Sand: ಅನಧಿಕೃತ ಮರಳುಗಾರಿಕೆ- ಸರಕಾರ ಕ್ರಮ ಕೈಗೊಳ್ಳಲಿ
Team Udayavani, Dec 16, 2023, 12:23 AM IST
ಪುತ್ತೂರು: ನಾನ್ ಸಿಆರ್ಝಡ್ ಮೂಲಕ ಕಾನೂನುಬದ್ಧವಾಗಿ ಅಧೀಕೃತವಾಗಿ ಮರಳುಗಾರಿಕೆ ನಡೆಯುತ್ತಿದೆ. ನಾನ್ ಸಿ.ಆರ್.ಜಡ್ನಲ್ಲಿ ಮರಳಿಗೆ ಅಭಾವವಿಲ್ಲ. ಆದರೆ ಕಾನೂನು ಬಾಹಿರವಾಗಿ ನಡೆಯುವ ಮರಳುಗಾರಿಕೆಯಿಂದ ನಮಗೆ ತೊಂದರೆ ಆಗಿದೆ. ಕಾನೂನು ಬಾಹಿರವಾಗಿ ಅನಧಿಕೃತವಾಗಿ ನಡೆಯುವ ಮರಳುಗಾರಿಕೆ ವಿರುದ್ಧ ಸರಕಾರ ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ದ.ಕ. ಜಿಲ್ಲಾ ನಾನ್ ಸಿಆರ್ಝಡ್ ಮರಳುಗಾರಿಕೆ ಮಾರಾಟಗಾರರ ಸಂಘದ ಅಧ್ಯಕ್ಷ ದಿನೇಶ್ ಮೆದು ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಸರಕಾರದಿಂದ ಅಧಿಕೃತವಾಗಿ ಗುತ್ತಿಗೆ ಪಡೆದು ಮರಳು ಮಾಡುತ್ತಿರುವ ನಮ್ಮ ಬಗ್ಗೆ ಮಾಹಿತಿ ಬೇಕಾದಲ್ಲಿ ಗಣಿ ಇಲಾಖೆಯನ್ನು ಸಂಪರ್ಕಿಸಬಹುದು. ನಮ್ಮ ಎಲ್ಲ ಬ್ಲಾಕ್ಗಳಲ್ಲೂ ವೇ ಬ್ರಿಜ್ ಅಳವಡಿಸಲಾಗಿದೆ. ಅಲ್ಲಿಂದ ಜಿಪಿಎಸ್ ಮೂಲಕವೇ ಮರಳು ಸಾಗಾಟ ನಡೆಯುತ್ತದೆ. ನಮಗೆ ಕಿರುಕುಳ ಕೊಡುವುದು ಬಿಟ್ಟು ಕಾನೂನು ಬಾಹಿರವಾಗಿ ಸಾಗಾಟವಾಗುತ್ತಿರುವ ಮರಳುಗಾರಿಕೆ ಕುರಿತು ಕಠಿನ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು.
ನಮ್ಮ ಬ್ಲಾಕ್ಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರ ತನಕ ಕಾರ್ಯ ನಿರ್ವಹಿಸಲಾಗುತ್ತದೆ. ರಾತ್ರಿ ಹೊತ್ತು ಮರಳು ಸಾಗಾಟ ಮಾಡುವುದಿಲ್ಲ. ಆದರೆ ರಾತ್ರಿ ಸಮಯ ರಾಜಾರೋಷವಾಗಿ ಕಾನೂನು ಬಾಹಿರ ಮರಳು ಸಾಗಾಟ ನಡೆಯುತ್ತಿದೆ. ಅದನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು. ಇದರಿಂದ ಸರಕಾರದ ಬೊಕ್ಕಸಕ್ಕೂ ನಷ್ಟವಾಗುತ್ತಿದೆ ಎಂದವರು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಳ್ಳಿಪ್ಪಾಡಿ, ಉಪಾಧ್ಯಕ್ಷ ಮೋನು ಬೆಳ್ತಂಗಡಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?
Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು
Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು
Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Kalladka: ಹೊಟೇಲ್ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ
Ratan Tata; ಅಡುಗೆಯವರು, ನಾಯಿಗೂ ವಿಲ್ ಬರೆದಿರುವ ಟಾಟಾ!
Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ
T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್ ವಿಜಯ್ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.