Drugs: ನ್ಯೂ ಇಯರ್‌ ಪಾರ್ಟಿಗಳಿಗೆ ತಂದಿದ್ದ ಡ್ರಗ್ಸ್‌ ವಶ


Team Udayavani, Dec 13, 2023, 3:48 PM IST

Drugs: ನ್ಯೂ ಇಯರ್‌ ಪಾರ್ಟಿಗಳಿಗೆ ತಂದಿದ್ದ ಡ್ರಗ್ಸ್‌ ವಶ

ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಪಾರ್ಟಿಗಳಿಗೆ ಪೂರೈಸಲು ಬೆಡ್‌ಶೀಟ್‌ ಕವರ್‌, ಸೋಪ್‌ ಬಾಕ್ಸ್‌, ಚಾಕಲೇಟ್‌ ಬಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ತರಿಸಿ ಸಂಗ್ರಹಿಸಿಟ್ಟಿದ್ದ ನೈಜೀರಿಯಾ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಆತನಿಂದ ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಪಾರ್ಟಿ ಡ್ರಗ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನೈಜೇರಿಯಾ ಮೂಲದ ಲಿಯೋ ನಾರ್ಡ್‌ ಒಕ್ವುಡಿಲಿ (43) ಬಂಧಿತ. ಈತನಿಂದ 16 ಕೋಟಿ ರೂ. ಮೌಲ್ಯದ ಎಂಡಿ ಎಂಎ ಕ್ರಿಸ್ಟಲ್‌ ಹಾಗೂ 5 ಕೋಟಿ ರೂ. ಮೌಲ್ಯದ ಕೋಕೇನ್‌, ಒಂದು ಮೊಬೈಲ್‌, 3 ಎಲೆಕ್ಟ್ರಾನಿಕ್‌ ತೂಕದ ಯಂತ್ರಗಳು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಈತನ ವಿರುದ್ಧ ರಾಮ ಮೂರ್ತಿನಗರ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸೋಪ್‌, ಚಾಕಲೇಟ್‌ ಬಾಕ್ಸ್‌ಗಳಲ್ಲಿ ಡ್ರಗ್ಸ್‌: ನೈಜೇರಿಯಾ ಪ್ರಜೆಯಾಗಿರುವ ಆರೋಪಿ, ಒಂದು ವರ್ಷದ ಹಿಂದೆ ವ್ಯವಹಾರಿಕ ವೀಸಾ ಪಡೆದು ಬೆಂಗ ಳೂರಿಗೆ ಬಂದಿದ್ದು, ರಾಮಮೂರ್ತಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ತನ್ನ ದೇಶದ ಇತರೆ ಸ್ನೇಹಿತರ ಜತೆ ಸಣ್ಣ-ಪುಟ್ಟ ವ್ಯವಹಾರ ಮಾಡಿಕೊಂಡಿದ್ದ. ಈ ಮಧ್ಯೆ ಮುಂಬೈ, ದೆಹಲಿ, ಗೋವಾ ಹಾಗೂ ಇತರೆ ರಾಜ್ಯಗಳಲ್ಲಿರುವ ನೈಜೀರಿಯಾ ಪ್ರಜೆಗಳ ಸಂಪರ್ಕದಿಂದ ನಗರಕ್ಕೆ ಮಾದಕ ವಸ್ತುಗಳನ್ನು ತರಿಸುತ್ತಿದ್ದ. ಇತ್ತೀಚೆಗೆ ಪೊಲೀಸರು ಮಾದಕ ವಸ್ತುಗಳ ಮಾರಾಟಗಾರರ ವಿರುದ್ಧ ವಿಶೇಷ ಕಾರ್ಯಾ ಚರಣೆ ಆರಂಭಿಸಿದ್ದರಿಂದ ಪೊಲೀಸರ ದಿಕ್ಕು ತಪ್ಪಿಸಲು ಚೂಡಿದಾರ್‌, ಬೆಡ್‌ಶೀಟ್‌ ಕವರ್‌ ಗಳು, ಸೋಪ್‌ ಬಾಕ್ಸ್‌ ಮತ್ತು ಚಾಕಲೇಟ್‌ ಬಾಕ್ಸ್‌ ಗಳಲ್ಲಿ ಎಂಡಿಎಂಎ ಕ್ರಿಸ್ಟಲ್‌ ಮತ್ತು ಕೊಕೇನ್‌ ಅನ್ನು ಕೊರಿಯರ್‌ ಹಾಗೂ ದೈಹಿಕವಾಗಿ ಕೆಲ ವ್ಯಕ್ತಿಗಳ ರೈಲು ಹಾಗೂ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತರಿಸಿಕೊಂಡು ತನ್ನ ಮನೆಯಲ್ಲಿ ಅಡಗಿಸಿಟ್ಟಿದ್ದ ಎಂದು ಹೇಳಿದರು.

ಹೊಸ ವರ್ಷಾಚರಣೆಗೆ ಪೂರೈಕೆ: ಆರೋಪಿಯ ಪ್ರಾಥಮಿಕ ವಿಚಾರಣೆಯಲ್ಲಿ, 2024ರ ಹೊಸ ವರ್ಷದ ಸಂದರ್ಭದಲ್ಲಿ ನಗರ ಮತ್ತು ನಗರದ ಹೊರವಲಯದಲ್ಲಿ ನಡೆಯುವ ಪಾರ್ಟಿಗಳು, ವಿದ್ಯಾರ್ಥಿಗಳು, ಐಟಿ-ಬಿಟಿ ಕಂಪನಿಗಳಿಗೆ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಬೆಲೆಗೆ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು.

ಪಿಜಿ ವಾಸಿಗಳ ಮಾಹಿತಿ ನೀಡಲು ಸೂಚನೆ : ಪಿಜಿಗಳಲ್ಲಿ ವಾಸವಾಗಿರುವವರ ಮಾಹಿತಿಯನ್ನು ಆ್ಯಪ್‌ ಮೂಲಕ ದಾಖಲಿಸಲು ಈಗಾಗಲೇ ಪಿಜಿ ಮಾಲೀಕರಿಗೆ ಸೂಚಿಸಲಾಗಿದೆ. ಅದೇ ರೀತಿ ಬಾಡಿಗೆ ಮನೆಗಳ ಮಾಲೀಕರು ತಮ್ಮ ಬಾಡಿಗೆದಾರರ ಆಧಾರ್‌ ಕಾರ್ಡ್‌ ಹಾಗೂ ಇತರೆ ಮಾಹಿತಿಯನ್ನು ಪಡೆದುಕೊಂಡು ಅಗತ್ಯಬಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗುತ್ತದೆ. ಸದ್ಯ ವಿದೇಶಿ ಪ್ರಜೆ ಬಂಧನದಲ್ಲಿ ಮನೆ ಮಾಲೀಕರನ್ನು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.