Covid: ಕೇರಳದಲ್ಲಿ ಹೆಚ್ಚಿದ ಕೋವಿಡ್ ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
Team Udayavani, Dec 15, 2023, 11:47 PM IST
ಮಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ್ದ ಕೋವಿಡ್ ಇದೀಗ ಕೇರಳದಲ್ಲಿ ಮತ್ತೆ ಏರಿಕೆ ಕಂಡಿದೆ. ಸಿಂಗಾಪುರ, ಇಂಡೋನೇಷ್ಯಾ, ಮಲೇಷ್ಯಾ ಬಳಿಕ ಇದೀಗ ಕೇರಳದಲ್ಲಿ ಹೆಚ್ಚಿನ ಕೋವಿಡ್ ಪ್ರಕರಣ ದೃಢಪಡುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ನಿಗಾ ಇರಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ದ.ಕ. ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಕಳೆದೆರಡು ದಿನಗಳಿಂದ ತಾಲೂಕಿನ ವೈದ್ಯರ ಸಭೆ ನಡೆಯುತ್ತಿದೆ. ಗುರುವಾರ ಬೆಳ್ತಂಗಡಿ ಮತ್ತು ಬಂಟ್ವಾಳ, ಶುಕ್ರವಾರ ಮಂಗಳೂರಿನಲ್ಲಿ ವೈದ್ಯರ ಸಭೆ ನಡೆಸಲಾಗಿದೆ. ಶನಿವಾರ ಪುತ್ತೂರು ಮತ್ತು ಸುಳ್ಯ ತಾಲೂಕಿನ ವೈದ್ಯರ ಸಭೆ ನಡೆಸಲಾಗುತ್ತದೆ. ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ, ಐಎಲ್ಐ, ಸಾರಿ ಪ್ರಕರಣಗಳನ್ನು ನಿಗಾ ಇಡುವಂತೆ ವೈದ್ಯರಿಗೆ ಸೂಚನೆ ನೀಡಲಾಗಿದೆ.
ದ.ಕ. ಜಿಲ್ಲಾ ವೈದ್ಯಾಧಿಕಾರಿ ಡಾ| ತಿಮ್ಮಯ್ಯ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಬೆಂಗಳೂರು ಸಹಿತ ದೇಶದ ವಿವಿಧ ಕಡೆ ಕೋವಿಡ್ ಪ್ರಕರಣ ಹೆಚ್ಚು ದಾಖಲಾಗುತ್ತಿದೆ ಎಂಬ ವರದಿ ಇದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಅಂತಹ ಗಾಬರಿ ಪರಿಸ್ಥಿತಿ ಇಲ್ಲ. ಜ್ವರ, ಕೆಮ್ಮು, ಶೀತ ಪ್ರಕರಣ ಹೆಚ್ಚಾಗಿ ವರದಿಯಾಗುತ್ತಿಲ್ಲ. ಆದರೂ ಮುಂಜಾಗ್ರತ ದೃಷ್ಟಿಯಿಂದ ನಾವು ಸನ್ನದ್ಧರಾಗಿದ್ದೇವೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.