್ಲಿ 3 ಭಾರತೀಯರು
ಶಹಬಾಜ್ ಪ್ರಯತ್ನದ ಹೊರತಾಗಿಯೂ ಬಂಗಾಲ ತಂಡವು ಪಂದ್ಯದಲ್ಲಿ ಸೋಲನುಭವಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಬಂಗಾಲ 225 ರನ್ ಗಳಿಸಿದರೆ, ಹರ್ಯಾಣ ತಂಡವು 45 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಶಹಬಾಜ್ ನಾಲ್ಕು ಸೀಸನ್ ಗಳಲ್ಲಿ ಆರ್ ಸಿಬಿ ತಂಡದ ಪರವಾಗಿ ಆಡಿದ್ದರು, ಆದರೆ ಕೆಲ ದಿನಗಳ ಹಿಂದೆ ಅವರನ್ನು ಹೈದರಾಬಾದ್ ತಂಡಕ್ಕೆ ಟ್ರೇಡ್ ಮಾಡಲಾಗಿದೆ. ಶಹಬಾಜ್ ಬದಲಿಗೆ ಹೈದರಾಬಾದ್ ತಂಡದ ಮಯಾಂಕ್ ದಾಗರ್ ಆರ್ ಸಿಬಿಗೆ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.