![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 13, 2023, 7:28 PM IST
ಅಹಮದಾಬಾದ್: ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಆಘಾತ ಎಂಬಂತೆ ಶಾಸಕ ಭೂಪೇಂದ್ರ ಭಯಾನಿ ಅವರು ವಿಧಾನಸಭಾ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ”ಜನ ಸೇವೆ ಮಾಡಲು ಆಪ್ ಸರಿಯಾದ ವೇದಿಕೆಯಲ್ಲ. ಶೀಘ್ರದಲ್ಲೇ ಆಡಳಿತಾರೂಢ ಬಿಜೆಪಿಗೆ ಸೇರುತ್ತೇನೆ” ಎಂದು ಹೇಳಿದ್ದಾರೆ.
ಜುನಾಗಢ ಜಿಲ್ಲೆಯ ವಿಸಾವದರ್ ಕ್ಷೇತ್ರದ ಶಾಸಕರಾಗಿದ್ದ ಭೂಪೇಂದ್ರ ಭಯಾನಿ ಅವರು ಸ್ಪೀಕರ್ ಶಂಕರ್ ಚೌಧರಿ ಅವರಿಗೆ ರಾಜೀನಾಮೆ ನೀಡಿದ್ದು, ನಿರ್ಧಾರದ ಹಿಂದೆ ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ.ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ ಎಂದು ಗುಜರಾತ್ ವಿಧಾನಸಭೆ ಕಾರ್ಯದರ್ಶಿ ಡಿಎಂ ಪಟೇಲ್ ಹೇಳಿದ್ದಾರೆ.
ಕಳೆದ ವರ್ಷದ ರಾಜ್ಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಐವರು ಆಪ್ ಶಾಸಕರ ಪೈಕಿ ಭೂಪೇಂದ್ರ ಭಯಾನಿ ಒಬ್ಬರಾಗಿದ್ದರು. ಬಿಜೆಪಿ 182 ಸದಸ್ಯ ಬಲದ ವಿಧಾನಸಭೆಯಲ್ಲಿ 156 ಸ್ಥಾನಗಳನ್ನು ಪಡೆಯುವ ಮೂಲಕ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.