Bantwal ಕೆಲಸದಾತನಿಂದ ಕಳವು: ಸೆರೆ
Team Udayavani, Dec 13, 2023, 1:01 AM IST
ಬಂಟ್ವಾಳ: ಫರಂಗಿಪೇಟೆಯ ಕೋಡಿಮಜಲು ನಿವಾಸಿ ಬಿಲ್ಡರ್ವೊಬ್ಬರ ಮನೆಯಿಂದ ಅ. 18 -23ರ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೆಲಸದಾತನೇ ತನ್ನಲ್ಲಿದ್ದ ಕೀಲಿಕೈಯನ್ನು ಬಳಸಿ ನಗ-ನಗದು ಸೇರಿದಂತೆ ಸುಮಾರು 32.46 ಲಕ್ಷ ರೂ. ಮೌಲ್ಯದ ಸೊತ್ತುಗಳು ಕಳವಿನ ಪ್ರಕರಣಕ್ಕೆ ಬಂಟ್ವಾಳ ಪೊಲೀಸರು ಡಿ. 11ರಂದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಕೆಲಸದಾತ ಮಂಜೇಶ್ವರ ಮೂಲದ ಅಶ್ರಫ್ ಆಲಿ ಹಾಗೂ ಬೆಂಗ್ರೆಯ ಕಬೀರ್ ಬಂಧಿತರು. ಪ್ರಸ್ತುತ ಪೊಲೀಸರು ಅವರಿಂದ ಸುಮಾರು 4.50 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ 4 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಕೋಡಿಮಜಲು ನಿವಾಸಿ ಬಿಲ್ಡರ್ ಮಾಲಕ ಮೊಹಮ್ಮದ್ ಜಫಾರುಲ್ಲಾ ಅವರ ಮನೆಯಿಂದ ಕಳವಾಗಿದ್ದು, ಒಟ್ಟು 27.50 ಲಕ್ಷ ರೂ. ನಗದು ಹಾಗೂ 4.96 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಕುರಿತು ದೂರು ನೀಡಿದ್ದರು. ಹೀಗಾಗಿ ಕಳವಾಗಿರುವ ಉಳಿದ ಚಿನ್ನ ಹಾಗೂ ನಗದಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಅಶ್ರಫ್ ಆಲಿಯು ಜಫಾರುಲ್ಲಾ ಜತೆ ಸುಮಾರು 8 ತಿಂಗಳಿನಿಂದ ಕೆಲಸಕ್ಕಿದ್ದು, ಮಾಲಕನ ಜತೆ ಅವರ ಮನೆಮಂದಿಯ ವಿಶ್ವಾಸವನ್ನೂ ಗಳಿಸಿಕೊಂಡಿದ್ದನು. ಅ.18ರಂದು ಝಫಾರುಲ್ಲಾ ಅವರ ಮನೆಯವರು ಮನೆಗೆ ಬೀಗ ಹಾಕಿ ಮಂಗಳೂರಿನ ಜಪ್ಪುನಲ್ಲಿರುವ ತಮ್ಮನ ಮನೆಗೆ ತೆರಳಿದ್ದರು. ಹೋಗುವ ಸಂದರ್ಭ ಮನೆಗೆ ಬೀಗ ಹಾಕಿ ಕೀಲಿಕೈಯನ್ನು ಕೆಲಸದಾಳು ಆಲಿಯ ಕೈಯಲ್ಲಿ ನೀಡಿದ್ದರು.
ಆದರೆ ಅ. 19ರಿಂದ ಕೆಲಸದಾಳುವಿಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್x ಆಫ್ ಆಗಿತ್ತು. ಜಫಾರುಲ್ಲಾ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದು, ಅಲ್ಲಿಂದ ಕರೆ ಮಾಡಿದಾಗಲೂ ಮೊಬೈಲ್ ಸ್ವಿಚ್x ಆಫ್ ಇತ್ತು. ಬೆಂಗಳೂರಿನ ಕೆಲಸ ಮುಗಿಸಿ ಅ.23ರ ರಾತ್ರಿ 8ರ ಸುಮಾರಿಗೆ ಮನೆಗೆ ಬಂದು ನೋಡಿದಾಗ ಮನೆಗೆ ಬೀಗ ಹಾಕಿದ್ದು, ಕೀಲಿಗೈಗಾಗಿ ಆಲಿಗೆ ಕರೆ ಮಾಡಿದರೆ ಆಗಲೂ ಮೊಬೈಲ್ ಸ್ವಿಚ್ ಆಫ್ ಇತ್ತು. ಸಂಶಯಗೊಂಡು ಮನೆಯ ಹಿಂಬದಿಯ ಕಿಟಕಿಯಲ್ಲಿ ನೋಡಿದಾಗ ಕೋಣೆಯ ಬಾಗಿಲು ತೆರೆಗಿದ್ದು, ಕಪಾಟಿನ ಲಾಕರ್ ಮುರಿದು ಅದರಲ್ಲಿದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದವು. ಒಳಗೆ ಹೋಗಿ ನೋಡಿದಾಗ ಕಳವಿನ ಪ್ರಕರಣ ಬೆಳಕಿಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.