ʼKantara Chapter 1ʼನಲ್ಲಿ ನನ್ನನ್ನು ಸೇರಿಸಿಕೊಳ್ಳಿ..ರಿಷಬ್‌ ಶೆಟ್ಟಿಗೆ ಖ್ಯಾತ ನಟಿಯ ಮನವಿ


Team Udayavani, Dec 13, 2023, 11:35 AM IST

tdy-1

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್‌ʼ ಇತ್ತೀಚೆಗೆ ಫಸ್ಟ್‌ ಲುಕ್‌ ರಿಲೀಸ್‌ ಮಾಡಿ ಸುದ್ದಿಯಲ್ಲಿದೆ. ಸದ್ಯ ಸಿನಿಮಾಕ್ಕಾಗಿ ಅಡಿಷನ್‌ ನಡೆಯಲಿದ್ದು, ಕಲಾವಿದರ ಆಯ್ಕೆಗಾಗಿ ಚಿತ್ರತಂಡ ಎದುರು ನೋಡುತ್ತಿದೆ.

ʼಕಾಂತಾರʼ ಚಿತ್ರದಲ್ಲಿ ನಟಿಸಲು ಕಲಾವಿದರು ಬೇಕಾಗಿದ್ದಾರೆ ಎಂದು ಚಿತ್ರತಂಡ ಪ್ರಕಟಣೆಯಲ್ಲಿ ಹೇಳಿದೆ. ಸಿನಿಮಾದಲ್ಲಿ ನಟಿಸಲು 30 ರಿಂದ 60 ರ ವಯಸ್ಸಿನ ಪುರುಷರು ಬೇಕಾಗಿದ್ದಾರೆ. ಇನ್ನು 18 ರಿಂದ 60ರ ವಯಸ್ಸಿನ ಮಹಿಳೆಯರು ಬೇಕಾಗಿದ್ದಾರೆ ಎಂದು ರಿಷಬ್‌ ಶೆಟ್ಟಿ ಪೋಸ್ಟ್‌ ನಲ್ಲಿ ಹೇಳಿದ್ದಾರೆ. ನೋಂದಣಿಗಾಗಿ Kantara.film ಲಿಂಕ್‌ ಒತ್ತಿ ತಮ್ಮ ಪ್ರತಿಭೆಯನ್ನು ತೋರಿಸಬಹುದು. ರೀಲ್ಸ್‌ ಮತ್ತು ಅವುಗಳನ್ನೇ ಹೋಲುವ ಇತರೆ ವಿಷಯಗಳನ್ನು  ಸ್ವೀಕರಿಸುವುದಿಲ್ಲ ಎಂದು ಚಿತ್ರತಂಡ ಹೇಳಿದೆ. ಡಿ.14 ರವರೆಗೆ ಲಿಂಕ್ ಚಾಲ್ತಿಯಲ್ಲಿರುತ್ತದೆ ಎಂದು ಚಿತ್ರತಂಡ ಹೇಳಿದೆ.

ಸದ್ಯ ಪೋಸ್ಟ್‌ ನೋಡಿ ಖ್ಯಾತ ಟಾಲಿವುಡ್ ನಟಿಯೊಬ್ಬರು ರಿಷಬ್‌ ಶೆಟ್ಟಿ ಬಳಿ ತಮ್ಮನ್ನು ʼಕಾಂತಾರʼ ಸಿನಿಮಾದಲ್ಲಿ ಸೇರಿಸಿಕೊಳ್ಳಿ ಎಂದು ಮನವಿಯನ್ನು ಮಾಡಿದ್ದಾರೆ.

ʼಆರ್‌ ಎಕ್ಸ್‌ 100ʼ ಮೂಲಕ ಗಮನ ಸೆಳೆದ  ನಟಿ ಪಾಯಲ್ ರಜಪೂತ್ ಇತ್ತೀಚೆಗೆ ತೆರೆಕಂಡ ‘ಮಂಗಳವಾರಂ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಮೆಚ್ಚುಗೆ ಗಳಿಸಿದ್ದಾರೆ. ಇದರಿಂದ ಕೆಲ ಅಭಿಮಾನಿಗಳು ʼಕಾಂತಾರ -1ʼ ಸಿನಿಮಾದ ಅಡಿಷನ್‌ ವಿಚಾರ ತಿಳಿಸಿ ಪಾಯಲ್‌ ಅವರ ಹೆಸರನ್ನು ಸೋಶಿಯಲ್‌ ಮೀಡಿಯಾದಲ್ಲಿ ಮೆನ್ಷನ್‌ ಮಾಡಿದ್ದಾರೆ.

ನಟಿ ಪಾಯಲ್‌ ರಜಪೂತ್‌ ಈ ಬಗ್ಗೆ ಟ್ವೀಟ್‌ ಮಾಡಿದ್ದು, ʼಕಾಂತಾರ-1ʼ ನ ಭಾಗವಾಗಲು ತಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ.

“ರಿಷಬ್‌ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ʼಕಾಂತಾರ ಅಧ್ಯಾಯ -1ʼರ ಅಡಿಷನ್‌ ಇರುವುದು ನನಗೆ ಗೊತ್ತಾಗಿದೆ. ಈ ಅದ್ಭುತ ಸಿನಿಮಾದ ಭಾಗವಾಗಲು ನಾನು ಆಸಕ್ತಿ ಹೊಂದಿದ್ದೇನೆ. ಈ ಸಿನಿಮಾಕ್ಕೆ ಕೊಡುಗೆ ನೀಡಲು ಉತ್ಸುಕಳಾಗಿದ್ದೇನೆ. ಇತ್ತೀಚೆಗೆ ಬಂದ ನನ್ನ ʼ’ಮಂಗಳವಾರಂ’ʼ ಸಿನಿಮಾ ಮೆಚ್ಚುಗೆ ಪಡೆದುಕೊಂಡಿದೆ. ನೀವು ಸಾಧ್ಯವಾದರೆ ನಿಮ್ಮ ಸಮಯವನ್ನು ಮೀಸಲಿಟ್ಟು ಸಿನಿಮಾವನ್ನು ನೋಡಿ. ಈ ಪ್ರಾಜೆಕ್ಟ್ ಆಡಿಷನ್ ಪ್ರಕ್ರಿಯೆಯ ಕುರಿತು ದಯವಿಟ್ಟು ಸಲಹೆ ನೀಡಿ. ನನ್ನ ಹೆಸರನ್ನು ಮೆನ್ಷನ್‌ ಮಾಡಿದ್ದಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದ” ಎಂದು ಪಾಯಲ್‌ ಟ್ವೀಟ್‌ ಮಾಡಿದ್ದಾರೆ.

ಸದ್ಯ ಈ ಟ್ವೀಟ್‌ ಗೆ ರಿಷಬ್‌ ಶೆಟ್ಟಿಯಿಂದ ಯಾವ ಪ್ರತಿಕ್ರಿಯೆ ಬರುತ್ತದೆನ್ನುವುದು ಕಾದುನೋಡಬೇಕಿದೆ.

ಅಂದಹಾಗೆ ʼಕಾಂತಾರʼ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲಿ ಶುರುವಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.