Kundapura ಅರುಣ್ ಕುಮಾರ್ ಶೆಟ್ಟಿ ಗುಡ್ಡಮ್ಮಾಡಿ ದೇಗುಲದ ಆನುವಂಶಿಕ ಮೊಕ್ತೇಸರ
10 ವರ್ಷಗಳ ಬಳಿಕ ಮನವಿಗೆ ಪುರಸ್ಕಾರ
Team Udayavani, Dec 12, 2023, 11:28 PM IST
ಕುಂದಾಪುರ: ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆನುವಂಶಿಕ ಮೊಕ್ತೇಸರರನ್ನಾಗಿ ಉದ್ಯಮಿ ಅರುಣ್ ಕುಮಾರ್ ಶೆಟ್ಟಿ ಅವರನ್ನು ನೇಮಿಸಿ ರಾಜ್ಯ ಧಾರ್ಮಿಕ ಪರಿಷತ್ತು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆದೇಶ ಹೊರಡಿಸಿದೆ.
52 ವರ್ಷಗಳಿಗಿಂತಲೂ ಅಧಿಕ ಕಾಲ ಅರುಣ್ ಅವರೇ ಈ ದೇವಸ್ಥಾನದ ಆಡಳಿತ ನಡೆಸುತ್ತಿದ್ದರು. ಖಾಸಗಿ ಆಡಳಿತದಲ್ಲಿದ್ದ ದೇವಸ್ಥಾನ ದತ್ತಿ ಇಲಾಖೆಯ ಅಧೀನಕ್ಕೆ ಒಳಪಟ್ಟು, ಬಳಿಕ ಆದಾಯದಲ್ಲಿ “ಎ’ ಶ್ರೇಣಿಯಲ್ಲಿ ಗುರುತಿಸಲ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆನುವಂಶಿಕ ಮೊಕ್ತೇಸರರು ಎಂದು ತಮ್ಮ ಮನೆತನವನ್ನು ಘೋಷಿಸಬೇಕೆಂದು ಅವರು ಇಲಾಖೆಗೆ ಮನವಿ ಮಾಡಿದ್ದರು.
10 ವರ್ಷಗಳ ಬಳಿಕ ಈ ಬಗ್ಗೆ ಆದೇಶ ಹೊರಬಿದ್ದಿದ್ದು ಈ ದೇವಾಲಯಕ್ಕೆ ಆನುವಂಶಿಕ ಮೊಕ್ತೇಸರರನ್ನು ನೇಮಕ ಮಾಡುವ ವಿಚಾರದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲೆಂದೇ ಅ. 13ರಂದು 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ ಮೊದಲ ಸಭೆ ಸೇರಿತ್ತು. ಅದರಲ್ಲಿ ವಿಸ್ತೃತ ಚರ್ಚೆ ನಡೆದು, ಅಭಿಪ್ರಾಯಗಳ ಮಂಡನೆಯಾಗಿ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಕಾಯ್ದೆ 2011 ಅನ್ವಯ ಆನುವಂಶಿಕ ಮೊಕ್ತೇಸರರನ್ನಾಗಿ ಮಾಡಿ ತೀರ್ಮಾನಿಸಲಾಗಿದೆ. ಅರುಣ್ ಅವರು ಕುಂದಾಪುರದಲ್ಲಿ ಹೊಟೇಲ್ ಉದ್ಯಮಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ವಂಡರ್ಲಾದಲ್ಲಿ 2 ಟಿಕೆಟ್ ಖರೀದಿಸಿದರೆ 1 ಟಿಕೆಟ್ ಫ್ರೀ
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.