Dec.18: ಸೂಡ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ


Team Udayavani, Dec 12, 2023, 9:46 AM IST

2-sooda

ಶಿರ್ವ: ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಸೂಡ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಡಿ. 12 ರಿಂದ 23ರವರೆಗೆ ವಾರ್ಷಿಕ ಮಹೋತ್ಸವವು ಉಡುಪಿ ಪುತ್ತೂರು ವೇ|ಮೂ|ಹಯವದನ ತಂತ್ರಿಯವರ ನೇತೃತ್ವದಲ್ಲಿ ಅರ್ಚಕ ವೇ|ಮೂ| ವಿಷ್ಣುಮೂರ್ತಿಭಟ್‌ ಅವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಡಿ.18 ರಂದು ಷಷ್ಠಿ ಮಹೋತ್ಸವ ಹಾಗೂ ಡಿ. 21 ರಂದು ಶ್ರೀಸುಬ್ರಹ್ಮಣ್ಯ ದೇವರ ಮಹಾ ರಥೋತ್ಸವ ಜರಗಲಿದೆ.

ಧಾರ್ಮಿಕ ಕಾರ್ಯಕ್ರಮಗಳು

ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಡಿ. 12 ರಂದು ಆರಂಭಗೊಳ್ಳಲಿದ್ದು, ಬೆಳಗ್ಗೆ ಪುಣ್ಯಾಹ, ಪಂಚವಿಂಶತಿ ಕಳಶ, ಕಲಶಾಭಿಷೇಕ, ಶ್ರೀ ದೇವರ ಗರ್ಭಗುಡಿಯ ಸುತ್ತುಪೌಳಿಯ ನೂತನ ಕಾಷ್ಠಾವೃತ(ದಳಿ) ಸಮರ್ಪಣೆ ನಡೆಯಲಿದೆ. ಡಿ.17ರಂದು ಧ್ವಜಾರೋಹಣ, ಬಲಿ, ಮಹಾಪೂಜೆ, ಸಂತರ್ಪಣೆ, ಡಿ 18ರಂದು ಪಂಚಾಮೃತಾಭಿಷೇಕ, ಕಲಶಾಭಿಷೇಕ, ಬಲಿ, ಮಹಾಪೂಜೆ, ಷಷ್ಠಿ ಮಹೋತ್ಸವ, ರಥೋತ್ಸವ, ಮಹಾ ಅನ್ನಸಂತರ್ಪಣೆ, ರಾತ್ರಿ ರಥೋತ್ಸವ, ಭೂತ ಬಲಿ, ಡಿ.20 ರಂದು ಆಶ್ಲೇಷಾ ಬಲಿ, ಕಟ್ಟೆಪೂಜೆ, ಭೂತಬಲಿ, ಡಿ. 21 ರಂದು ಮಹಾಪೂಜೆ, ರಥಾರೋಹಣ, ಸಂತರ್ಪಣೆ, ರಾತ್ರಿ ಮಹಾರಥೋತ್ಸವ, ಡಿ. 22 ರಂದು ತುಲಾಭಾರ, ನಾಗದರ್ಶನ, ರಾತ್ರಿ ಜುಮಾದಿ ದೈವದ ನೇಮ ಮತ್ತು ಜ.16 ರಂದು ಕಿರುಷಷ್ಠಿ ಉತ್ಸವ ಜರಗಲಿದೆ.

ಡಿ.12 ರಿಂದ 22ರವರೆಗೆ ವಿವಿಧ ತಂಡಗಳಿಂದ ಭಜನೆ, ತಾಳಮದ್ದಳೆ, ಯಕ್ಷಗಾನ, ನಾಟಕ ಮತ್ತಿತರ ಸಾಂಸðತಿಕ ಕಾರ್ಯಕ್ರಮಗಳು ಜರಗಲಿವೆ ಎಂದು ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶಿರ್ವ ಕೋಡು ಜಯಶೀಲ ಹೆಗ್ಡೆ ಅವರ ಪ್ರಕಟನೆ ತಿಳಿಸಿದೆ.

ಧಾರ್ಮಿಕ ಹಿನ್ನೆಲೆ

ಮುನಿವರೇಣ್ಯ ಭಾರ್ಗವ ಮಹರ್ಷಿಗಳು ಪ್ರತಿಷ್ಠಾಪಿಸಿದ ಶ್ರೀ ವಾಸುಕೀ ಸುಬ್ರಹ್ಮಣ್ಯನ ಸೂಡ ಕ್ಷೇತ್ರವು ತುಳುನಾಡಿನಲ್ಲಿ ಷಷ್ಠಿ ಉತ್ಸವಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ.

ಶ್ರೀ ವಾಸುಕೀ ಸುಬ್ರಹ್ಮಣ್ಯನೊಂದಿಗೆ ಕ್ಷೇತ್ರ ರಕ್ಷಕರಾಗಿ ಪರಿವಾರ ನಾಗ ಮತ್ತು ಪಂಚದೈವ ಶಕ್ತಿಗಳು ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸುವ ದಿವ್ಯ ಸಾನಿಧ್ಯವಾಗಿದೆ.

ತುಳುನಾಡಿನಲ್ಲಿ ಪ್ರತೀ ಕುಟುಂಬಕ್ಕೊಂದು ನಾಗ ಬನವಿದೆ. ಅಗೋಚರ ಸ್ಥಿತಿಯಲ್ಲಿರುವವರು ಸೂಡ ಕ್ಷೇತ್ರಕ್ಕೆ ಬಂದು ದೇವಾಲಯದಲ್ಲಿ ಕಲ್ಲು, ಹಾಲಿಟ್ಟು ತಮ್ಮ ಮೂಲ ನಾಗಬನವೆಂದು ಆರಾಧಿಸುತ್ತಿದ್ದಾರೆ. ಇಲ್ಲಿ ವಾಸುಕೀ ಸುಬ್ರಹ್ಮಣ್ಯನಿಗೆ ತುಲಾಭಾರ, ರಂಗಪೂಜೆ, ನಾಗಸಮಾರಾಧನೆ, ಮುಂತಾದ ಹರಕೆಗಳನ್ನು ತೀರಿಸಲಾಗುತ್ತಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.