![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 12, 2023, 11:15 PM IST
ಬೆಳಗಾವಿ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಮ್ಯಾಂಗನೀಸ್ ಮಾಫ್ìನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಸಾಕಷ್ಟು ಮೀನುಗಾರರಿಗೆ ನಷ್ಟ ಉಂಟಾಗಿದ್ದು, ಅದಕ್ಕೆ ಪರಿಹಾರ ಕೊಡಬೇಕು ಹಾಗೂ ಗಂಗೊಳ್ಳಿ ಜಟ್ಟಿಯಲ್ಲಿ ಸಂಭವಿಸಬಹುದಾದ ದುರಂತದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಬೈಂದೂರಿನ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಅವರು ಒತ್ತಾಯಿಸಿದರು.
ಮಂಗಳವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಅವರು, ನ. 13ರಂದು ಗಂಗೊಳ್ಳಿಯಲ್ಲಿ ದೋಣಿಗಳಿಗೆ ಬೆಂಕಿ ಬಿದ್ದು, ಮೀನುಗಾರಿಕೆಗೆ ಸಂಬಂಧಿಸಿದ ಬಲೆ ಇತ್ಯಾದಿ ಪರಿಕರಗಳು, ದೋಣಿ ಎಲ್ಲವೂ ನಾಶವಾಗಿತ್ತು. ಈ ಬಗ್ಗೆ ಎಚ್ಚರಿಸಿದ್ದರೂ ಸರಕಾರ ಎಚ್ಚೆತ್ತುಕೊಳ್ಳದೆ ಅನಾಹುತ ಸಂಭವಿಸಿದೆ. ಪರಿಹಾರವನ್ನೇ ಕೊಟ್ಟಿಲ್ಲ. ತತ್ಕ್ಷಣ ಕೊಡಬೇಕು ಎಂದು ಆಗ್ರಹಿಸಿದರು. ಅಷ್ಟೇ ಅಲ್ಲದೆ, ಗಂಗೊಳ್ಳಿ ಜಟ್ಟಿಯಲ್ಲಿ ಮತ್ತೂಂದು ದುರಂತ ಸಂಭವಿಸುವ ಅಪಾಯ ಇದ್ದು, ಈಗಲೇ ಮುನ್ನೆಚ್ಚರಿಕೆ ವಹಿಸಬೇಕು. ನಮ್ಮದು ಅರಣ್ಯ ರೋದನ ಆಗಿದೆ. ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಗಮನ ಸೆಳೆದರು.
ಇದಕ್ಕೆ ಮೀನುಗಾರಿಕ ಸಚಿವ ಮಂಕಾಳ ವೈದ್ಯ ಪರವಾಗಿ ಉತ್ತರಿಸಿದ ಕಾನೂನು ಸಚಿವ ಎಚ್.ಕೆ. ಪಾಟೀಲ್, ದೋಣಿ ದುರಂತದಿಂದ ಸುಮಾರು 7 ಕೋಟಿ ರೂ. ನಷ್ಟವಾಗಿರುವ ಅಂದಾಜಿದೆ. ಸಚಿವರು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಪರಿಹಾರ ಕೊಡುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.