![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 14, 2023, 11:22 AM IST
ಹೊಸದಿಲ್ಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮತಿ ಇರಾನಿ ಅವರು ಮಹಿಳಾ ಉದ್ಯೋಗಿಗಳಿಗೆ ಕಡ್ಡಾಯ ವೇತನ ಸಹಿತ ಮುಟ್ಟಿನ ರಜೆಯ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಬುಧವಾರ ರಾಜ್ಯಸಭೆಯಲ್ಲಿ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಹಿಳೆಯರಿಗೆ ಮುಟ್ಟು ಎನ್ನುವುದು ಜೀವನದ ನೈಸರ್ಗಿಕ ಭಾಗವಾಗಿದ್ದು, ಅದನ್ನು ವಿಶೇಷ ರಜೆ ನಿಬಂಧನೆಗಳ ಅಗತ್ಯವಿರುವ ಅಂಗವಿಕಲತೆ ಎಂದು ಪರಿಗಣಿಸಬಾರದು ಎಂದಿದ್ದಾರೆ.
“ಋತುಸ್ರಾವದ ಮಹಿಳೆಯಾಗಿ, ಋತುಚಕ್ರವು ಅಂಗವಿಕಲತೆ ಅಲ್ಲ, ಇದು ಮಹಿಳೆಯರ ಜೀವನ ಪ್ರಯಾಣದ ನೈಸರ್ಗಿಕ ಭಾಗವಾಗಿದೆ” ಎಂದು ಇರಾನಿ ಹೇಳಿದರು.
ಮುಟ್ಟಿನ ರಜೆಯು ಉದ್ಯೋಗಿಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದ ಅವರು, “ಋತುಸ್ರಾವವಾಗದ ಯಾರಾದರೂ ಮುಟ್ಟಿನ ಬಗ್ಗೆ ನಿರ್ದಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಎಂಬ ಕಾರಣಕ್ಕಾಗಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನಿರಾಕರಿಸುವ ಸಮಸ್ಯೆಗಳನ್ನು ನಾವು ಪ್ರಸ್ತಾಪಿಸಬಾರದು.” ಎಂದರು.
ಇದನ್ನೂ ಓದಿ:ʼJigarthanda Double Xʼ ಸಿನಿಮಾ ನೋಡುತ್ತೇನೆ: ಹಾಲಿವುಡ್ ನಟ ಈಸ್ಟ್ವುಡ್ ಟ್ವೀಟ್ ವೈರಲ್
ಮುಟ್ಟಿನ ನೈರ್ಮಲ್ಯದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕರಡು ರಾಷ್ಟ್ರೀಯ ನೀತಿಯನ್ನು ರೂಪಿಸುವುದಾಗಿ ಘೋಷಿಸಿದರು. ದೇಶದಾದ್ಯಂತ ಸರಿಯಾದ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಜಾಗೃತಿ ನೀಡುವ ಗುರಿಯನ್ನು ಇದು ಹೊಂದಿದೆ.
ಋತುಚಕ್ರದ ರಜೆಯ ವಿಷಯವು ಚರ್ಚೆಯ ವಿಚಾರವಾಗಿದೆ. ಸ್ಪೇನ್ ಇತ್ತೀಚೆಗೆ ಶಾಸನವನ್ನು ಅಂಗೀಕರಿಸಿದ್ದು ಮುಟ್ಟಿನ ಸಮಯದಲ್ಲಿ ಮಹಿಳೆಯರಿಗೆ ವೇತನ ಸಹಿತ ರಜೆ ನೀಡಲು ಅನುಮತಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.