Crime: ನಿರ್ಲಕ್ಷ್ಯ ತೋರಿದ ವಿವಾಹಿತ ಮಹಿಳೆಗೆ ಚಾಕು ಇರಿದು ಹತ್ಯೆ
Team Udayavani, Dec 12, 2023, 12:57 PM IST
ಬೆಂಗಳೂರು: ನಿರ್ಲಕ್ಷಿಸಿದ್ದ ವಿವಾಹಿತ ಮಹಿಳೆಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣ ಜಗಜೀವನ್ರಾಮ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೆಜೆ ನಗರದ ಫರ್ವೀನ್ ತಾಜ್ (33) ಕೊಲೆಯಾದ ಮಹಿಳೆ. ಕಸ್ತೂರ್ ಬಾ ನಗರದ ಮೊಹಮ್ಮದ್ ಜುನೈದ್ ಪರಾರಿಯಾಗಿರುವ ಆರೋಪಿ.
ಆರೋಪಿ ಮೊಹಮ್ಮದ್ ಜುನೈದ್ ತನ್ನ ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆ ಹೊಂದಿದ್ದ. ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು. ಪ್ರಕರಣ ಪೊಲೀಸ್ ಠಾಣೆವರೆಗೂ ಹೋಗಿತ್ತು. ಇಬ್ಬರಿಗೂ ಪೊಲೀಸರು ಬುದ್ಧವಾದ ಹೇಳಿ ಕಳುಹಿಸಿದ್ದರು. ಇದಾದ ಬಳಿಕ ಪತ್ನಿ ಯಿಂದ ಜುನೈದ್ ಅಂತರ ಕಾಯ್ದುಕೊಂಡಿದ್ದ. ಆತನ ಪತ್ನಿ ತವರು ಮನೆ ಸೇರಿದ್ದಳು. ಈ ನಡುವೆ ಪತ್ನಿಯ ಸಂಬಂಧಿ ವಿವಾಹಿತ ಮಹಿಳೆ ಫರ್ವೀನ್ ತಾಜ್ ಆರೋಪಿಯೊಂದಿಗೆ ಆತ್ಮೀಯ ವಾಗಿದ್ದಳು. ಇತ್ತೀಚೆಗೆ ಜುನೈದ್ನನ್ನು ಫರ್ವಿನ್ ನಿರ್ಲಕ್ಷಿಸಿದ್ದಳು. ಇದರಿಂದ ಆಕ್ರೋಶಗೊಂಡ ಆರೋಪಿ ಜುನೈದ್ ಭಾನುವಾರ ರಾತ್ರಿ ಫರ್ವಿನ್ ಮನೆಗೆ ಹೋಗಿ ಜಗಳ ಮಾಡಿದ್ದಾನೆ.
ಇಬ್ಬರ ನಡುವಿನ ಜಗಳ ತಾರಕಕ್ಕೇರಿದಾಗ ಚೂರಿಯಿಂದ ಆಕೆಯ ದೇಹದ ಹಲವು ಭಾಗಗಳಿಗೆ ಇರಿದು ಪರಾರಿ ಯಾಗಿದ್ದ. ಇತ್ತ ಗಂಭೀರವಾಗಿ ಗಾಯಗೊಂಡ ಫರ್ವಿನ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖ ಲಿಸಲು ಮುಂದಾದಾಗ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದಾಳೆ. ಪ್ರಕರಣ ದಾಖಲಿಸಿ ಕೊಂಡಿ ರುವ ಜೆ.ಜೆ.ನಗರ ಠಾಣೆ ಪೊಲೀಸರು ಅರೋಪಿ ಜುನೈದ್ಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.